ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವತಿಯಿಂದ ಜಿಎಸ್ ಎಲ್ ವಿಯ ಉಪಗ್ರಹ ಉಡಾವಣಾ ವಾಹನವು ತನ್ನ 15ನೇ ಹಾರಾಟದಲ್ಲಿ 2,232 ಕೆಜಿ ತೂಕದ ನ್ಯಾವಿಗೇಷನ್ ಉಪಗ್ರಹ NVS-01ನ್ನು ಇಂದು ಬೆಳಿಗ್ಗೆ 10.42ಕ್ಕೆ ಆಂಧ್ರ ಪ್ರದೇಶದ ಶ್ರೀ ಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ಮಾಡಲಾಗಿದೆ.
ರಾಕೆಟ್ ಉಡಾವಣೆಯಾದ 20 ನಿಮಿಷಗಳ ನಂತರ ಸುಮಾರು 251 ಕಿಮೀ ಎತ್ತರದಲ್ಲಿ ಜಿಯೋಸಿಂಕ್ರೋನಸ್ ವರ್ಗಾವಣೆ ಕಕ್ಷೆಯಲ್ಲಿ ಉಪಗ್ರಹವನ್ನು ಸೇರಿಸಿದೆ ಎಂದು ಇಸ್ರೋ ಮೂಲಗಳಿಂದ ತಿಳಿದುಬಂದಿದೆ.
ನ್ಯಾವಿಗೇಷನ್ ಸೇವೆಗಳನ್ನು ಸುಧಾರಿಸಲು ಮತ್ತು ವ್ಯವಸ್ಥೆಗೆ ಹೊಸ ವಿಚಾರಗಳನ್ನು ಪರಿಚಯಿಸಲು ಈ ಉಪಗ್ರಹ ಉಡಾವಣೆ ಮಾಡಲಾಗಿದೆ.
ಉಪಗ್ರಹ ಕಕ್ಷೆ ಸೇರುತ್ತಿದ್ದಂತೆ ವಿಜ್ಞಾನಿಗಳ ತಂಡದಲ್ಲಿ ಸಂಭ್ರಮ ಮನೆ ಮಾಡಿತು. ಪರಸ್ಪರ ಹಸ್ತಲಾಘವ ಮಾಡಿ ಶುಭ ಕೋರಿದರು. ಮಿಷನ್ ಯಶಸ್ವಿಯಾದ ಹಿನ್ನೆಲೆಯಲ್ಲಿ ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಇಡೀ ತಂಡವನ್ನು ಅಭಿನಂದಿಸಿದ್ದಾರೆ.
ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…
ನೀಟ್ ಪ್ರವೇಶ ಪರೀಕ್ಷೆ.... ಆಡಳಿತಗಾರ ರಾಜಕಾರಣಿಗಳ ಸಂಪೂರ್ಣ ವೈಫಲ್ಯ, ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ, ಪೋಷಕರ ಅತಿಯಾದ ದುರಾಸೆ, ವಿದ್ಯಾರ್ಥಿಗಳ ನಿರ್ಲಜ್ಜತೆ…
ರಾಮನಗರ: ಮುತ್ತತ್ತಿಯ ಕಾವೇರಿ ನದಿಯಲ್ಲಿ ಫೋಟೋ ತೆಗೆಯಲು ನೀರಿಗೆ ಇಳಿದ ವೇಳೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಐವರು ನೀರಿನಲ್ಲಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…
ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…
ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…