Categories: ಕೋಲಾರ

ಸುಪ್ರೀಂಕೋರ್ಟ್ ಮುಂದೆ ಹಾಜರಾಗುವಂತೆ ಡಿಎಫ್ಒ ಏಡುಕೊಂಡಲುಗೆ ನೋಟಿಸ್ : ಪಿ.ಆರ್ ಸೂರ್ಯನಾರಾಯಣ

ಕೋಲಾರ: ಜಿಲ್ಲೆಯಲ್ಲಿನ ಅರಣ್ಯ ಒತ್ತುವರಿ ಹೆಸರಿನಲ್ಲಿ ಜಿಲ್ಲಾ ಅರಣ್ಯಾಧಿಕಾರಿ ಡಿಎಫ್ಒ ಏಡುಕೊಂಡಲು ಅವರು ನ್ಯಾಯಾಲಯ ಉಲ್ಲಂಘನೆ ಆರೋಪದಲ್ಲಿ ಸುಪ್ರೀಂ ಕೋರ್ಟ್ ಮುಂದೆ ಹಾಜರಾಗುವಂತೆ ಮಂಗಳವಾರ ಕೋರ್ಟ್ ವತಿಯಿಂದ ನೋಟೀಸ್ ನೀಡಿದ್ದಾರೆ ಎಂದು ಕೆ.ಪಿ.ಆರ್.ಎಸ್ ರಾಜ್ಯ ಉಪಾಧ್ಯಕ್ಷ ಪಿ.ಆರ್ ಸೂರ್ಯನಾರಾಯಣ ತಿಳಿಸಿದರು

ನಗರದಲ್ಲಿ ತಮ್ಮ ಕಚೇರಿಯಲ್ಲಿ ನಡೆದ ಜಿಲ್ಲಾ ಪದಾಧಿಕಾರಿಗಳ ಸಭೆಯ ನಂತರ ಮಾತನಾಡಿದ ಅವರು, ಜಿಲ್ಲೆಯ ಶ್ರೀನಿವಾಸಪುರ ಮತ್ತು ಕೋಲಾರ ತಾಲ್ಲೂಕಿನಲ್ಲಿ ಅರಣ್ಯಾಧಿಕಾರಿ ಏಡುಕೊಂಡಲು ದೌರ್ಜನ್ಯದಿಂದ ರೈತರು ಬೆಳೆದಿದ್ದ ಮಾವಿನ ಮರಗಳು ಸೇರಿದಂತೆ ತರಕಾರಿ ಬೆಳೆಗಳನ್ನು ಮಾರಣಹೋಮ ಮಾಡಿದ್ದರು. ಈ ವಿಚಾರದಲ್ಲಿ ಶ್ರೀನಿವಾಸಪುರ ತಾಲೂಕಿನ ಉಪ್ಪರಪಲ್ಲಿ ರೈತ ಗುಲ್ಜಾರ್ ಪಾಷ ಹೈಕೋರ್ಟ್ ನಲ್ಲಿ ದೂರು ದಾಖಲಿಸಿದ್ದರು. ಅದರಂತೆ ಏಡುಕೊಂಡಲು ಅವರು ನ್ಯಾಯಾಲಯದಲ್ಲಿ ಹಾಜರಾಗಲು ತಿಳಿಸಿದರು ಹಾಜರಾಗಿಲ್ಲ ಜೊತೆಗೆ ಘಟನೆಯ ಸಂಪೂರ್ಣ ತನಿಖೆಗೆ ಏಕಸದಸ್ಯ ಪೀಠಕ್ಕೆ ಈ ಪ್ರಕರಣವನ್ನು ವರ್ಗಾವಣೆ ಮಾಡಿದ್ದರು ಅದರ ವಿರುದ್ದ ಸುಪ್ರೀಂ ಕೋರ್ಟ್ ನಲ್ಲಿ ದೂರು ನೀಡಿದ್ದರು ಎಂದು ತಿಳಿಸಿದರು.

