Categories: ಕೋಲಾರ

ಸುಪ್ರೀಂಕೋರ್ಟ್ ಮುಂದೆ ಹಾಜರಾಗುವಂತೆ ಡಿಎಫ್ಒ ಏಡುಕೊಂಡಲುಗೆ ನೋಟಿಸ್ : ಪಿ.ಆರ್ ಸೂರ್ಯನಾರಾಯಣ

ಕೋಲಾರ: ಜಿಲ್ಲೆಯಲ್ಲಿನ ಅರಣ್ಯ ಒತ್ತುವರಿ ಹೆಸರಿನಲ್ಲಿ ಜಿಲ್ಲಾ ಅರಣ್ಯಾಧಿಕಾರಿ ಡಿಎಫ್ಒ ಏಡುಕೊಂಡಲು ಅವರು ನ್ಯಾಯಾಲಯ ಉಲ್ಲಂಘನೆ ಆರೋಪದಲ್ಲಿ ಸುಪ್ರೀಂ ಕೋರ್ಟ್ ಮುಂದೆ ಹಾಜರಾಗುವಂತೆ ಮಂಗಳವಾರ ಕೋರ್ಟ್ ವತಿಯಿಂದ ನೋಟೀಸ್ ನೀಡಿದ್ದಾರೆ ಎಂದು ಕೆ.ಪಿ.ಆರ್.ಎಸ್ ರಾಜ್ಯ ಉಪಾಧ್ಯಕ್ಷ ಪಿ.ಆರ್ ಸೂರ್ಯನಾರಾಯಣ ತಿಳಿಸಿದರು

ನಗರದಲ್ಲಿ ತಮ್ಮ ಕಚೇರಿಯಲ್ಲಿ ನಡೆದ ಜಿಲ್ಲಾ ಪದಾಧಿಕಾರಿಗಳ ಸಭೆಯ ನಂತರ ಮಾತನಾಡಿದ ಅವರು, ಜಿಲ್ಲೆಯ ಶ್ರೀನಿವಾಸಪುರ ಮತ್ತು ಕೋಲಾರ ತಾಲ್ಲೂಕಿನಲ್ಲಿ ಅರಣ್ಯಾಧಿಕಾರಿ ಏಡುಕೊಂಡಲು ದೌರ್ಜನ್ಯದಿಂದ ರೈತರು ಬೆಳೆದಿದ್ದ ಮಾವಿನ ಮರಗಳು ಸೇರಿದಂತೆ ತರಕಾರಿ ಬೆಳೆಗಳನ್ನು ಮಾರಣಹೋಮ ಮಾಡಿದ್ದರು. ಈ ವಿಚಾರದಲ್ಲಿ ಶ್ರೀನಿವಾಸಪುರ ತಾಲೂಕಿನ ಉಪ್ಪರಪಲ್ಲಿ ರೈತ ಗುಲ್ಜಾರ್ ಪಾಷ ಹೈಕೋರ್ಟ್ ನಲ್ಲಿ ದೂರು ದಾಖಲಿಸಿದ್ದರು. ಅದರಂತೆ ಏಡುಕೊಂಡಲು ಅವರು ನ್ಯಾಯಾಲಯದಲ್ಲಿ ಹಾಜರಾಗಲು ತಿಳಿಸಿದರು ಹಾಜರಾಗಿಲ್ಲ ಜೊತೆಗೆ ಘಟನೆಯ ಸಂಪೂರ್ಣ ತನಿಖೆಗೆ ಏಕಸದಸ್ಯ ಪೀಠಕ್ಕೆ ಈ ಪ್ರಕರಣವನ್ನು ವರ್ಗಾವಣೆ ಮಾಡಿದ್ದರು ಅದರ ವಿರುದ್ದ ಸುಪ್ರೀಂ ಕೋರ್ಟ್ ನಲ್ಲಿ ದೂರು ನೀಡಿದ್ದರು ಎಂದು ತಿಳಿಸಿದರು.

