ಸುಪ್ರೀಂ ಕೋರ್ಟ್ ನ ಮುಖ್ಯನ್ಯಾಯಮೂರ್ತಿಗಳಾಗಿರುವ ಬಿ.ಆರ್.ಗವಾಯಿ ಅವರಿಗೆ ವಕೀಲನೊಬ್ಬ ಶೂ ಎಸೆದು ಅವಮಾನ ಮಾಡಿರುವ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಮುಖ್ಯನ್ಯಾಯಮೂರ್ತಿಗಳು ಮತ್ತು ನ್ಯಾಯಾಲಯಕ್ಕೆ ಅವಮಾನ ಮಾಡಿರುವ ಕಿಡಿಗೇಡಿ ವಕೀಲನನ್ನು ತಕ್ಷಣ ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕೆಂದು ಆಗ್ರಹಪಡಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ದಲಿತ ಸಮುದಾಯಕ್ಕೆ ಸೇರಿರುವ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರು ಸಾಮಾಜಿಕ ಪ್ರತಿರೋಧಗಳನ್ನು ಎದುರಿಸಿ ಅರ್ಹತೆ ಮತ್ತು ಸಾಧನೆ ಮೂಲಕ ಉನ್ನತ ಸ್ಥಾನಕ್ಕೇರಿದವರು. ಜಾತಿ ಮೂಲದ ಅಸಮಾನತೆ ಮತ್ತು ಅಸಹನೆ ಸಂವಿಧಾನ ಜಾರಿಗೆ ಬಂದ 75 ವರ್ಷಗಳ ನಂತರವೂ ಮನುವಾದಿಗಳ ಮನಸ್ಸಲ್ಲಿ ಭಧ್ರವಾಗಿ ಉಳಿದುಕೊಂಡಿದೆ ಎನ್ನುವುದಕ್ಕೆ ಇಂದಿನ ಘಟನೆ ಸಾಕ್ಷಿಯಾಗಿದೆ ಎಂದು ತಿಳಿಸಿದ್ದಾರೆ.
ಗೌರವಾನ್ವಿತ ಮುಖ್ಯನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಅವರು ಒಬ್ಬಂಟಿಯಲ್ಲ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ನಂಬಿಕೆ ಇಟ್ಟಿರುವ ಕೋಟ್ಯಂತರ ಜಾತ್ಯತೀತ ಮನಸ್ಸುಗಳು ಅವರ ಬೆಂಬಲಕ್ಕೆ ಇವೆ ಎನ್ನುವುದನ್ನು ಅವರ ಗಮನಕ್ಕೆ ತರಬಯಸುತ್ತೇನೆ. ಮುಖ್ಯನ್ಯಾಯಮೂರ್ತಿಗಳು ಯಾವುದೇ ಪಕ್ಷ ಇಲ್ಲವೇ ಧರ್ಮಕ್ಕೆ ಸೇರಿದವರಲ್ಲ. ಈ ದೃಷ್ಟಿಯಿಂದ ದೇಶದ ಎಲ್ಲ ಜಾತಿ, ಧರ್ಮ ಮತ್ತು ಪಕ್ಷಗಳ ಜನರು ಸುಪ್ರೀಂ ಕೋರ್ಟ್ ನಲ್ಲಿ ಇಂದು ನಡೆದಿರುವ ಘಟನೆಯನ್ನು ಒಕ್ಕೊರಲಿನಿಂದ ಖಂಡಿಸಬೇಕೆಂದು ಮನವಿ ಮಾಡುತ್ತೇನೆ ಎಂದರು.
ಜಾತಿ ಮತ್ತು ಧರ್ಮದ ಹೆಸರಲ್ಲಿ ಸಮಾಜವನ್ನು ಒಡೆದುಹಾಕಿ, ಪರಸ್ಪರ ದ್ವೇಷ ಮತ್ತು ಅಸಹನೆಯನ್ನು ಹುಟ್ಟುಹಾಕಿರುವ ಕಾರಣಕ್ಕಾಗಿಯೇ ರಾಕೇಶ್ ಕಿಶೋರ್ ನಂತಹ ಮನುವಾದಿ ಮನಸ್ಸುಗಳು ಸಮಾಜದಲ್ಲಿ ಹುಟ್ಟಿಕೊಂಡಿವೆ ಎನ್ನುವುದನ್ನು ನಾವು ಮರೆಯಬಾರದು. ನಾಥೂರಾಮ್ ಗೋಡ್ಸೆಯಂತಹ ಒಬ್ಬ ಕೊಲೆಗಡುಕನನ್ನು ದೇಶಪ್ರೇಮಿ ಎಂದು ಮೆರೆಸಲು ಹೊರಟಿರುವ ರೀತಿಯಲ್ಲಿಯೇ ಕೆಲವು ಪುಂಡರು ವಕೀಲನ ಕುಕೃತ್ಯವನ್ನು ಸಂಭ್ರಮಿಸುತ್ತಿರುವುದನ್ನು ಕಾಣುತ್ತಿದ್ದೇವೆ. ಇಂತಹವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಬೇಕಾದ ಅಗತ್ಯ ಇದೆ ಎಂದು ನಾನು ತಿಳಿದುಕೊಂಡಿದ್ದೇನೆ ಎಂದು ಹೇಳಿದ್ದಾರೆ.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…