ರೈತರ ಭೂಮಿಯನ್ನು ವಶಪಡಿಸಿಕೊಂಡ ವಿಚಾರವಾಗಿ 2023 ಆಗಸ್ಟ್ ನಲ್ಲಿ ಹೈಕೋರ್ಟ್ ನಲ್ಲಿ ದೂರು ದಾಖಲು ಆಗಿದ್ದು, ಅದಕ್ಕೆ ಸಂಬಂಧಿಸಿದ ಪೂರಕ ದಾಖಲೆಗಳನ್ನು ಕೋರ್ಟ್ ಮುಂದೆ ಒದಗಿಸುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದೆ ಜೊತೆಗೆ ಏಡುಕೊಂಡಲು ನೇರವಾಗಿ ಕೋರ್ಟ್ ಮುಂದೆ ಹಾಜರಾಗಿಲ್ಲ ಇದಕ್ಕೆ ಸಂಬಂಧಿಸಿದಂತೆ ಕೋರ್ಟ್ ತರಾಟೆಗೆ ಒಳಗಾಗಿದ್ದರು. ರೈತರು ಮತ್ತು ವಕೀಲರ ಪರವಾಗಿ ಸುಪ್ರೀಂಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದು ಅದಕ್ಕೆ ಉತ್ತರ ನೀಡಲು ನೇರವಾಗಿ ಸುಪ್ರೀಂ ಕೋರ್ಟ್
ಮುಂದೆ ಹಾಜರಾಗಲು ನೋಟೀಸ್ ನೀಡಲಾಗಿದೆ ಎಂದು ತಿಳಿಸಿದರು.

ಅರಣ್ಯಾಧಿಕಾರಿಗೆ ಯಾವುದೇ ಮರ ಕಡಿಯಬಾರದೆಂದು ನಿರ್ದಿಷ್ಟ ನಿರ್ದೇಶನವಿದ್ದರೂ ಅರಣ್ಯಾಧಿಕಾರಿ ಏಡುಕೊಂಡಲು ಆತನ ಸಹೊದ್ಯೊಗಿಗಳು ರೈತರಿಗೆ ದೌರ್ಜನ್ಯದಿಂದ ಉಚ್ಛ ನ್ಯಾಯಾಲಯದ ಆದೇಶವನ್ನು ಉದ್ದೇಶಪೂರಕವಾಗಿ ಉಲ್ಲಂಘನೆ ಮಾಡಿ ಜೆಸಿಬಿಗಳ ಮೂಲಕ ಮಾವಿನ ಮರಗಳ ಮಾರಣ ಹೋಮ ಮಾಡಿದ್ದರು. ಈ ನ್ಯಾಯಾಲಯ ನಿಂದನೆ ಪ್ರಕರಣವನ್ನು ಸರ್ವೊಚ್ಛ ನ್ಯಾಯಾಲಯವು ಗಂಭೀರವಾಗಿ ತೆಗೆದುಕೊಂಡು ಉಲ್ಲಂಘನೆ ಮಾಡಿರುವುದು ಹೊರ ನೋಟಕ್ಕೆ ಸಾಬೀತಾಗಿರುವುದರಿಂದ ಅರಣ್ಯಾಧಿಕಾರಿ ಏಡುಕೊಂಡಲು ಮತ್ತು ಇತರರು ನ್ಯಾಯಾಲಯ ನಿಂಧನೆಯಲ್ಲಿ ಅಪರಾಧಿಯಾಗಿ ಸರ್ವೊಚ್ಛ ನ್ಯಾಯಾಲಯದ ಮುಂದೆ ಹಾಜರಾಗಲು ನೋಟೀಸ್ ನೀಡಿದ್ದಾರೆ ಎಂದರು.

ಸರ್ವೊಚ್ಛ ನ್ಯಾಯಾಲಯದಲ್ಲಿ ನ್ಯಾಯಾಧೀಶರಾದ ನ್ಯಾ ಬಿ.ಆರ್.ಗವಾಯಿ ಮತ್ತು ನ್ಯಾ ಸಂದೀಪ್ ಮೆಹತಾ ರವರು ಮಂಗಳವಾರ ಆದೇಶ ಮಾಡಿದ್ದು, ಅರ್ಜಿದಾರರ ಪರವಾಗಿ ಹಿರಿಯ ವಕೀಲ ಸಂಜಯ್ ನುಲಿ ಮತ್ತು ಎಂ. ಶಿವಪ್ರಕಾಶ್ ರವರುಗಳು ವಾದ ಮಂಡಿಸಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕೆ‌.ಪಿ.ಆರ್.ಎಸ್ ಜಿಲ್ಲಾಧ್ಯಕ್ಷ ಟಿ.ಎಂ ವೆಂಕಟೇಶ್, ಕಾರ್ಯದರ್ಶಿ ಪಿ.ಆರ್ ನವೀನ್ ಕುಮಾರ್, ಉಪಾಧ್ಯಕ್ಷರಾದ ಪಿ.ಶ್ರೀನಿವಾಸ್, ವೆಂಕಟಪ್ಪ, ಸಹಕಾರ್ಯದರ್ಶಿ ನಾರಾಯಣಸ್ವಾಮಿ, ಮುಖಂಡರಾದ ಶಿವರಾಜ್, ನಾರಾಯಣಪ್ಪ ಇದ್ದರು

Ramesh Babu

Journalist

Recent Posts

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

50 minutes ago

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

2 hours ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

18 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

19 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

1 day ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

1 day ago