ರೈತರ ಭೂಮಿಯನ್ನು ವಶಪಡಿಸಿಕೊಂಡ ವಿಚಾರವಾಗಿ 2023 ಆಗಸ್ಟ್ ನಲ್ಲಿ ಹೈಕೋರ್ಟ್ ನಲ್ಲಿ ದೂರು ದಾಖಲು ಆಗಿದ್ದು, ಅದಕ್ಕೆ ಸಂಬಂಧಿಸಿದ ಪೂರಕ ದಾಖಲೆಗಳನ್ನು ಕೋರ್ಟ್ ಮುಂದೆ ಒದಗಿಸುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದೆ ಜೊತೆಗೆ ಏಡುಕೊಂಡಲು ನೇರವಾಗಿ ಕೋರ್ಟ್ ಮುಂದೆ ಹಾಜರಾಗಿಲ್ಲ ಇದಕ್ಕೆ ಸಂಬಂಧಿಸಿದಂತೆ ಕೋರ್ಟ್ ತರಾಟೆಗೆ ಒಳಗಾಗಿದ್ದರು. ರೈತರು ಮತ್ತು ವಕೀಲರ ಪರವಾಗಿ ಸುಪ್ರೀಂಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದು ಅದಕ್ಕೆ ಉತ್ತರ ನೀಡಲು ನೇರವಾಗಿ ಸುಪ್ರೀಂ ಕೋರ್ಟ್
ಮುಂದೆ ಹಾಜರಾಗಲು ನೋಟೀಸ್ ನೀಡಲಾಗಿದೆ ಎಂದು ತಿಳಿಸಿದರು.

ಅರಣ್ಯಾಧಿಕಾರಿಗೆ ಯಾವುದೇ ಮರ ಕಡಿಯಬಾರದೆಂದು ನಿರ್ದಿಷ್ಟ ನಿರ್ದೇಶನವಿದ್ದರೂ ಅರಣ್ಯಾಧಿಕಾರಿ ಏಡುಕೊಂಡಲು ಆತನ ಸಹೊದ್ಯೊಗಿಗಳು ರೈತರಿಗೆ ದೌರ್ಜನ್ಯದಿಂದ ಉಚ್ಛ ನ್ಯಾಯಾಲಯದ ಆದೇಶವನ್ನು ಉದ್ದೇಶಪೂರಕವಾಗಿ ಉಲ್ಲಂಘನೆ ಮಾಡಿ ಜೆಸಿಬಿಗಳ ಮೂಲಕ ಮಾವಿನ ಮರಗಳ ಮಾರಣ ಹೋಮ ಮಾಡಿದ್ದರು. ಈ ನ್ಯಾಯಾಲಯ ನಿಂದನೆ ಪ್ರಕರಣವನ್ನು ಸರ್ವೊಚ್ಛ ನ್ಯಾಯಾಲಯವು ಗಂಭೀರವಾಗಿ ತೆಗೆದುಕೊಂಡು ಉಲ್ಲಂಘನೆ ಮಾಡಿರುವುದು ಹೊರ ನೋಟಕ್ಕೆ ಸಾಬೀತಾಗಿರುವುದರಿಂದ ಅರಣ್ಯಾಧಿಕಾರಿ ಏಡುಕೊಂಡಲು ಮತ್ತು ಇತರರು ನ್ಯಾಯಾಲಯ ನಿಂಧನೆಯಲ್ಲಿ ಅಪರಾಧಿಯಾಗಿ ಸರ್ವೊಚ್ಛ ನ್ಯಾಯಾಲಯದ ಮುಂದೆ ಹಾಜರಾಗಲು ನೋಟೀಸ್ ನೀಡಿದ್ದಾರೆ ಎಂದರು.

ಸರ್ವೊಚ್ಛ ನ್ಯಾಯಾಲಯದಲ್ಲಿ ನ್ಯಾಯಾಧೀಶರಾದ ನ್ಯಾ ಬಿ.ಆರ್.ಗವಾಯಿ ಮತ್ತು ನ್ಯಾ ಸಂದೀಪ್ ಮೆಹತಾ ರವರು ಮಂಗಳವಾರ ಆದೇಶ ಮಾಡಿದ್ದು, ಅರ್ಜಿದಾರರ ಪರವಾಗಿ ಹಿರಿಯ ವಕೀಲ ಸಂಜಯ್ ನುಲಿ ಮತ್ತು ಎಂ. ಶಿವಪ್ರಕಾಶ್ ರವರುಗಳು ವಾದ ಮಂಡಿಸಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕೆ‌.ಪಿ.ಆರ್.ಎಸ್ ಜಿಲ್ಲಾಧ್ಯಕ್ಷ ಟಿ.ಎಂ ವೆಂಕಟೇಶ್, ಕಾರ್ಯದರ್ಶಿ ಪಿ.ಆರ್ ನವೀನ್ ಕುಮಾರ್, ಉಪಾಧ್ಯಕ್ಷರಾದ ಪಿ.ಶ್ರೀನಿವಾಸ್, ವೆಂಕಟಪ್ಪ, ಸಹಕಾರ್ಯದರ್ಶಿ ನಾರಾಯಣಸ್ವಾಮಿ, ಮುಖಂಡರಾದ ಶಿವರಾಜ್, ನಾರಾಯಣಪ್ಪ ಇದ್ದರು

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

7 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

14 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

17 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

18 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago