Categories: ಲೇಖನ

ಸುಡಾನ್ ದೇಶದ ರಕ್ಕಸ ಅಂತರ್ಯುದ್ಧದ ಭೀಕರ ಘಟನೆಗಳು….

ಆಫ್ರಿಕಾದ ಸುಡಾನ್ ನಿಂದ ಮನಕಲಕುವ ಸುದ್ದಿ ಪ್ರಸಾರವಾಗುತ್ತಿದೆ. ಅಲ್ಲಿನ ಆಂತರಿಕ ಯುದ್ಧದಿಂದಾಗಿ ಸೂಡಾನ್ ಕೇವಲ ರಕ್ತಸಿಕ್ತವಾಗಿ ಮಾತ್ರವಲ್ಲ ಅತ್ಯಂತ ಅಮಾನವೀಯವಾಗಿ, ಇಡೀ ನಾಗರಿಕ ಸಮಾಜ ತಲೆತಗ್ಗಿಸುವಂತ ಘಟನೆಗಳು ನಡೆಯುತ್ತಿದೆ….

ಈ ರೀತಿಯ ಘಟನೆಗಳು ವಿಶ್ವ ಇತಿಹಾಸದಲ್ಲಿ, ಅದರಲ್ಲೂ ಯುದ್ಧ ಮತ್ತು ದಾಳಿಗಳ ಸಮಯದಲ್ಲಿ ವಿಶೇಷವೇನು ಅಲ್ಲ. ಸಾಮಾನ್ಯವಾಗಿ ಮಹಿಳೆಯರನ್ನು ಲೈಂಗಿಕವಾಗಿ ಶೋಷಿಸುವುದು ಯುದ್ಧಗಳ ಒಂದು ಅನಧಿಕೃತ, ಅನೀತಿಯುತ, ಅನೈತಿಕತೆಯ ಭಾಗವೇ ಆಗಿದೆ…..

ಆದರೆ ಸುಡಾನ್ ನಲ್ಲಿ ಮಹಿಳೆಯರು ತಮ್ಮ ಮಕ್ಕಳು ಮತ್ತು ವೃದ್ಧ ಪೋಷಕರನ್ನು ಸಲುಹಲು ಸರತಿ ಸಾಲಿನಲ್ಲಿ ನಿಂತು, ಸೈನಿಕರಿಗೆ ಅವರ ಒತ್ತಡ ಮತ್ತು ಬಲವಂತಕ್ಕೆ ಮಣಿದು ತಮ್ಮ ದೇಹವನ್ನು ಅರ್ಪಿಸಿ, ತದನಂತರ ಅವರು ನೀಡುವ ಹಣ, ಆಹಾರ ಮತ್ತು ಇತರೆ ವಸ್ತುಗಳನ್ನು ಪಡೆದು ಮನೆಗೆ ತೆರಳುತ್ತಿದ್ದಾರೆ. ಈ ರೀತಿಯ ಸಾಕಷ್ಟು ಘಟನೆಗಳು ನಡೆಯುತ್ತಿರುವುದಾಗಿ ಅಲ್ಲಿನ ಮಹಿಳೆಯರು ದೂರುತ್ತಿದ್ದಾರೆ…..

ಹೀಗೆ ಲೈಂಗಿಕ ಶೋಷಣೆಗೆ ಒಪ್ಪದ ಒಬ್ಬ ಮಹಿಳೆಯ ಕಾಲುಗಳನ್ನು ಸುಟ್ಟು ಹಾಕಲಾಯಿತು…..

ಮೊದಲನೇ ಮಹಾಯುದ್ಧ, ಎರಡನೇ ಮಹಾಯುದ್ಧ, ಮುಂದೆ ಆಗಾಗ ನಡೆದ ಎಲ್ಲಾ ಯುದ್ದಗಳಲ್ಲೂ ಸಹ ಮಹಿಳೆಯರನ್ನು ಅಪಹರಿಸಿ ಅತ್ಯಾಚಾರಕ್ಕೆ ಒಳಪಡಿಸಲಾಗುತ್ತದೆ. ಹಿಂದಿನ ಎಲ್ಲಾ ದೇಶಗಳ, ಎಲ್ಲಾ ಕಾಲದ, ಯುದ್ಧಗಳಲ್ಲೂ ಈ ರೀತಿಯ ಘಟನೆಗಳು ನಡೆಯುತ್ತಲೇ ಇದೆ……

