ಸುಮಾರು ಆರು ತಿಂಗಳಿಂದೆ ಕಳುವಾಗಿದ್ದ ವೃದ್ಧೆಯ ಕರಿಮಣಿ ಸರ: ಕಳ್ಳರನ್ನ ಬೇಟೆಯಾಡಿ ಸರ ವಶಪಡಿಸಿಕೊಂಡ ಗ್ರಾಮಾಂತರ ಠಾಣಾ ಪೊಲೀಸರು: ಇಂದು ವೃದ್ಧೆಗೆ ಕರಿಮಣಿ ಸರವನ್ನು ಒಪ್ಪಿಸಿದ ಗ್ರಾಮಾಂತರ ಠಾಣಾ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ: ವೃದ್ಧೆ ಮುಖದಲ್ಲಿ‌‌ ಮಂದಹಾಸ

ಸುಮಾರು ಆರು ತಿಂಗಳ ಹಿಂದೆ(20.12.2023) ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದ ಸರಗಳ್ಳತನ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಇಂದು ಕಳುವಾಗಿದ್ದ ಕರಿಮಣಿ ಸರವನ್ನು ವೃದ್ಧೆಗೆ ಮರಳಿಸಿರುವ ಘಟನೆ ನಡೆದಿದೆ.

ತಾಲೂಕಿನ ನಾರಸಿಂಹನಹಳ್ಳಿ ಗ್ರಾಮದ ವೆಂಕಟಲಕ್ಷ್ಮಮ್ಮ ಎಂಬ ವೃದ್ಧೆಯ ಕೊರಳಲ್ಲಿದ್ದ 10 ಗ್ರಾಂ ತೂಕದ ಕರಿಮಣಿ ಸರವನ್ನು ದ್ವಿಚಕ್ರ ವಾಹನದಲ್ಲಿ ಬಂದ ಕಳ್ಳರು ಕದ್ದು ಎಸ್ಕೇಪ್ ಆಗಿದ್ದರು.

ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವೃದ್ಧೆ ದೂರು ದಾಖಲು ಮಾಡಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಇನ್ಸ್ಪೆಕ್ಟರ್ ಸಾಧಿಕ್ ಪಾಷಾ ಅವರ ನೇತೃತ್ವದ ತಂಡ, ಸೂಕ್ತ ತನಿಖೆ ನಡೆಸಿ ಕಳ್ಳರ ಜಾಡು ಪತ್ತೆಹಚ್ಚಿ ಕದ್ದ ಕರಿಮಣಿ ಸರವನ್ನು ವಶಪಡಿಸಿಕೊಂಡು, ವೃದ್ಧೆಗೆ ಒಪ್ಪಿಸಿದ್ದಾರೆ.

ಆರು ತಿಂಗಳು ಬಳಿಕ ತನ್ನ ಕರಿಮಣಿ‌ಸರ ಪಡೆದ ನಂತರ ವೃದ್ಧೆಯ ಮುಖದಲ್ಲಿ ಮಂದಹಾಸ ಮೂಡಿತ್ತು. ಪೊಲೀಸರ ಕಾರ್ಯವೈಖರಿಗೆ ವೃದ್ಧೆ ತನ್ನ ಕೃತಜ್ಞತೆಗಳನ್ನು ತಿಳಿಸಿದರು.

ಘಟನೆ ವಿವರ:

20-12-2023ರಂದು ಬೆಳಗ್ಗೆ ಎಂದಿನಂತೆ ಹಸುವನ್ನು ಮೇಯಿಸಲು ವೃದ್ಧೆ ತಮ್ಮ ಜಮೀನಿನ ಬಳಿ ಬಂದಿರುತ್ತಾರೆ. ಒಂಟಿಯಾಗಿ ಹಸುವನ್ನು ಮೇಯಿಸುತ್ತಿದ್ದ ವೃದ್ಧೆಯನ್ನು ಗಮನಿಸಿದ ಇಬ್ಬರು ಕಳ್ಳರು, ಅದರಲ್ಲಿ ಒಬ್ಬ ಮಧ್ಯಾಹ್ನ 3ಗಂಟೆ ಸುಮಾರಿಗೆ ಅಜ್ಜಿ ಕುಳಿತ್ತಿದ್ದ ಸ್ಥಳಕ್ಕೆ ಬರುತ್ತಾನೆ. ಅಜ್ಜಿ ಬಳಿ ಬಂದಾತ ಇಲ್ಲಿ ಕಳ್ಳರು ಹೆಚ್ಚಾಗಿ ಓಡಾಡುತ್ತಾರೆ. ಕೊರಳಲ್ಲಿ ಚಿನ್ನದ ಗುಂಡುಗಳಿರುವ ಕರಿಮಣಿ ಸರವನ್ನು ಹಾಕಿಕೊಂಡಿದ್ದೀರಾ‌, ಅದನ್ನು ಬಿಚ್ಚಿಕೊಡಿ ಬಟ್ಟೆಯಲ್ಲಿ ಸುತ್ತಿಕೊಡುತ್ತೇವೆ ಎಂದು ಹೇಳಿ ಕತ್ತಲ್ಲಿದ್ದ ಚಿನ್ನದ ಗುಂಡುಗಳೊಂದಿಗೆ ಪೋಣಿಸಿರುವ ಮಣಿ ಇರುವ ಸರವನ್ನು ಬಿಚ್ಚಿಸಿಕೊಂಡು ಅಜ್ಜಿಗೆ ಅರಿವಿಲ್ಲದಂತೆ ಕಳುವು ಮಾಡಿ ಪರಾರಿಯಾಗಿದ್ದನು.

ಸುಮಾರು 50ಸಾವಿರ ಬೆಲೆಬಾಳುವ ಮಣಿಗಳೊಂದಿಗೆ ಪೋಣಿಸಿರುವ 34 ಚಿನ್ನದ ಗುಂಡುಗಳು ಸುಮಾರು 10 ಗ್ರಾಂ ತೂಕದ ಕರಿಮಣಿ ಸರವನ್ನು ಕದ್ದೊಯ್ದಿದ್ದರು. ಈ ಕುರಿತು 21-13-2023ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

Ramesh Babu

Journalist

Recent Posts

ನಂದಿಗಿರಿಧಾಮದಲ್ಲಿ ಕೆಎಸ್‌ಟಿಡಿಸಿಯ ನೂತನ ‘ಮಯೂರ ಸನ್‌ರೈಸ್ ರೆಸ್ಟೋರೆಂಟ್’ ಉದ್ಘಾಟನೆ: ನಂದಿಬೆಟ್ಟದ ಸಂಚಾರ ದಟ್ಟಣೆಗೆ ರೋಪ್‌ವೇ ಹಾಗೂ ಸಮಗ್ರ ಪಾರ್ಕಿಂಗ್ ಯೋಜನೆ- ಸಚಿವ ಕೆ.ಜೆ ಜಾರ್ಜ್

ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿರುವ ಮಯೂರ ಹೋಟೆಲ್‌ಗಳು ಹಾಗೂ ಇತರೆ…

9 hours ago

ಸಮಾಜಸೇವಕ ಮಹೇಂದ್ರ ಬಾಬುಗೆ ಅದ್ಧೂರಿ ಜನ್ಮದಿನ ಆಚರಣೆ

ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್‌ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…

20 hours ago

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

1 day ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

1 day ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

1 day ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

2 days ago