ಓಮ್ನಿ ಹಾಗೂ ಕ್ರೆಟಾ ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟು, ಓಮ್ನಿಯಲ್ಲಿದ್ದ 8 ಮಂದಿ ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಶನಿವಾರ ಮಧ್ಯಾಹ್ನ ನಡೆದಿದೆ.
ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಓಮ್ನಿ ಹಾಗೂ ವಿರುದ್ಧ ದಿಕ್ಕಿನಿಂದ ತೆರಳುತ್ತಿದ್ದ ಕ್ರೆಟಾ ನಡುವೆ ಮರ್ಧಾಳ ಸಮೀಪದ ಅಳೇರಿ ಎಂಬಲ್ಲಿ ತಿರುವಿನಲ್ಲಿ ಅಪಘಾತ ಸಂಭವಿಸಿದ್ದು, ಓಮ್ನಿ ಚಲಾಯಿಸುತ್ತಿದ್ದ ಸೋಮವಾರ ಪೇಟೆಯ ಚೌಡ್ಲು ಗ್ರಾಮದ ಕೆಂಚುಮನೆ ನಿವಾಸಿ ರವಿ (53), ಆಸ್ಪತ್ರೆಗೆ ಸಾಗಿಸುವ ಹಾದಿಯಲ್ಲಿ ಮೃತಪಟ್ಟಿದ್ದಾರೆ.
ರವಿ ಅವರ ತಾಯಿ ಮಣಿಯಮ್ಮ(75), ಪತ್ನಿ ವಾಣಿ (47), ಪುತ್ರಿ ರಿಷಾ (19), ಪುತ್ರ ಶರಣ್ (10), ಸಹೋದರ ಯೋಗೇಶ್ (55), ಅವರ ಪತ್ನಿ ನೀತು (45), ಪುತ್ರಿ ನೇಹಾ (24), ಪುತ್ರ ಅಂಜನ್ (14) ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ.
ಕಡಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ತಿರುವಿನಲ್ಲಿ ರಸ್ತೆ ಕಿರಿದಾಗಿದ್ದು ರಸ್ತೆಗೆ ತಾಗಿದಂತೆ ಇರುವ ವಿದ್ಯುತ್ ಕಂಬದಿಂದಾಗಿ ಅಲ್ಲಿ ಹಲವು ಅಪಘಾತಗಳು ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.ಮೃತ ರವಿ ಸೋಮವಾರಪೇಟೆಯಲ್ಲಿ ಪತ್ರಕರ್ತರಾಗಿದ್ದ ದಿವಂಗತ ಬಿ.ಎನ್.ಗೋವಿಂದಪ್ಪನವರ ಅಣ್ಣನ ಮಗ. ಇವರು ಸಹ ಪತ್ರಿಕಾ ವಿತರಕರಾಗಿದ್ದರು.
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…