ಓಮ್ನಿ ಹಾಗೂ ಕ್ರೆಟಾ ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟು, ಓಮ್ನಿಯಲ್ಲಿದ್ದ 8 ಮಂದಿ ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಶನಿವಾರ ಮಧ್ಯಾಹ್ನ ನಡೆದಿದೆ.
ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಓಮ್ನಿ ಹಾಗೂ ವಿರುದ್ಧ ದಿಕ್ಕಿನಿಂದ ತೆರಳುತ್ತಿದ್ದ ಕ್ರೆಟಾ ನಡುವೆ ಮರ್ಧಾಳ ಸಮೀಪದ ಅಳೇರಿ ಎಂಬಲ್ಲಿ ತಿರುವಿನಲ್ಲಿ ಅಪಘಾತ ಸಂಭವಿಸಿದ್ದು, ಓಮ್ನಿ ಚಲಾಯಿಸುತ್ತಿದ್ದ ಸೋಮವಾರ ಪೇಟೆಯ ಚೌಡ್ಲು ಗ್ರಾಮದ ಕೆಂಚುಮನೆ ನಿವಾಸಿ ರವಿ (53), ಆಸ್ಪತ್ರೆಗೆ ಸಾಗಿಸುವ ಹಾದಿಯಲ್ಲಿ ಮೃತಪಟ್ಟಿದ್ದಾರೆ.
ರವಿ ಅವರ ತಾಯಿ ಮಣಿಯಮ್ಮ(75), ಪತ್ನಿ ವಾಣಿ (47), ಪುತ್ರಿ ರಿಷಾ (19), ಪುತ್ರ ಶರಣ್ (10), ಸಹೋದರ ಯೋಗೇಶ್ (55), ಅವರ ಪತ್ನಿ ನೀತು (45), ಪುತ್ರಿ ನೇಹಾ (24), ಪುತ್ರ ಅಂಜನ್ (14) ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ.
ಕಡಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ತಿರುವಿನಲ್ಲಿ ರಸ್ತೆ ಕಿರಿದಾಗಿದ್ದು ರಸ್ತೆಗೆ ತಾಗಿದಂತೆ ಇರುವ ವಿದ್ಯುತ್ ಕಂಬದಿಂದಾಗಿ ಅಲ್ಲಿ ಹಲವು ಅಪಘಾತಗಳು ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.ಮೃತ ರವಿ ಸೋಮವಾರಪೇಟೆಯಲ್ಲಿ ಪತ್ರಕರ್ತರಾಗಿದ್ದ ದಿವಂಗತ ಬಿ.ಎನ್.ಗೋವಿಂದಪ್ಪನವರ ಅಣ್ಣನ ಮಗ. ಇವರು ಸಹ ಪತ್ರಿಕಾ ವಿತರಕರಾಗಿದ್ದರು.
ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ…
Das Schreiben einer Facharbeit stellt für viele Schüler und Studenten eine große Herausforderung dar. Der…
ಏಪ್ರಿಲ್ ಧಮಾಕಾ....... ಕನ್ನಡ ಸಿನಿಮಾದ ಡಾಕ್ಟರ್ ರಾಜಕುಮಾರ್ ಏಪ್ರಿಲ್ 24, ಇಂಗ್ಲೀಷ್ ಸಾಹಿತ್ಯದ ವಿಲಿಯಂ ಶೇಕ್ಸ್ಪಿಯರ್ ಏಪ್ರಿಲ್ 23, ವಿಶ್ವ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…
ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…
ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…