ಸುಗಮ್ಯ ಭಾರತ ಅಭಿಯಾನದಡಿ ವಿಕಲಚೇತನರು ಸರ್ಕಾರಿ ಹಾಗೂ ಸಾರ್ವಜನಿಕ ಕಟ್ಟಡಗಳಲ್ಲಿ ಮತ್ತು ಹೊರಾಂಗಣ ಮತ್ತು ಒಳಾಂಗಣ ಪ್ರದೇಶದಲ್ಲಿ ಯಾವುದೇ ರೀತಿಯ ಅಡೆ ತಡೆಗಳಿಲ್ಲದೆ ಸುಗಮವಾಗಿ ಸಂಚರಿಸಲು ಸುಗಮ್ಯ ಭಾರತ ಅಭಿಯಾನದ ಉದ್ದೇಶವಾಗಿದ್ದು ಈ ಅಭಿಯಾನಕ್ಕೆ ಇಂದು ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿಗಳಾದ ಎ.ಬಿ ಬಸವರಾಜು ಅವರು ಚಾಲನೆ ನೀಡಿದರು.
ಈಗಾಗಲೇ ರಾಜ್ಯಾದ್ಯಂತ ಈ ಸುಗಮ್ಯ ಯಾತ್ರಾ ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿದೆ. ಜಿಲ್ಲೆಯ ಎಲ್ಲಾ ಸರ್ಕಾರಿ ಹಾಗೂ ಸಾರ್ವಜನಿಕ ಕಟ್ಟಡಗಳಲ್ಲಿ ಮೂಲಭೂತ ಸೌಕರ್ಯಗಳಾದ ಶೌಚಾಲಯ, ಇಳಿಜಾರು ಮೆಟ್ಟಿಲುಗಳು ಮತ್ತು ಸೂಚನಾ ಫಲಕಗಳನ್ನು ಅಚ್ಚುಕಟ್ಟಾಗಿ ಒಳಗೊಂಡಿರಬೇಕು. ವಿಕಲಚೇತನ ವ್ಯಕ್ತಿಗಳ ಬಗ್ಗೆ ಮಾಹಿತಿಯನ್ನು ಕ್ರೋಢೀಕರಿಸಲು ಕೇಂದ್ರ ಸರ್ಕಾರವು ಕರ್ನಾಟಕ ರಾಜ್ಯದ The Association of People with Disability(ಅಂಗವೈಕಲ್ಯ ಹೊಂದಿರುವ ವ್ಯಕ್ತಿಗಳ ಸಂಘ) ಬೆಂಗಳೂರು ಸಂಸ್ಥೆಯೊಂದಿಗೆ ಈ ಒಪ್ಪಂದ ಮಾಡಿಕೊಂಡಿದೆ. ಅದರಂತೆ ಇದರ ಬಗ್ಗೆ ನಿಖರವಾದ ಮಾಹಿತಿಯನ್ನು ಸಂಗ್ರಹಿಸಲು Yes to Access ಎಂಬ ಅಪ್ಲಿಕೇಶನ್ ಅನ್ನು ಅಭಿವೃದ್ಧಿಪಡಿಸಿದ್ದು, ಎಲ್ಲರೂ ಈ ಅಪ್ಲಿಕೇಶನ್ ಅನ್ನು ತಮ್ಮ ಮೊಬೈಲ್ ನಲ್ಲಿ ಸುಲಭವಾಗಿ ಬಳಸಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಈ ಅಪ್ಲಿಕೇಶನ್ ಅನ್ನು APD ಸಂಸ್ಥೆಯ ಗಿರಿಜಮ್ಮ ಸ್ಥಳದಲ್ಲಿಯೇ ಪ್ರಾಯೋಗಿಕವಾಗಿ ಯಾವ ರೀತಿ ಬಳಸಬಹುದು ಎಂಬ ಮಾಹಿತ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಜಗದೀಶ್ ಎನ್.ಎಂ, ಜಿಲ್ಲಾ ಅಂಗವಿಕಲ ಪುನರ್ವಸತಿ ಕೇಂದ್ರದ ನೋಡಲ್ ಅಧಿಕಾರಿ ಸುನೀಲ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…
ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…
ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…
ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…
ಕಳೆದ 13 ವರ್ಷಗಳಿಂದ ಕೋಮಾ ಸ್ಥಿತಿಯಲ್ಲಿ ಬದುಕುತ್ತಿದ್ದ 32 ವರ್ಷ ವಯಸ್ಸಿನ ಹರೀಶ್ ರಾಣಾ ಅವರಿಗೆ ಕುಟುಂಬಸ್ಥರು ಭಾವುಕ ವಿದಾಯ…