ಓಮ್ನಿ ಹಾಗೂ ಕ್ರೆಟಾ ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟು, ಓಮ್ನಿಯಲ್ಲಿದ್ದ 8 ಮಂದಿ ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಶನಿವಾರ ಮಧ್ಯಾಹ್ನ ನಡೆದಿದೆ.
ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಓಮ್ನಿ ಹಾಗೂ ವಿರುದ್ಧ ದಿಕ್ಕಿನಿಂದ ತೆರಳುತ್ತಿದ್ದ ಕ್ರೆಟಾ ನಡುವೆ ಮರ್ಧಾಳ ಸಮೀಪದ ಅಳೇರಿ ಎಂಬಲ್ಲಿ ತಿರುವಿನಲ್ಲಿ ಅಪಘಾತ ಸಂಭವಿಸಿದ್ದು, ಓಮ್ನಿ ಚಲಾಯಿಸುತ್ತಿದ್ದ ಸೋಮವಾರ ಪೇಟೆಯ ಚೌಡ್ಲು ಗ್ರಾಮದ ಕೆಂಚುಮನೆ ನಿವಾಸಿ ರವಿ (53), ಆಸ್ಪತ್ರೆಗೆ ಸಾಗಿಸುವ ಹಾದಿಯಲ್ಲಿ ಮೃತಪಟ್ಟಿದ್ದಾರೆ.
ರವಿ ಅವರ ತಾಯಿ ಮಣಿಯಮ್ಮ(75), ಪತ್ನಿ ವಾಣಿ (47), ಪುತ್ರಿ ರಿಷಾ (19), ಪುತ್ರ ಶರಣ್ (10), ಸಹೋದರ ಯೋಗೇಶ್ (55), ಅವರ ಪತ್ನಿ ನೀತು (45), ಪುತ್ರಿ ನೇಹಾ (24), ಪುತ್ರ ಅಂಜನ್ (14) ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ.
ಕಡಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ತಿರುವಿನಲ್ಲಿ ರಸ್ತೆ ಕಿರಿದಾಗಿದ್ದು ರಸ್ತೆಗೆ ತಾಗಿದಂತೆ ಇರುವ ವಿದ್ಯುತ್ ಕಂಬದಿಂದಾಗಿ ಅಲ್ಲಿ ಹಲವು ಅಪಘಾತಗಳು ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.ಮೃತ ರವಿ ಸೋಮವಾರಪೇಟೆಯಲ್ಲಿ ಪತ್ರಕರ್ತರಾಗಿದ್ದ ದಿವಂಗತ ಬಿ.ಎನ್.ಗೋವಿಂದಪ್ಪನವರ ಅಣ್ಣನ ಮಗ. ಇವರು ಸಹ ಪತ್ರಿಕಾ ವಿತರಕರಾಗಿದ್ದರು.
ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…