ಸುಗಮ್ಯ ಭಾರತ ಅಭಿಯಾನಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಸುಗಮ್ಯ ಭಾರತ ಅಭಿಯಾನದಡಿ ವಿಕಲಚೇತನರು ಸರ್ಕಾರಿ ಹಾಗೂ ಸಾರ್ವಜನಿಕ ಕಟ್ಟಡಗಳಲ್ಲಿ ಮತ್ತು ಹೊರಾಂಗಣ ಮತ್ತು ಒಳಾಂಗಣ ಪ್ರದೇಶದಲ್ಲಿ ಯಾವುದೇ ರೀತಿಯ ಅಡೆ ತಡೆಗಳಿಲ್ಲದೆ ಸುಗಮವಾಗಿ ಸಂಚರಿಸಲು ಸುಗಮ್ಯ ಭಾರತ ಅಭಿಯಾನದ ಉದ್ದೇಶವಾಗಿದ್ದು ಈ ಅಭಿಯಾನಕ್ಕೆ ಇಂದು ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿಗಳಾದ ಎ.ಬಿ ಬಸವರಾಜು ಅವರು ಚಾಲನೆ ನೀಡಿದರು.

ಈಗಾಗಲೇ ರಾಜ್ಯಾದ್ಯಂತ ಈ ಸುಗಮ್ಯ ಯಾತ್ರಾ ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿದೆ. ಜಿಲ್ಲೆಯ ಎಲ್ಲಾ ಸರ್ಕಾರಿ ಹಾಗೂ ಸಾರ್ವಜನಿಕ ಕಟ್ಟಡಗಳಲ್ಲಿ ಮೂಲಭೂತ ಸೌಕರ್ಯಗಳಾದ ಶೌಚಾಲಯ, ಇಳಿಜಾರು ಮೆಟ್ಟಿಲುಗಳು ಮತ್ತು ಸೂಚನಾ ಫಲಕಗಳನ್ನು ಅಚ್ಚುಕಟ್ಟಾಗಿ ಒಳಗೊಂಡಿರಬೇಕು. ವಿಕಲಚೇತನ ವ್ಯಕ್ತಿಗಳ ಬಗ್ಗೆ ಮಾಹಿತಿಯನ್ನು ಕ್ರೋಢೀಕರಿಸಲು ಕೇಂದ್ರ ಸರ್ಕಾರವು ಕರ್ನಾಟಕ ರಾಜ್ಯದ The Association of People with Disability(ಅಂಗವೈಕಲ್ಯ ಹೊಂದಿರುವ ವ್ಯಕ್ತಿಗಳ ಸಂಘ) ಬೆಂಗಳೂರು ಸಂಸ್ಥೆಯೊಂದಿಗೆ ಈ ಒಪ್ಪಂದ ಮಾಡಿಕೊಂಡಿದೆ. ಅದರಂತೆ ಇದರ ಬಗ್ಗೆ ನಿಖರವಾದ ಮಾಹಿತಿಯನ್ನು ಸಂಗ್ರಹಿಸಲು Yes to Access ಎಂಬ ಅಪ್ಲಿಕೇಶನ್ ಅನ್ನು ಅಭಿವೃದ್ಧಿಪಡಿಸಿದ್ದು, ಎಲ್ಲರೂ ಈ ಅಪ್ಲಿಕೇಶನ್ ಅನ್ನು ತಮ್ಮ ಮೊಬೈಲ್ ನಲ್ಲಿ ಸುಲಭವಾಗಿ ಬಳಸಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಈ ಅಪ್ಲಿಕೇಶನ್ ಅನ್ನು APD ಸಂಸ್ಥೆಯ ಗಿರಿಜಮ್ಮ ಸ್ಥಳದಲ್ಲಿಯೇ ಪ್ರಾಯೋಗಿಕವಾಗಿ ಯಾವ ರೀತಿ ಬಳಸಬಹುದು ಎಂಬ ಮಾಹಿತ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಜಗದೀಶ್ ಎನ್.ಎಂ, ಜಿಲ್ಲಾ ಅಂಗವಿಕಲ ಪುನರ್ವಸತಿ ಕೇಂದ್ರದ ನೋಡಲ್ ಅಧಿಕಾರಿ ಸುನೀಲ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

8 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

9 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

10 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

11 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

18 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago