ಸುಮಾರು ಆರು ತಿಂಗಳಿಂದೆ ಕಳುವಾಗಿದ್ದ ವೃದ್ಧೆಯ ಕರಿಮಣಿ ಸರ: ಕಳ್ಳರನ್ನ ಬೇಟೆಯಾಡಿ ಸರ ವಶಪಡಿಸಿಕೊಂಡ ಗ್ರಾಮಾಂತರ ಠಾಣಾ ಪೊಲೀಸರು: ಇಂದು ವೃದ್ಧೆಗೆ ಕರಿಮಣಿ ಸರವನ್ನು ಒಪ್ಪಿಸಿದ ಗ್ರಾಮಾಂತರ ಠಾಣಾ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ: ವೃದ್ಧೆ ಮುಖದಲ್ಲಿ‌‌ ಮಂದಹಾಸ

ಸುಮಾರು ಆರು ತಿಂಗಳ ಹಿಂದೆ(20.12.2023) ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದ ಸರಗಳ್ಳತನ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಇಂದು ಕಳುವಾಗಿದ್ದ ಕರಿಮಣಿ ಸರವನ್ನು ವೃದ್ಧೆಗೆ ಮರಳಿಸಿರುವ ಘಟನೆ ನಡೆದಿದೆ.

ತಾಲೂಕಿನ ನಾರಸಿಂಹನಹಳ್ಳಿ ಗ್ರಾಮದ ವೆಂಕಟಲಕ್ಷ್ಮಮ್ಮ ಎಂಬ ವೃದ್ಧೆಯ ಕೊರಳಲ್ಲಿದ್ದ 10 ಗ್ರಾಂ ತೂಕದ ಕರಿಮಣಿ ಸರವನ್ನು ದ್ವಿಚಕ್ರ ವಾಹನದಲ್ಲಿ ಬಂದ ಕಳ್ಳರು ಕದ್ದು ಎಸ್ಕೇಪ್ ಆಗಿದ್ದರು.

ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವೃದ್ಧೆ ದೂರು ದಾಖಲು ಮಾಡಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಇನ್ಸ್ಪೆಕ್ಟರ್ ಸಾಧಿಕ್ ಪಾಷಾ ಅವರ ನೇತೃತ್ವದ ತಂಡ, ಸೂಕ್ತ ತನಿಖೆ ನಡೆಸಿ ಕಳ್ಳರ ಜಾಡು ಪತ್ತೆಹಚ್ಚಿ ಕದ್ದ ಕರಿಮಣಿ ಸರವನ್ನು ವಶಪಡಿಸಿಕೊಂಡು, ವೃದ್ಧೆಗೆ ಒಪ್ಪಿಸಿದ್ದಾರೆ.

ಆರು ತಿಂಗಳು ಬಳಿಕ ತನ್ನ ಕರಿಮಣಿ‌ಸರ ಪಡೆದ ನಂತರ ವೃದ್ಧೆಯ ಮುಖದಲ್ಲಿ ಮಂದಹಾಸ ಮೂಡಿತ್ತು. ಪೊಲೀಸರ ಕಾರ್ಯವೈಖರಿಗೆ ವೃದ್ಧೆ ತನ್ನ ಕೃತಜ್ಞತೆಗಳನ್ನು ತಿಳಿಸಿದರು.

ಘಟನೆ ವಿವರ:

20-12-2023ರಂದು ಬೆಳಗ್ಗೆ ಎಂದಿನಂತೆ ಹಸುವನ್ನು ಮೇಯಿಸಲು ವೃದ್ಧೆ ತಮ್ಮ ಜಮೀನಿನ ಬಳಿ ಬಂದಿರುತ್ತಾರೆ. ಒಂಟಿಯಾಗಿ ಹಸುವನ್ನು ಮೇಯಿಸುತ್ತಿದ್ದ ವೃದ್ಧೆಯನ್ನು ಗಮನಿಸಿದ ಇಬ್ಬರು ಕಳ್ಳರು, ಅದರಲ್ಲಿ ಒಬ್ಬ ಮಧ್ಯಾಹ್ನ 3ಗಂಟೆ ಸುಮಾರಿಗೆ ಅಜ್ಜಿ ಕುಳಿತ್ತಿದ್ದ ಸ್ಥಳಕ್ಕೆ ಬರುತ್ತಾನೆ. ಅಜ್ಜಿ ಬಳಿ ಬಂದಾತ ಇಲ್ಲಿ ಕಳ್ಳರು ಹೆಚ್ಚಾಗಿ ಓಡಾಡುತ್ತಾರೆ. ಕೊರಳಲ್ಲಿ ಚಿನ್ನದ ಗುಂಡುಗಳಿರುವ ಕರಿಮಣಿ ಸರವನ್ನು ಹಾಕಿಕೊಂಡಿದ್ದೀರಾ‌, ಅದನ್ನು ಬಿಚ್ಚಿಕೊಡಿ ಬಟ್ಟೆಯಲ್ಲಿ ಸುತ್ತಿಕೊಡುತ್ತೇವೆ ಎಂದು ಹೇಳಿ ಕತ್ತಲ್ಲಿದ್ದ ಚಿನ್ನದ ಗುಂಡುಗಳೊಂದಿಗೆ ಪೋಣಿಸಿರುವ ಮಣಿ ಇರುವ ಸರವನ್ನು ಬಿಚ್ಚಿಸಿಕೊಂಡು ಅಜ್ಜಿಗೆ ಅರಿವಿಲ್ಲದಂತೆ ಕಳುವು ಮಾಡಿ ಪರಾರಿಯಾಗಿದ್ದನು.

ಸುಮಾರು 50ಸಾವಿರ ಬೆಲೆಬಾಳುವ ಮಣಿಗಳೊಂದಿಗೆ ಪೋಣಿಸಿರುವ 34 ಚಿನ್ನದ ಗುಂಡುಗಳು ಸುಮಾರು 10 ಗ್ರಾಂ ತೂಕದ ಕರಿಮಣಿ ಸರವನ್ನು ಕದ್ದೊಯ್ದಿದ್ದರು. ಈ ಕುರಿತು 21-13-2023ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

Ramesh Babu

Journalist

Recent Posts

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

13 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

19 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

1 day ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

1 day ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

2 days ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

2 days ago