ಕನಿಷ್ಠ ಕೊರೊನಾ ನಂತರದಲ್ಲಾದರೂ ಮಾನವ ಜಗತ್ತು ಕನಿಷ್ಠ ಮಾನವೀಯ ಪ್ರಜ್ಞೆ ಮೆರೆಯಬಹುದು ಎಂಬ ನಿರೀಕ್ಷೆಯು ಸುಳ್ಳಾಗಿದೆ. ಅಂದು ಒಂದು ಸಣ್ಣ ರೋಗಾಣುವಿನ ಕಾರಣಕ್ಕಾಗಿ ಭಯಬಿದ್ದು, ಸಾವಿಗೆ ಅಂಜಿ ಇಡೀ ವಿಶ್ವವೇ ಲಾಕ್ ಡೌನ್ ಆಗಿತ್ತು, ಜೀವ ಉಳಿದರೆ ಸಾಕು ಎನ್ನುವ ಪರಿಸ್ಥಿತಿ ಉಂಟಾಗಿತ್ತು. ಅದು ಮುಗಿದು ಕೇವಲ ಎರಡು ಮೂರು ವರ್ಷಗಳಷ್ಟೇ ಆಗಿದೆ. ಅಷ್ಟರಲ್ಲಾಗಲೇ ರಷ್ಯಾ ಉಕ್ರೇನ್, ಇಸ್ರೇಲ್ ಹಮಾಸ್ ಯುದ್ಧ, ಕೆಲವು ಕಡೆ ಅನೇಕ ಭಯೋತ್ಪಾದಕ ಕೃತ್ಯಗಳು ನಡೆಯುತ್ತಲೇ ಇದೆ. ನಮ್ಮ ಕಾಶ್ಮೀರದಲ್ಲೂ ಸಹ ಇತ್ತೀಚೆಗೆ ಭಯೋತ್ಪಾದನೆ ಕೃತ್ಯಗಳು ಹೆಚ್ಚಾಗುತ್ತಿದೆ. ಚೀನಾ ಸಹ ತೈವಾನ್ ಆಕ್ರಮಿಸಲು ಹೊಂಚು ಹಾಕುತ್ತಿದೆ……

ಈ ನಡುವೆ ಆಫ್ರಿಕಾದ ಕೆಲವು ದೇಶಗಳಲ್ಲಿ ಹಿಂದಿನಿಂದಲೂ ಇದ್ದ ಅಂತರಿಕ ಯುದ್ಧ ಮತ್ತೆ ಶುರುವಾಗಿದೆ. ಶಿಲಾಯುಗ ಕಾಲದ ಮಾನವನನ್ನು ಅನಾಗರಿಕ ಎಂದು ಕರೆಯಲಾಗುತ್ತಿತ್ತು. ಅನಂತರದ ಇತಿಹಾಸವನ್ನು ನಾಗರಿಕ ಇತಿಹಾಸ ಎನ್ನಲಾಗುತ್ತದೆ….

ಇದು ನಿಜವೇ, ಖಂಡಿತ ಇಲ್ಲ. ಆಗಿನ ಅನಾಗರಿಕ ಮಾನವ ತನ್ನ ಅಜ್ಞಾನದಿಂದ, ಅನುಭವದ ಕೊರತೆಯಿಂದ, ತನ್ನೊಳಗಿನ ಪಶುತ್ವದಿಂದ ಅಪ್ರಜ್ಞಾಪೂರ್ವಕವಾಗಿ ಆ ರೀತಿಯ ದುಷ್ಕೃತ್ಯಗಳಲ್ಲಿ ಭಾಗವಹಿಸಿರಬಹುದು. ಆದರೆ ಇಷ್ಟೆಲ್ಲಾ ಅನುಭವ, ತಂತ್ರಜ್ಞಾನ, ಧರ್ಮ, ಸಂಸ್ಕಾರ, ನಾಗರಿಕತೆ, ಅಭಿವೃದ್ಧಿ ಎಲ್ಲವೂ ಆದ ನಂತರ, ನೆಮ್ಮದಿಯಿಂದ ಜೀವನ ನಡೆಸಲು ಬೇಕಾದ ಎಲ್ಲಾ ಸೌಕರ್ಯಗಳು ಪಡೆದ ನಂತರವೂ, ಈ ರೀತಿ ಸರತಿ ಸಾಲಿನಲ್ಲಿ ಹೆಣ್ಣನ್ನು ನಿಲ್ಲಿಸಿ, ಅತ್ಯಾಚಾರ ಮಾಡಿ, ಆಕೆಗೆ ಆಹಾರ ನೀಡುವುದು ಬಹುಶಃ ಅನಾಗರಿಕತೆಗಿಂತಲೂ ಹೀನಾಯವಾದ ಮನಸ್ಥಿತಿ ಎಂದು ಕರೆಯಬೇಕಾಗುತ್ತದೆ…..

