ಸುಪ್ರೀಂ ಕೋರ್ಟ್ ನ CJI ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆತ ವಿಚಾರ: ಸಿಎಂ ಸಿದ್ದರಾಮಯ್ಯ ಖಂಡನೆ: ವಕೀಲನನ್ನು ತಕ್ಷಣ ಬಂಧಿಸಿ ಕಾನೂನು ಕ್ರಮಕ್ಕಾಗಿ ಆಗ್ರಹ

ಸುಪ್ರೀಂ ಕೋರ್ಟ್ ನ ಮುಖ್ಯನ್ಯಾಯಮೂರ್ತಿಗಳಾಗಿರುವ ಬಿ.ಆರ್.ಗವಾಯಿ ಅವರಿಗೆ ವಕೀಲನೊಬ್ಬ ಶೂ ಎಸೆದು ಅವಮಾನ ಮಾಡಿರುವ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಮುಖ್ಯನ್ಯಾಯಮೂರ್ತಿಗಳು ಮತ್ತು ನ್ಯಾಯಾಲಯಕ್ಕೆ ಅವಮಾನ ಮಾಡಿರುವ ಕಿಡಿಗೇಡಿ ವಕೀಲನನ್ನು ತಕ್ಷಣ ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕೆಂದು ಆಗ್ರಹಪಡಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ದಲಿತ ಸಮುದಾಯಕ್ಕೆ ಸೇರಿರುವ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರು ಸಾಮಾಜಿಕ ಪ್ರತಿರೋಧಗಳನ್ನು ಎದುರಿಸಿ ಅರ್ಹತೆ ಮತ್ತು ಸಾಧನೆ ಮೂಲಕ ಉನ್ನತ ಸ್ಥಾನಕ್ಕೇರಿದವರು. ಜಾತಿ ಮೂಲದ ಅಸಮಾನತೆ ಮತ್ತು ಅಸಹನೆ ಸಂವಿಧಾನ ಜಾರಿಗೆ ಬಂದ 75 ವರ್ಷಗಳ ನಂತರವೂ ಮನುವಾದಿಗಳ ಮನಸ್ಸಲ್ಲಿ ಭಧ್ರವಾಗಿ ಉಳಿದುಕೊಂಡಿದೆ ಎನ್ನುವುದಕ್ಕೆ ಇಂದಿನ ಘಟನೆ ಸಾಕ್ಷಿಯಾಗಿದೆ ಎಂದು ತಿಳಿಸಿದ್ದಾರೆ.

ಗೌರವಾನ್ವಿತ ಮುಖ್ಯನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಅವರು ಒಬ್ಬಂಟಿಯಲ್ಲ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ನಂಬಿಕೆ ಇಟ್ಟಿರುವ ಕೋಟ್ಯಂತರ ಜಾತ್ಯತೀತ ಮನಸ್ಸುಗಳು ಅವರ ಬೆಂಬಲಕ್ಕೆ ಇವೆ ಎನ್ನುವುದನ್ನು ಅವರ ಗಮನಕ್ಕೆ ತರಬಯಸುತ್ತೇನೆ. ಮುಖ್ಯನ್ಯಾಯಮೂರ್ತಿಗಳು ಯಾವುದೇ ಪಕ್ಷ ಇಲ್ಲವೇ ಧರ್ಮಕ್ಕೆ ಸೇರಿದವರಲ್ಲ. ಈ ದೃಷ್ಟಿಯಿಂದ ದೇಶದ ಎಲ್ಲ ಜಾತಿ, ಧರ್ಮ ಮತ್ತು ಪಕ್ಷಗಳ ಜನರು ಸುಪ್ರೀಂ ಕೋರ್ಟ್ ನಲ್ಲಿ ಇಂದು ನಡೆದಿರುವ ಘಟನೆಯನ್ನು ಒಕ್ಕೊರಲಿನಿಂದ ಖಂಡಿಸಬೇಕೆಂದು ಮನವಿ ಮಾಡುತ್ತೇನೆ ಎಂದರು.

ಜಾತಿ ಮತ್ತು ಧರ್ಮದ ಹೆಸರಲ್ಲಿ ಸಮಾಜವನ್ನು ಒಡೆದುಹಾಕಿ, ಪರಸ್ಪರ ದ್ವೇಷ ಮತ್ತು ಅಸಹನೆಯನ್ನು ಹುಟ್ಟುಹಾಕಿರುವ ಕಾರಣಕ್ಕಾಗಿಯೇ ರಾಕೇಶ್ ಕಿಶೋರ್ ನಂತಹ ಮನುವಾದಿ ಮನಸ್ಸುಗಳು ಸಮಾಜದಲ್ಲಿ  ಹುಟ್ಟಿಕೊಂಡಿವೆ ಎನ್ನುವುದನ್ನು ನಾವು ಮರೆಯಬಾರದು. ನಾಥೂರಾಮ್ ಗೋಡ್ಸೆಯಂತಹ ಒಬ್ಬ ಕೊಲೆಗಡುಕನನ್ನು ದೇಶಪ್ರೇಮಿ ಎಂದು ಮೆರೆಸಲು ಹೊರಟಿರುವ ರೀತಿಯಲ್ಲಿಯೇ ಕೆಲವು ಪುಂಡರು ವಕೀಲನ ಕುಕೃತ್ಯವನ್ನು ಸಂಭ್ರಮಿಸುತ್ತಿರುವುದನ್ನು ಕಾಣುತ್ತಿದ್ದೇವೆ. ಇಂತಹವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಬೇಕಾದ ಅಗತ್ಯ ಇದೆ ಎಂದು ನಾನು ತಿಳಿದುಕೊಂಡಿದ್ದೇನೆ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

10 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

12 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

2 days ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

5 days ago