Categories: ಕೋಲಾರ

ಸುಗಟೂರು ಸೊಸೈಟಿಗೆ 12.31 ಲಕ್ಷ ನಿವ್ವಳ ಲಾಭ:ಸಹಕಾರಿ ಬ್ಯಾಂಕುಗಳಲ್ಲಿಯೇ ಠೇವಣಿಗೆ ಭಾಸ್ಕರ್ ಮನವಿ

ಕೋಲಾರ: ರೈತರು ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಲು ಸಹಕಾರಿ ಸಂಘಗಳು ಸಹಕಾರಿಯಾಗಿದ್ದು ರೈತರು ಹೆಚ್ಚಿನ ಠೇವಣಿ ಇಟ್ಟರೆ ಡಿಸಿಸಿ ಬ್ಯಾಂಕ್ ವತಿಯಿಂದ ಹೆಚ್ಚಿನ ಸಾಲ ನೀಡಲು ಸಾಧ್ಯವಾಗುತ್ತದೆ ಎಂದು ಸುಗಟೂರು ವಿವಿಧ್ದೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ಅಧ್ಯಕ್ಷ ಅಂಕತಟ್ಟಿ ಎ.ಸಿ ಭಾಸ್ಕರ್ ಮನವಿ ಮಾಡಿದರು.

ತಾಲ್ಲೂಕಿನ ಸುಗಟೂರು ಗ್ರಾಮದಲ್ಲಿ ಶನಿವಾರ ನಡೆದ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಡಿಸಿಸಿ ಬ್ಯಾಂಕ್‌ ಸಹಕಾರ ಸಂಘಗಳ ಮೂಲಕ ಆರ್ಥಿಕ ನೆರವು ಕಲ್ಪಿಸುತ್ತಿದೆ. ಆದರೆ, ಜನರು ಸೌಲಭ್ಯ ಪಡೆದುಕೊಂಡು ತಮ್ಮ ಉಳಿತಾಯದ ಹಣವನ್ನು ವಾಣಿಜ್ಯ ಬ್ಯಾಂಕ್‌ಗಳಲ್ಲಿ ಇಟ್ಟಿದ್ದಾರೆ ಸಹಕಾರಿ ವ್ಯವಸ್ಥೆಯ ಉಳಿವಿಗಾಗಿ ಸಹಕಾರಿ ಬ್ಯಾಂಕ್ ಗಳಲ್ಲಿ ಠೇವಣಿ ಇಡುವಂತೆ ಮನವಿ ಮಾಡಿದರು.

ನಾಲ್ಕು ವರ್ಷಗಳ ಹಿಂದೆ ರೈತರಿಗೆ ಒಂದು ಎಕರೆಗೆ 50 ಸಾವಿರ ಶೂನ್ಯ ಬಡ್ಡಿಯಲ್ಲಿ ನೀಡುತ್ತಿರುವ ಸಾಲ ಇಂದಿನ ಬೆಲೆ ಏರಿಕೆ ಕಾಲದಲ್ಲಿ ಯಾವುದಕ್ಕೂ ಸಾಕಾಗುವುದಿಲ್ಲ ಎಕರೆಗೆ ಶೂನ್ಯ ಬಡ್ಡಿಯಲ್ಲಿ ಒಂದು ಲಕ್ಷ ನೀಡಲಾಗುತ್ತದೆ ಜೊತೆಗೆ ಹೊಸಬರಿಗೆ ಒಂದು ಲಕ್ಷ ನೀಡಲಾಗುತ್ತದೆ ಜೊತೆಗೆ ಡಿಸಿಸಿ ಬ್ಯಾಂಕ್ ವತಿಯಿಂದ ಹೆಚ್ಚಿನ ಸಾಲ ಸೌಲಭ್ಯಗಳನ್ನು ನೀಡಲಾಗುತ್ತದೆ ಮುಕ್ತವಾಗಿ ಹೊಸ ಷೇರುದಾರರನ್ನು ಸಂಘಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗುತ್ತದೆ ರೈತರು ಹೆಚ್ಚಿನ ಸದಸ್ಯರು ಆಗುವಂತೆ ಮನವಿ ಮಾಡಿದರು,

ರೇಷ್ಮೆ ಬೆಳೆಗಾರರ ಸಹಕಾರ ಸಂಘದ ಮೂಲಕ ವಿವಿಧ ಕಂಪನಿಗಳ ಮೂಲಕ 52 ಲಕ್ಷದಷ್ಟು ಗೊಬ್ಬರ ಮಾರಾಟ ಮಾಡಲಾಗಿದೆ ಕೆಸಿಸಿ ಸಾಲವಾಗಿ 540 ರೈತರಿಗೆ 7 ಕೋಟಿ, ರೇಷ್ಮೆ ಹುಳುಮನೆಗೆ 11 ರೈತರಿಗೆ 79.70 ಲಕ್ಷ ಜೊತೆಗೆ 372 ಸ್ತ್ರೀಶಕ್ತಿ ಸಂಘಗಳಿಗೆ 18.60 ಕೋಟಿ ವ್ಯವಹರಿಸಲಾಗಿದೆ ಇದರಲ್ಲಿ 6.50 ಕೋಟಿ ವಸೂಲಿಯಾಗಿದ್ದು ಉಳಿದ ಹಣವನ್ನು ಪಾವತಿಸಲು ಮನವಿ ಮಾಡಿದರು,

ಮಹಾಸಭೆಯಲ್ಲಿ ಸಂಘದ ಉಪಾಧ್ಯಕ್ಷೆ ರುಕ್ಕಮ್ಮ, ನಿರ್ದೇಶಕರಾದ ವೆಂಕಟರಾಮರೆಡ್ಡಿ, ಅಮರನಾರಾಯಣಸ್ವಾಮಿ, ವೆಂಕಟರಾಮಪ್ಪ, ಎಂ.ಎಸ್.ರಮಣಾರೆಡ್ಡಿ, ಡಿ.ಗೋಪಾಲಪ್ಪ, ವೆಂಕಟಮ್ಮ, ಸವಿತಾ ಎನ್. ಶೆಟ್ಟಿ, ವೃತ್ತಿಪರ ನಿರ್ದೇಶಕ ಎ.ಎಂ.ಹನುಮೇಗೌಡ, ಸೈಯದ್ ಸಿರಾಜ್. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಂ.ಪುಟ್ಟರಾಜು, ಹಿರಿಯ ಮಾರಾಟ ಗುಮಾಸ್ತರಾದ ಎಸ್.ವಿ.ರವಿಚಂದ್ರ,ಎಸ್. ನಾಗೇಶ್, ಆರ್. ಸುಶ್ಮಿತ, ಮಹೀದ್ದುಲ್ಲಾ ಷರೀಫ್ ಷೇರುದಾರರಾದ ಚಂದ್ರೇಗೌಡ, ಟಿ.ಎಂ.ವೆಂಕಟೇಶ್, ಟಿ.ಎನ್.ರವಿ, ಗೋಪಾಲಗೌಡ, ವಿ.ನಾರಾಯಣರೆಡ್ಡಿ, ನಾಗಪ್ಪ, ರಾಘವೇಂದ್ರ ಮುಂತಾದವರು ಇದ್ದರು

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

21 hours ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

21 hours ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

1 day ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

2 days ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

2 days ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

2 days ago