ಈಗಿನ ಸಮಾಜವನ್ನು ಅಥವಾ ಕಾಲವನ್ನು ಕ್ರೌರ್ಯಯುಗ ಎಂದು ಕರೆಯಬಹುದೇನೋ. ರಷ್ಯಾ, ಉಕ್ರೇನಿನ ಜನವಸತಿ ಪ್ರದೇಶಗಳು, ಶಾಲೆಗಳು, ಆಸ್ಪತ್ರೆಗಳು ಮುಂತಾದ ಸಾರ್ವಜನಿಕ ಪ್ರದೇಶಗಳ ಮೇಲೆ ಮಿಸೈಲ್ ದಾಳಿ ನಡೆಸಿ ಸಾವಿರಾರು ಜನರನ್ನು ಕೊಲ್ಲುತ್ತಿದೆ. ಹಾಗೆಯೇ ಹಮಾಸ್ ನವರು, ಇಸ್ರೇಲ್ ಒಳಗೆ ನುಗ್ಗಿ ಸಿಕ್ಕ ಸಿಕ್ಕ ಅಮಾಯಕರನ್ನು, ಅಸಹಾಯಕರನ್ನು ಇರಿದುಕೊಂದರು. ಅದಕ್ಕೆ ಪ್ರತಿಯಾಗಿ ಇಸ್ರೇಲ್ ಸಹ ಗಾಜಾ ಪ್ರದೇಶದ ಮಕ್ಕಳ ಆಸ್ಪತ್ರೆಯ ಮೇಲೂ ಬಾಂಬ್ ದಾಳಿ ನಡೆಸಿ ಕ್ರೌರ್ಯ ಮೆರೆದಿದೆ. ಈಗಲೂ ಗಾಜಾ ಪ್ರದೇಶದಲ್ಲಿ ಎಷ್ಟೋ ಜನ ಹಸಿವಿನಿಂದಲೇ ಸಾಯುತ್ತಿದ್ದಾರೆ…..

ಕಾರಣಗಳು, ನೆಪಗಳು ಏನೇ ಇರಲಿ, ಕ್ರೌರ್ಯವಂತೂ ನಡೆಯುತ್ತಲೇ ಇದೆ. ವಿಶ್ವ ಎಷ್ಟೇ ಮುಂದುವರಿದರೂ ಏನು ಪ್ರಯೋಜನ. ನಮ್ಮ ಕಣ್ಣೆದುರೇ ಅಮಾನವೀಯ ಘಟನೆಗಳು ನಡೆಯುವಾಗ, ವಿಶ್ವದ ಅನೇಕ ದೇಶಗಳು ಅದನ್ನು ಮೌನವಾಗಿ ಸಹಿಸಿಕೊಂಡಿರುವಾಗ, ವಿಶ್ವಸಂಸ್ಥೆ ಅಸಹಾಯಕತೆಯಿಂದ ನೋಡುತ್ತಿರುವಾಗ, ಇದನ್ನು ನಾಗರಿಕ ಸಮಾಜ ಎನ್ನಲು ಮನಸ್ಸಾಗೋದಿಲ್ಲ…..

ಆದ್ದರಿಂದ ಕ್ರೌರ್ಯಯುಗದ ಅಂತಿಮ ಕಾಲಘಟ್ಟದಲ್ಲಿ ನಾವಿದ್ದೇವೆ. ಮೂರನೇ ಮಹಾಯುದ್ಧ ಮುಂದೆಂದಾದರು ಸಂಭವಿಸಿದರೆ ಅದು ಈ ಯುಗದ ಅಂತ್ಯವಾಗಬಹುದೇನೋ,…..

ಹಾಗಾಗದಿರಲಿ, ಮಾನವೀಯ ಧರ್ಮ ಈ ಜಗತ್ತಿನಲ್ಲಿ ಮತ್ತೆ ಪುನರ್ ಸ್ಥಾಪಿತವಾಗಲಿ ಎಂದು ಆಶಿಸುತ್ತಾ……..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ, ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ, ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

20 minutes ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

7 hours ago

ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಕಾಮಕಾಂಡ ಬಯಲು: ದೂರು ನೀಡಲು ಬಂದ ಮಹಿಳೆಯನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಸಂಚು: ಸಂತ್ರಸ್ತೆಯ ಅಪ್ರಾಪ್ತ ಮಗಳಿಗೂ ಇನ್ಸ್‌ಪೆಕ್ಟರ್ ಬೆದರಿಕೆ ಆರೋಪ

ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…

8 hours ago

ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಅಳಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…

8 hours ago

ನೈತಿಕತೆ, ಸಾಹಿತ್ಯ ಮತ್ತು ಜ್ಞಾನಪೀಠ ಪ್ರಶಸ್ತಿ…

ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…

10 hours ago

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

21 hours ago