ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಮೇ 13ರಂದು ಅಧಿಕಾರದಿಂದ ನಿವೃತ್ತರಾಗಲಿದ್ದಾರೆ. ಈ ಹಿನ್ನೆಲೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ತಮ್ಮ ಉತ್ತರಾಧಿಕಾರಿಯಾಗಿ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಹೆಸರನ್ನು ಶಿಫಾರಸು ಮಾಡಿದ್ದಾರೆ.
ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರು 53ನೇ ಸಿಜೆಐ ಆಗಿ 6 ತಿಂಗಳ ಅಧಿಕಾರಾವಧಿಯನ್ನು ಹೊಂದಿರುತ್ತಾರೆ ಮತ್ತು ನವೆಂಬರ್ 23, 2025ರಂದು ನಿವೃತ್ತರಾಗಲಿದ್ದಾರೆ.
ನ್ಯಾಯಮೂರ್ತಿ ಗವಾಯಿ ಅವರು ಮೇ 29, 2019ರಂದು ಭಾರತದ ಸುಪ್ರೀಂ ಕೋರ್ಟ್ನ ನ್ಯಾಯಾಧೀಶರಾಗಿ ಬಡ್ತಿ ಪಡೆದರು. ಅವರು ನವೆಂಬರ್ 2003ರಲ್ಲಿ ಬಾಂಬೆ ಹೈಕೋರ್ಟ್ನ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು ಮತ್ತು ನವೆಂಬರ್ 2005ರಲ್ಲಿ ಖಾಯಂ ನ್ಯಾಯಾಧೀಶರಾದರು.
ನ್ಯಾಯಾಧೀಶರಾಗುವ ಮುನ್ನ ಅವರು ಸಾಂವಿಧಾನಿಕ ಕಾನೂನು ಮತ್ತು ಆಡಳಿತ ಕಾನೂನುಗಳಲ್ಲಿ ವಕೀಲಿಕೆ ಮಾಡಿದರು. ನಾಗ್ಪುರ ಮುನ್ಸಿಪಲ್ ಕಾರ್ಪೊರೇಷನ್, ಅಮರಾವತಿ ಮುನ್ಸಿಪಲ್ ಕಾರ್ಪೊರೇಷನ್ ಮತ್ತು ಅಮರಾವತಿ ವಿಶ್ವವಿದ್ಯಾಲಯದ ಸ್ಥಾಯಿ ಸಲಹೆಗಾರರಾಗಿ ಕಾರ್ಯನಿರ್ವಹಿಸಿದರು. ಆಗಸ್ಟ್ 1992ರಲ್ಲಿ ಬಾಂಬೆ ಹೈಕೋರ್ಟ್ನ ನಾಗ್ಪುರ ಪೀಠದಲ್ಲಿ ಸಹಾಯಕ ಸರ್ಕಾರಿ ವಕೀಲರಾಗಿ ಮತ್ತು ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ನೇಮಕಗೊಂಡರು. ಜುಲೈ 1993 ರವರೆಗೆ ಈ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದರು. ಜನವರಿ 17, 2000ರಂದು ನಾಗ್ಪುರ ಪೀಠದ ಸರ್ಕಾರಿ ವಕೀಲರಾಗಿ ಮತ್ತು ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಅವರು ನೇಮಕಗೊಂಡರು.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…