Categories: ಕೋಲಾರ

ಸುಪ್ರೀಂಕೋರ್ಟ್ ಮುಂದೆ ಹಾಜರಾಗುವಂತೆ ಡಿಎಫ್ಒ ಏಡುಕೊಂಡಲುಗೆ ನೋಟಿಸ್ : ಪಿ.ಆರ್ ಸೂರ್ಯನಾರಾಯಣ

ಕೋಲಾರ: ಜಿಲ್ಲೆಯಲ್ಲಿನ ಅರಣ್ಯ ಒತ್ತುವರಿ ಹೆಸರಿನಲ್ಲಿ ಜಿಲ್ಲಾ ಅರಣ್ಯಾಧಿಕಾರಿ ಡಿಎಫ್ಒ ಏಡುಕೊಂಡಲು ಅವರು ನ್ಯಾಯಾಲಯ ಉಲ್ಲಂಘನೆ ಆರೋಪದಲ್ಲಿ ಸುಪ್ರೀಂ ಕೋರ್ಟ್ ಮುಂದೆ ಹಾಜರಾಗುವಂತೆ ಮಂಗಳವಾರ ಕೋರ್ಟ್ ವತಿಯಿಂದ ನೋಟೀಸ್ ನೀಡಿದ್ದಾರೆ ಎಂದು ಕೆ.ಪಿ.ಆರ್.ಎಸ್ ರಾಜ್ಯ ಉಪಾಧ್ಯಕ್ಷ ಪಿ.ಆರ್ ಸೂರ್ಯನಾರಾಯಣ ತಿಳಿಸಿದರು

ನಗರದಲ್ಲಿ ತಮ್ಮ ಕಚೇರಿಯಲ್ಲಿ ನಡೆದ ಜಿಲ್ಲಾ ಪದಾಧಿಕಾರಿಗಳ ಸಭೆಯ ನಂತರ ಮಾತನಾಡಿದ ಅವರು, ಜಿಲ್ಲೆಯ ಶ್ರೀನಿವಾಸಪುರ ಮತ್ತು ಕೋಲಾರ ತಾಲ್ಲೂಕಿನಲ್ಲಿ ಅರಣ್ಯಾಧಿಕಾರಿ ಏಡುಕೊಂಡಲು ದೌರ್ಜನ್ಯದಿಂದ ರೈತರು ಬೆಳೆದಿದ್ದ ಮಾವಿನ ಮರಗಳು ಸೇರಿದಂತೆ ತರಕಾರಿ ಬೆಳೆಗಳನ್ನು ಮಾರಣಹೋಮ ಮಾಡಿದ್ದರು. ಈ ವಿಚಾರದಲ್ಲಿ ಶ್ರೀನಿವಾಸಪುರ ತಾಲೂಕಿನ ಉಪ್ಪರಪಲ್ಲಿ ರೈತ ಗುಲ್ಜಾರ್ ಪಾಷ ಹೈಕೋರ್ಟ್ ನಲ್ಲಿ ದೂರು ದಾಖಲಿಸಿದ್ದರು. ಅದರಂತೆ ಏಡುಕೊಂಡಲು ಅವರು ನ್ಯಾಯಾಲಯದಲ್ಲಿ ಹಾಜರಾಗಲು ತಿಳಿಸಿದರು ಹಾಜರಾಗಿಲ್ಲ ಜೊತೆಗೆ ಘಟನೆಯ ಸಂಪೂರ್ಣ ತನಿಖೆಗೆ ಏಕಸದಸ್ಯ ಪೀಠಕ್ಕೆ ಈ ಪ್ರಕರಣವನ್ನು ವರ್ಗಾವಣೆ ಮಾಡಿದ್ದರು ಅದರ ವಿರುದ್ದ ಸುಪ್ರೀಂ ಕೋರ್ಟ್ ನಲ್ಲಿ ದೂರು ನೀಡಿದ್ದರು ಎಂದು ತಿಳಿಸಿದರು.

