ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಮೇ 13ರಂದು ಅಧಿಕಾರದಿಂದ ನಿವೃತ್ತರಾಗಲಿದ್ದಾರೆ. ಈ ಹಿನ್ನೆಲೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ತಮ್ಮ ಉತ್ತರಾಧಿಕಾರಿಯಾಗಿ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಹೆಸರನ್ನು ಶಿಫಾರಸು ಮಾಡಿದ್ದಾರೆ.
ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರು 53ನೇ ಸಿಜೆಐ ಆಗಿ 6 ತಿಂಗಳ ಅಧಿಕಾರಾವಧಿಯನ್ನು ಹೊಂದಿರುತ್ತಾರೆ ಮತ್ತು ನವೆಂಬರ್ 23, 2025ರಂದು ನಿವೃತ್ತರಾಗಲಿದ್ದಾರೆ.
ನ್ಯಾಯಮೂರ್ತಿ ಗವಾಯಿ ಅವರು ಮೇ 29, 2019ರಂದು ಭಾರತದ ಸುಪ್ರೀಂ ಕೋರ್ಟ್ನ ನ್ಯಾಯಾಧೀಶರಾಗಿ ಬಡ್ತಿ ಪಡೆದರು. ಅವರು ನವೆಂಬರ್ 2003ರಲ್ಲಿ ಬಾಂಬೆ ಹೈಕೋರ್ಟ್ನ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು ಮತ್ತು ನವೆಂಬರ್ 2005ರಲ್ಲಿ ಖಾಯಂ ನ್ಯಾಯಾಧೀಶರಾದರು.
ನ್ಯಾಯಾಧೀಶರಾಗುವ ಮುನ್ನ ಅವರು ಸಾಂವಿಧಾನಿಕ ಕಾನೂನು ಮತ್ತು ಆಡಳಿತ ಕಾನೂನುಗಳಲ್ಲಿ ವಕೀಲಿಕೆ ಮಾಡಿದರು. ನಾಗ್ಪುರ ಮುನ್ಸಿಪಲ್ ಕಾರ್ಪೊರೇಷನ್, ಅಮರಾವತಿ ಮುನ್ಸಿಪಲ್ ಕಾರ್ಪೊರೇಷನ್ ಮತ್ತು ಅಮರಾವತಿ ವಿಶ್ವವಿದ್ಯಾಲಯದ ಸ್ಥಾಯಿ ಸಲಹೆಗಾರರಾಗಿ ಕಾರ್ಯನಿರ್ವಹಿಸಿದರು. ಆಗಸ್ಟ್ 1992ರಲ್ಲಿ ಬಾಂಬೆ ಹೈಕೋರ್ಟ್ನ ನಾಗ್ಪುರ ಪೀಠದಲ್ಲಿ ಸಹಾಯಕ ಸರ್ಕಾರಿ ವಕೀಲರಾಗಿ ಮತ್ತು ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ನೇಮಕಗೊಂಡರು. ಜುಲೈ 1993 ರವರೆಗೆ ಈ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದರು. ಜನವರಿ 17, 2000ರಂದು ನಾಗ್ಪುರ ಪೀಠದ ಸರ್ಕಾರಿ ವಕೀಲರಾಗಿ ಮತ್ತು ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಅವರು ನೇಮಕಗೊಂಡರು.
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…
ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…
ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…
ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…
ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…