ಸುಪ್ರೀಂ ಕೋರ್ಟ್ ನ CJI ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆತ ವಿಚಾರ: ಸಿಎಂ ಸಿದ್ದರಾಮಯ್ಯ ಖಂಡನೆ: ವಕೀಲನನ್ನು ತಕ್ಷಣ ಬಂಧಿಸಿ ಕಾನೂನು ಕ್ರಮಕ್ಕಾಗಿ ಆಗ್ರಹ

ಸುಪ್ರೀಂ ಕೋರ್ಟ್ ನ ಮುಖ್ಯನ್ಯಾಯಮೂರ್ತಿಗಳಾಗಿರುವ ಬಿ.ಆರ್.ಗವಾಯಿ ಅವರಿಗೆ ವಕೀಲನೊಬ್ಬ ಶೂ ಎಸೆದು ಅವಮಾನ ಮಾಡಿರುವ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಮುಖ್ಯನ್ಯಾಯಮೂರ್ತಿಗಳು ಮತ್ತು ನ್ಯಾಯಾಲಯಕ್ಕೆ ಅವಮಾನ ಮಾಡಿರುವ ಕಿಡಿಗೇಡಿ ವಕೀಲನನ್ನು ತಕ್ಷಣ ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕೆಂದು ಆಗ್ರಹಪಡಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ದಲಿತ ಸಮುದಾಯಕ್ಕೆ ಸೇರಿರುವ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರು ಸಾಮಾಜಿಕ ಪ್ರತಿರೋಧಗಳನ್ನು ಎದುರಿಸಿ ಅರ್ಹತೆ ಮತ್ತು ಸಾಧನೆ ಮೂಲಕ ಉನ್ನತ ಸ್ಥಾನಕ್ಕೇರಿದವರು. ಜಾತಿ ಮೂಲದ ಅಸಮಾನತೆ ಮತ್ತು ಅಸಹನೆ ಸಂವಿಧಾನ ಜಾರಿಗೆ ಬಂದ 75 ವರ್ಷಗಳ ನಂತರವೂ ಮನುವಾದಿಗಳ ಮನಸ್ಸಲ್ಲಿ ಭಧ್ರವಾಗಿ ಉಳಿದುಕೊಂಡಿದೆ ಎನ್ನುವುದಕ್ಕೆ ಇಂದಿನ ಘಟನೆ ಸಾಕ್ಷಿಯಾಗಿದೆ ಎಂದು ತಿಳಿಸಿದ್ದಾರೆ.

ಗೌರವಾನ್ವಿತ ಮುಖ್ಯನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಅವರು ಒಬ್ಬಂಟಿಯಲ್ಲ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ನಂಬಿಕೆ ಇಟ್ಟಿರುವ ಕೋಟ್ಯಂತರ ಜಾತ್ಯತೀತ ಮನಸ್ಸುಗಳು ಅವರ ಬೆಂಬಲಕ್ಕೆ ಇವೆ ಎನ್ನುವುದನ್ನು ಅವರ ಗಮನಕ್ಕೆ ತರಬಯಸುತ್ತೇನೆ. ಮುಖ್ಯನ್ಯಾಯಮೂರ್ತಿಗಳು ಯಾವುದೇ ಪಕ್ಷ ಇಲ್ಲವೇ ಧರ್ಮಕ್ಕೆ ಸೇರಿದವರಲ್ಲ. ಈ ದೃಷ್ಟಿಯಿಂದ ದೇಶದ ಎಲ್ಲ ಜಾತಿ, ಧರ್ಮ ಮತ್ತು ಪಕ್ಷಗಳ ಜನರು ಸುಪ್ರೀಂ ಕೋರ್ಟ್ ನಲ್ಲಿ ಇಂದು ನಡೆದಿರುವ ಘಟನೆಯನ್ನು ಒಕ್ಕೊರಲಿನಿಂದ ಖಂಡಿಸಬೇಕೆಂದು ಮನವಿ ಮಾಡುತ್ತೇನೆ ಎಂದರು.

ಜಾತಿ ಮತ್ತು ಧರ್ಮದ ಹೆಸರಲ್ಲಿ ಸಮಾಜವನ್ನು ಒಡೆದುಹಾಕಿ, ಪರಸ್ಪರ ದ್ವೇಷ ಮತ್ತು ಅಸಹನೆಯನ್ನು ಹುಟ್ಟುಹಾಕಿರುವ ಕಾರಣಕ್ಕಾಗಿಯೇ ರಾಕೇಶ್ ಕಿಶೋರ್ ನಂತಹ ಮನುವಾದಿ ಮನಸ್ಸುಗಳು ಸಮಾಜದಲ್ಲಿ  ಹುಟ್ಟಿಕೊಂಡಿವೆ ಎನ್ನುವುದನ್ನು ನಾವು ಮರೆಯಬಾರದು. ನಾಥೂರಾಮ್ ಗೋಡ್ಸೆಯಂತಹ ಒಬ್ಬ ಕೊಲೆಗಡುಕನನ್ನು ದೇಶಪ್ರೇಮಿ ಎಂದು ಮೆರೆಸಲು ಹೊರಟಿರುವ ರೀತಿಯಲ್ಲಿಯೇ ಕೆಲವು ಪುಂಡರು ವಕೀಲನ ಕುಕೃತ್ಯವನ್ನು ಸಂಭ್ರಮಿಸುತ್ತಿರುವುದನ್ನು ಕಾಣುತ್ತಿದ್ದೇವೆ. ಇಂತಹವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಬೇಕಾದ ಅಗತ್ಯ ಇದೆ ಎಂದು ನಾನು ತಿಳಿದುಕೊಂಡಿದ್ದೇನೆ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ಮದುವೆ ಸಂಭ್ರಮದ ನಡುವೆ ಬೈಕ್ ಗೆ ಬೆಂಕಿ ಇಟ್ಟ ಕಿಡಿಗೇಡಿಗಳು

ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…

4 hours ago

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಹಿನ್ನೆಲೆ: ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…

4 hours ago

ಮೆಜೆಸ್ಟಿಕ್‌ನಿಂದ ಘಾಟಿ ಸುಬ್ರಮಣ್ಯಕ್ಕೆ ಬಿಎಂಟಿಸಿ ಹೊಸದಾಗಿ ನೇರ ಬಸ್‌ ಸೇವೆ ಆರಂಭ

ಬೆಂಗಳೂರು: ಬೆಂಗಳೂರು‌ ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…

15 hours ago

ಅರಣ್ಯದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಿ ಮಾನವೀಯತೆ ಮೆರೆದ ಇನ್ಸ್‌ಪೆಕ್ಟರ್ ಅಮರೇಶ್ ಗೌಡ

ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…

17 hours ago

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ‌ ವಿಚಾರ: ಬೆಲೆ ಏರಿಕೆ ಹಿಂಪಡೆಯಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…

18 hours ago

ಬೆಂ ಗ್ರಾ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ತಡೆ: ಜಿಲ್ಲಾಧಿಕಾರಿ ಡಾ. ಅನುರಾಧ

ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…

19 hours ago