ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವತಿಯಿಂದ ಜಿಎಸ್ ಎಲ್ ವಿಯ ಉಪಗ್ರಹ ಉಡಾವಣಾ ವಾಹನವು ತನ್ನ 15ನೇ ಹಾರಾಟದಲ್ಲಿ 2,232 ಕೆಜಿ ತೂಕದ ನ್ಯಾವಿಗೇಷನ್ ಉಪಗ್ರಹ NVS-01ನ್ನು ಇಂದು ಬೆಳಿಗ್ಗೆ 10.42ಕ್ಕೆ ಆಂಧ್ರ ಪ್ರದೇಶದ ಶ್ರೀ ಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ಮಾಡಲಾಗಿದೆ.
ರಾಕೆಟ್ ಉಡಾವಣೆಯಾದ 20 ನಿಮಿಷಗಳ ನಂತರ ಸುಮಾರು 251 ಕಿಮೀ ಎತ್ತರದಲ್ಲಿ ಜಿಯೋಸಿಂಕ್ರೋನಸ್ ವರ್ಗಾವಣೆ ಕಕ್ಷೆಯಲ್ಲಿ ಉಪಗ್ರಹವನ್ನು ಸೇರಿಸಿದೆ ಎಂದು ಇಸ್ರೋ ಮೂಲಗಳಿಂದ ತಿಳಿದುಬಂದಿದೆ.
ನ್ಯಾವಿಗೇಷನ್ ಸೇವೆಗಳನ್ನು ಸುಧಾರಿಸಲು ಮತ್ತು ವ್ಯವಸ್ಥೆಗೆ ಹೊಸ ವಿಚಾರಗಳನ್ನು ಪರಿಚಯಿಸಲು ಈ ಉಪಗ್ರಹ ಉಡಾವಣೆ ಮಾಡಲಾಗಿದೆ.
ಉಪಗ್ರಹ ಕಕ್ಷೆ ಸೇರುತ್ತಿದ್ದಂತೆ ವಿಜ್ಞಾನಿಗಳ ತಂಡದಲ್ಲಿ ಸಂಭ್ರಮ ಮನೆ ಮಾಡಿತು. ಪರಸ್ಪರ ಹಸ್ತಲಾಘವ ಮಾಡಿ ಶುಭ ಕೋರಿದರು. ಮಿಷನ್ ಯಶಸ್ವಿಯಾದ ಹಿನ್ನೆಲೆಯಲ್ಲಿ ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಇಡೀ ತಂಡವನ್ನು ಅಭಿನಂದಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…
ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…
ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…