ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಮೇ 13ರಂದು ಅಧಿಕಾರದಿಂದ ನಿವೃತ್ತರಾಗಲಿದ್ದಾರೆ. ಈ ಹಿನ್ನೆಲೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ತಮ್ಮ ಉತ್ತರಾಧಿಕಾರಿಯಾಗಿ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಹೆಸರನ್ನು ಶಿಫಾರಸು ಮಾಡಿದ್ದಾರೆ.
ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರು 53ನೇ ಸಿಜೆಐ ಆಗಿ 6 ತಿಂಗಳ ಅಧಿಕಾರಾವಧಿಯನ್ನು ಹೊಂದಿರುತ್ತಾರೆ ಮತ್ತು ನವೆಂಬರ್ 23, 2025ರಂದು ನಿವೃತ್ತರಾಗಲಿದ್ದಾರೆ.
ನ್ಯಾಯಮೂರ್ತಿ ಗವಾಯಿ ಅವರು ಮೇ 29, 2019ರಂದು ಭಾರತದ ಸುಪ್ರೀಂ ಕೋರ್ಟ್ನ ನ್ಯಾಯಾಧೀಶರಾಗಿ ಬಡ್ತಿ ಪಡೆದರು. ಅವರು ನವೆಂಬರ್ 2003ರಲ್ಲಿ ಬಾಂಬೆ ಹೈಕೋರ್ಟ್ನ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು ಮತ್ತು ನವೆಂಬರ್ 2005ರಲ್ಲಿ ಖಾಯಂ ನ್ಯಾಯಾಧೀಶರಾದರು.
ನ್ಯಾಯಾಧೀಶರಾಗುವ ಮುನ್ನ ಅವರು ಸಾಂವಿಧಾನಿಕ ಕಾನೂನು ಮತ್ತು ಆಡಳಿತ ಕಾನೂನುಗಳಲ್ಲಿ ವಕೀಲಿಕೆ ಮಾಡಿದರು. ನಾಗ್ಪುರ ಮುನ್ಸಿಪಲ್ ಕಾರ್ಪೊರೇಷನ್, ಅಮರಾವತಿ ಮುನ್ಸಿಪಲ್ ಕಾರ್ಪೊರೇಷನ್ ಮತ್ತು ಅಮರಾವತಿ ವಿಶ್ವವಿದ್ಯಾಲಯದ ಸ್ಥಾಯಿ ಸಲಹೆಗಾರರಾಗಿ ಕಾರ್ಯನಿರ್ವಹಿಸಿದರು. ಆಗಸ್ಟ್ 1992ರಲ್ಲಿ ಬಾಂಬೆ ಹೈಕೋರ್ಟ್ನ ನಾಗ್ಪುರ ಪೀಠದಲ್ಲಿ ಸಹಾಯಕ ಸರ್ಕಾರಿ ವಕೀಲರಾಗಿ ಮತ್ತು ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ನೇಮಕಗೊಂಡರು. ಜುಲೈ 1993 ರವರೆಗೆ ಈ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದರು. ಜನವರಿ 17, 2000ರಂದು ನಾಗ್ಪುರ ಪೀಠದ ಸರ್ಕಾರಿ ವಕೀಲರಾಗಿ ಮತ್ತು ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಅವರು ನೇಮಕಗೊಂಡರು.
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…