ರೈತರ ಭೂಮಿಯನ್ನು ವಶಪಡಿಸಿಕೊಂಡ ವಿಚಾರವಾಗಿ 2023 ಆಗಸ್ಟ್ ನಲ್ಲಿ ಹೈಕೋರ್ಟ್ ನಲ್ಲಿ ದೂರು ದಾಖಲು ಆಗಿದ್ದು, ಅದಕ್ಕೆ ಸಂಬಂಧಿಸಿದ ಪೂರಕ ದಾಖಲೆಗಳನ್ನು ಕೋರ್ಟ್ ಮುಂದೆ ಒದಗಿಸುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದೆ ಜೊತೆಗೆ ಏಡುಕೊಂಡಲು ನೇರವಾಗಿ ಕೋರ್ಟ್ ಮುಂದೆ ಹಾಜರಾಗಿಲ್ಲ ಇದಕ್ಕೆ ಸಂಬಂಧಿಸಿದಂತೆ ಕೋರ್ಟ್ ತರಾಟೆಗೆ ಒಳಗಾಗಿದ್ದರು. ರೈತರು ಮತ್ತು ವಕೀಲರ ಪರವಾಗಿ ಸುಪ್ರೀಂಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದು ಅದಕ್ಕೆ ಉತ್ತರ ನೀಡಲು ನೇರವಾಗಿ ಸುಪ್ರೀಂ ಕೋರ್ಟ್
ಮುಂದೆ ಹಾಜರಾಗಲು ನೋಟೀಸ್ ನೀಡಲಾಗಿದೆ ಎಂದು ತಿಳಿಸಿದರು.

ಅರಣ್ಯಾಧಿಕಾರಿಗೆ ಯಾವುದೇ ಮರ ಕಡಿಯಬಾರದೆಂದು ನಿರ್ದಿಷ್ಟ ನಿರ್ದೇಶನವಿದ್ದರೂ ಅರಣ್ಯಾಧಿಕಾರಿ ಏಡುಕೊಂಡಲು ಆತನ ಸಹೊದ್ಯೊಗಿಗಳು ರೈತರಿಗೆ ದೌರ್ಜನ್ಯದಿಂದ ಉಚ್ಛ ನ್ಯಾಯಾಲಯದ ಆದೇಶವನ್ನು ಉದ್ದೇಶಪೂರಕವಾಗಿ ಉಲ್ಲಂಘನೆ ಮಾಡಿ ಜೆಸಿಬಿಗಳ ಮೂಲಕ ಮಾವಿನ ಮರಗಳ ಮಾರಣ ಹೋಮ ಮಾಡಿದ್ದರು. ಈ ನ್ಯಾಯಾಲಯ ನಿಂದನೆ ಪ್ರಕರಣವನ್ನು ಸರ್ವೊಚ್ಛ ನ್ಯಾಯಾಲಯವು ಗಂಭೀರವಾಗಿ ತೆಗೆದುಕೊಂಡು ಉಲ್ಲಂಘನೆ ಮಾಡಿರುವುದು ಹೊರ ನೋಟಕ್ಕೆ ಸಾಬೀತಾಗಿರುವುದರಿಂದ ಅರಣ್ಯಾಧಿಕಾರಿ ಏಡುಕೊಂಡಲು ಮತ್ತು ಇತರರು ನ್ಯಾಯಾಲಯ ನಿಂಧನೆಯಲ್ಲಿ ಅಪರಾಧಿಯಾಗಿ ಸರ್ವೊಚ್ಛ ನ್ಯಾಯಾಲಯದ ಮುಂದೆ ಹಾಜರಾಗಲು ನೋಟೀಸ್ ನೀಡಿದ್ದಾರೆ ಎಂದರು.

ಸರ್ವೊಚ್ಛ ನ್ಯಾಯಾಲಯದಲ್ಲಿ ನ್ಯಾಯಾಧೀಶರಾದ ನ್ಯಾ ಬಿ.ಆರ್.ಗವಾಯಿ ಮತ್ತು ನ್ಯಾ ಸಂದೀಪ್ ಮೆಹತಾ ರವರು ಮಂಗಳವಾರ ಆದೇಶ ಮಾಡಿದ್ದು, ಅರ್ಜಿದಾರರ ಪರವಾಗಿ ಹಿರಿಯ ವಕೀಲ ಸಂಜಯ್ ನುಲಿ ಮತ್ತು ಎಂ. ಶಿವಪ್ರಕಾಶ್ ರವರುಗಳು ವಾದ ಮಂಡಿಸಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕೆ‌.ಪಿ.ಆರ್.ಎಸ್ ಜಿಲ್ಲಾಧ್ಯಕ್ಷ ಟಿ.ಎಂ ವೆಂಕಟೇಶ್, ಕಾರ್ಯದರ್ಶಿ ಪಿ.ಆರ್ ನವೀನ್ ಕುಮಾರ್, ಉಪಾಧ್ಯಕ್ಷರಾದ ಪಿ.ಶ್ರೀನಿವಾಸ್, ವೆಂಕಟಪ್ಪ, ಸಹಕಾರ್ಯದರ್ಶಿ ನಾರಾಯಣಸ್ವಾಮಿ, ಮುಖಂಡರಾದ ಶಿವರಾಜ್, ನಾರಾಯಣಪ್ಪ ಇದ್ದರು

Ramesh Babu

Journalist

Recent Posts

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

6 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

7 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

1 day ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

1 day ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

1 day ago