ಸುಮಾರು ಆರು ತಿಂಗಳಿಂದೆ ಕಳುವಾಗಿದ್ದ ವೃದ್ಧೆಯ ಕರಿಮಣಿ ಸರ: ಕಳ್ಳರನ್ನ ಬೇಟೆಯಾಡಿ ಸರ ವಶಪಡಿಸಿಕೊಂಡ ಗ್ರಾಮಾಂತರ ಠಾಣಾ ಪೊಲೀಸರು: ಇಂದು ವೃದ್ಧೆಗೆ ಕರಿಮಣಿ ಸರವನ್ನು ಒಪ್ಪಿಸಿದ ಗ್ರಾಮಾಂತರ ಠಾಣಾ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ: ವೃದ್ಧೆ ಮುಖದಲ್ಲಿ‌‌ ಮಂದಹಾಸ

ಸುಮಾರು ಆರು ತಿಂಗಳ ಹಿಂದೆ(20.12.2023) ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದ ಸರಗಳ್ಳತನ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಇಂದು ಕಳುವಾಗಿದ್ದ ಕರಿಮಣಿ ಸರವನ್ನು ವೃದ್ಧೆಗೆ ಮರಳಿಸಿರುವ ಘಟನೆ ನಡೆದಿದೆ.

ತಾಲೂಕಿನ ನಾರಸಿಂಹನಹಳ್ಳಿ ಗ್ರಾಮದ ವೆಂಕಟಲಕ್ಷ್ಮಮ್ಮ ಎಂಬ ವೃದ್ಧೆಯ ಕೊರಳಲ್ಲಿದ್ದ 10 ಗ್ರಾಂ ತೂಕದ ಕರಿಮಣಿ ಸರವನ್ನು ದ್ವಿಚಕ್ರ ವಾಹನದಲ್ಲಿ ಬಂದ ಕಳ್ಳರು ಕದ್ದು ಎಸ್ಕೇಪ್ ಆಗಿದ್ದರು.

ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವೃದ್ಧೆ ದೂರು ದಾಖಲು ಮಾಡಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಇನ್ಸ್ಪೆಕ್ಟರ್ ಸಾಧಿಕ್ ಪಾಷಾ ಅವರ ನೇತೃತ್ವದ ತಂಡ, ಸೂಕ್ತ ತನಿಖೆ ನಡೆಸಿ ಕಳ್ಳರ ಜಾಡು ಪತ್ತೆಹಚ್ಚಿ ಕದ್ದ ಕರಿಮಣಿ ಸರವನ್ನು ವಶಪಡಿಸಿಕೊಂಡು, ವೃದ್ಧೆಗೆ ಒಪ್ಪಿಸಿದ್ದಾರೆ.

ಆರು ತಿಂಗಳು ಬಳಿಕ ತನ್ನ ಕರಿಮಣಿ‌ಸರ ಪಡೆದ ನಂತರ ವೃದ್ಧೆಯ ಮುಖದಲ್ಲಿ ಮಂದಹಾಸ ಮೂಡಿತ್ತು. ಪೊಲೀಸರ ಕಾರ್ಯವೈಖರಿಗೆ ವೃದ್ಧೆ ತನ್ನ ಕೃತಜ್ಞತೆಗಳನ್ನು ತಿಳಿಸಿದರು.

ಘಟನೆ ವಿವರ:

20-12-2023ರಂದು ಬೆಳಗ್ಗೆ ಎಂದಿನಂತೆ ಹಸುವನ್ನು ಮೇಯಿಸಲು ವೃದ್ಧೆ ತಮ್ಮ ಜಮೀನಿನ ಬಳಿ ಬಂದಿರುತ್ತಾರೆ. ಒಂಟಿಯಾಗಿ ಹಸುವನ್ನು ಮೇಯಿಸುತ್ತಿದ್ದ ವೃದ್ಧೆಯನ್ನು ಗಮನಿಸಿದ ಇಬ್ಬರು ಕಳ್ಳರು, ಅದರಲ್ಲಿ ಒಬ್ಬ ಮಧ್ಯಾಹ್ನ 3ಗಂಟೆ ಸುಮಾರಿಗೆ ಅಜ್ಜಿ ಕುಳಿತ್ತಿದ್ದ ಸ್ಥಳಕ್ಕೆ ಬರುತ್ತಾನೆ. ಅಜ್ಜಿ ಬಳಿ ಬಂದಾತ ಇಲ್ಲಿ ಕಳ್ಳರು ಹೆಚ್ಚಾಗಿ ಓಡಾಡುತ್ತಾರೆ. ಕೊರಳಲ್ಲಿ ಚಿನ್ನದ ಗುಂಡುಗಳಿರುವ ಕರಿಮಣಿ ಸರವನ್ನು ಹಾಕಿಕೊಂಡಿದ್ದೀರಾ‌, ಅದನ್ನು ಬಿಚ್ಚಿಕೊಡಿ ಬಟ್ಟೆಯಲ್ಲಿ ಸುತ್ತಿಕೊಡುತ್ತೇವೆ ಎಂದು ಹೇಳಿ ಕತ್ತಲ್ಲಿದ್ದ ಚಿನ್ನದ ಗುಂಡುಗಳೊಂದಿಗೆ ಪೋಣಿಸಿರುವ ಮಣಿ ಇರುವ ಸರವನ್ನು ಬಿಚ್ಚಿಸಿಕೊಂಡು ಅಜ್ಜಿಗೆ ಅರಿವಿಲ್ಲದಂತೆ ಕಳುವು ಮಾಡಿ ಪರಾರಿಯಾಗಿದ್ದನು.

ಸುಮಾರು 50ಸಾವಿರ ಬೆಲೆಬಾಳುವ ಮಣಿಗಳೊಂದಿಗೆ ಪೋಣಿಸಿರುವ 34 ಚಿನ್ನದ ಗುಂಡುಗಳು ಸುಮಾರು 10 ಗ್ರಾಂ ತೂಕದ ಕರಿಮಣಿ ಸರವನ್ನು ಕದ್ದೊಯ್ದಿದ್ದರು. ಈ ಕುರಿತು 21-13-2023ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

Ramesh Babu

Journalist

Recent Posts

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

3 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

5 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

8 hours ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

9 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

12 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

12 hours ago