ಸುಮಾರು 25 ವರ್ಷದ ಅಪರಿಚಿತ ಮಹಿಳೆಯ ಶವ ಪತ್ತೆ: ಶವದ ಗುರುತು ಸಿಗದಂತೆ ಬೆಂಕಿ ಹಚ್ಚಿ ಪರಾರಿಯಾಗಿರುವ ಹಂತಕರು: ಸುಮಾರು 15 -20 ದಿನಗಳ ಹಿಂದೆ ನಡೆದಿರುವ ಘಟನೆ: ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ಅಪರಿಚಿತ ಮಹಿಳೆಯನ್ನು ಭೀಕರವಾಗಿ ಕೊಲೆ ಮಾಡಿ, ಶವದ ಗುರುತು ಸಿಗದಂತೆ ನಿರ್ಜನ‌ ಪ್ರದೇಶದಲ್ಲಿ ಬೆಂಕಿ ಹಚ್ಚಿ ಹಂತಕರು ಪರಾರಿಯಾಗಿರುವ ಘಟನೆ ತಾಲೂಕಿನ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಬಳಿ ನಡೆದಿದೆ.

ಸುಮಾರು 15 -20 ದಿನಗಳ ಹಿಂದೆ ಘಟನೆ ನಡೆದಿದೆ ಎನ್ನಲಾಗಿದ್ದು, ಇಂದು‌ ಬೆಳಕಿಗೆ ಬಂದಿದೆ. 25 ವರ್ಷದ್ದಿರಬಹುದು ಎಂದು ಶಂಕಿಸಲಾಗುತ್ತಿರುವ ಮಹಿಳೆಯ ಮೃತ ಗುರುತು ಸಿಗದಷ್ಟು ಕೊಳೆತು ಹೋಗಿದೆ ಎನ್ನಲಾಗಿದೆ.

ಜಕ್ಕಲಮೊಡಗು ಜಲಾಶಯಕ್ಕೆ ಸಾಗುವ ರಸ್ತೆಯಲ್ಲಿನ ನಾರಸಿಂಹನಹಳ್ಳಿ ಸಮೀಪದ ಪೊದೆಯಲ್ಲಿ ಅರಣ್ಯ ಇಲಾಖೆಯ ಗಾರ್ಡ್‌ಗೆ ಶವ ಕಂಡು ಬಂದಿದ್ದು, ಡಿವೈಎಎಸ್ಪಿ ಪಿ.ರವಿ ಹಾಗೂ ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಸಾಧಿಕ್ ಪಾಷಾ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತಳ ಗುರುತು, ದಾಖಲೆ, ಮಾಹಿತಿ ಯಾವುದು ಇಲ್ಲವಾಗಿರುವುದರಿಂದ ಪ್ರಕರಣ ಭೇದಿಸುವುದು, ಹಂತಕರ ಪತ್ತೆ ಹಚ್ಚುವುದು ಪೊಲೀಸರಿಗೆ ಸವಾಲಿನ‌ ಕೆಲಸವಾಗಿದೆ ಎನ್ನಲಾಗುತ್ತಿದೆ.

Ramesh Babu

Journalist

Recent Posts

ಪರೀಕ್ಷಾ ಅಕ್ರಮಗಳು……

ನೀಟ್ ಪ್ರವೇಶ ಪರೀಕ್ಷೆ.... ಆಡಳಿತಗಾರ ರಾಜಕಾರಣಿಗಳ ಸಂಪೂರ್ಣ ವೈಫಲ್ಯ, ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ, ಪೋಷಕರ ಅತಿಯಾದ ದುರಾಸೆ, ವಿದ್ಯಾರ್ಥಿಗಳ ನಿರ್ಲಜ್ಜತೆ…

5 minutes ago

ಮುತ್ತತ್ತಿಯಲ್ಲಿ ದುರಂತ: ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರು ಸಾವು

ರಾಮನಗರ: ಮುತ್ತತ್ತಿಯ ಕಾವೇರಿ ನದಿಯಲ್ಲಿ ಫೋಟೋ ತೆಗೆಯಲು ನೀರಿಗೆ ಇಳಿದ ವೇಳೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಐವರು ನೀರಿನಲ್ಲಿ…

1 hour ago

ಹುಸ್ಕೂರಲ್ಲಿ ಶ್ರೀ ಸಪ್ಪಲಮ್ಮದೇವಿ–ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…

15 hours ago

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

17 hours ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

20 hours ago

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

1 day ago