ಓಮ್ನಿ ಹಾಗೂ ಕ್ರೆಟಾ ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟು, ಓಮ್ನಿಯಲ್ಲಿದ್ದ 8 ಮಂದಿ ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಶನಿವಾರ ಮಧ್ಯಾಹ್ನ ನಡೆದಿದೆ.
ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಓಮ್ನಿ ಹಾಗೂ ವಿರುದ್ಧ ದಿಕ್ಕಿನಿಂದ ತೆರಳುತ್ತಿದ್ದ ಕ್ರೆಟಾ ನಡುವೆ ಮರ್ಧಾಳ ಸಮೀಪದ ಅಳೇರಿ ಎಂಬಲ್ಲಿ ತಿರುವಿನಲ್ಲಿ ಅಪಘಾತ ಸಂಭವಿಸಿದ್ದು, ಓಮ್ನಿ ಚಲಾಯಿಸುತ್ತಿದ್ದ ಸೋಮವಾರ ಪೇಟೆಯ ಚೌಡ್ಲು ಗ್ರಾಮದ ಕೆಂಚುಮನೆ ನಿವಾಸಿ ರವಿ (53), ಆಸ್ಪತ್ರೆಗೆ ಸಾಗಿಸುವ ಹಾದಿಯಲ್ಲಿ ಮೃತಪಟ್ಟಿದ್ದಾರೆ.
ರವಿ ಅವರ ತಾಯಿ ಮಣಿಯಮ್ಮ(75), ಪತ್ನಿ ವಾಣಿ (47), ಪುತ್ರಿ ರಿಷಾ (19), ಪುತ್ರ ಶರಣ್ (10), ಸಹೋದರ ಯೋಗೇಶ್ (55), ಅವರ ಪತ್ನಿ ನೀತು (45), ಪುತ್ರಿ ನೇಹಾ (24), ಪುತ್ರ ಅಂಜನ್ (14) ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ.
ಕಡಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ತಿರುವಿನಲ್ಲಿ ರಸ್ತೆ ಕಿರಿದಾಗಿದ್ದು ರಸ್ತೆಗೆ ತಾಗಿದಂತೆ ಇರುವ ವಿದ್ಯುತ್ ಕಂಬದಿಂದಾಗಿ ಅಲ್ಲಿ ಹಲವು ಅಪಘಾತಗಳು ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.ಮೃತ ರವಿ ಸೋಮವಾರಪೇಟೆಯಲ್ಲಿ ಪತ್ರಕರ್ತರಾಗಿದ್ದ ದಿವಂಗತ ಬಿ.ಎನ್.ಗೋವಿಂದಪ್ಪನವರ ಅಣ್ಣನ ಮಗ. ಇವರು ಸಹ ಪತ್ರಿಕಾ ವಿತರಕರಾಗಿದ್ದರು.
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಆರಂಭದಲ್ಲೇ ರಾಜಕೀಯ ಆಘಾತ ಎದುರಾಗಿದೆ. ಸಚಿವ ರಾಮಲಿಂಗ ರೆಡ್ಡಿ ತಮ್ಮ…
ಭಾರತದ ಬಹಳಷ್ಟು ಮಧ್ಯಮ ವರ್ಗದ ಜನರಲ್ಲಿ ಜೀವನೋತ್ಸಾಹ ಕಡಿಮೆಯಾಗುತ್ತಿದೇಯೇ ಎಂಬ ಅನುಮಾನ ಶುರುವಾಗಿದೆ. ನಿಜಕ್ಕೂ ಬೃಹತ್ ಸಂಖ್ಯೆಯ ಮಧ್ಯಮ ವರ್ಗದವರು…
ದೊಡ್ಡಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಜನಸಾಮಾನ್ಯರ ನೆಮ್ಮದಿ ಕದಡಿದೆ. ಮಹಿಳೆಯರ ಚಿನ್ನಾಭರಣ,…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ತಮ್ಮೊಂದಿಗೆ ಬುಧವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 13 ಸಚಿವರಿಗೆ ಗುರುವಾರ ಖಾತೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…
ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…