ಸುಮಾರು 40 ಸಾವಿರ ರೂ. ಮೌಲ್ಯದ 13 ಕೆಜಿ 200 ಗ್ರಾಂ ತೂಕದ ಕನಕಾಂಬರ ಹೂ ಕಳ್ಳತನ ನಡೆದಿರುವ ಘಟನೆ ನಗರದ ಡಿಕ್ರಾಸ್ ಬಳಿ ನಡೆದಿದೆ.
ರತ್ನಾಕರ ಎಂಬ ಹೂ ಮಾರಾಟಗಾರ ವರಮಹಾಲಕ್ಷ್ಮಿ ಹಬ್ಬಕ್ಕೆ ಹೂ ಮಾರಾಟ ಮಾಡಲು ಕೋಟಾಲದಿನ್ನೆ, ಗೌರಿಬಿದನೂರು ಸೇರಿದಂತೆ ವಿವಿಧೆಡೆ ಕನಕಾಂಬರ ಹೂ ಖರೀದಿಸಿ ಡಿಕ್ರಾಸ್ ಗೆ ತಂದಿದ್ದರು. ಆದರೆ, ಈಗ ಹೂ ಕಳೆದುಕೊಂಡು ಸಂಕಷ್ಟದಲ್ಲಿದ್ದಾರೆ.
ಡಿಕ್ರಾಸ್ ಬಳಿ ಹೂ ಕಾರಿನಿಂದ ಹೂ ಚೀಲಗಳನ್ನು ಇಳಿಸಿದ್ದರು. ಹೂ ಚೀಲ ಇಳಿಸಿ ಅವುಗಳನ್ನು ಅಲ್ಲೇ ಬಿಟ್ಟು ತುರ್ತು ಕೆಲಸದ ನಿಮಿತ್ತ ಬೇರೆಡೆ ಹೋಗಿ ಬರುವಷ್ಟರಲ್ಲಿ ಹೂ ಚೀಲಗಳನ್ನು ಕಳ್ಳರು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ.
ಒಂದು ಕೆಜಿ ಬಿಡಿ ಕನಕಾಂಬರ ಹೂಗೆ 3ಸಾವಿರ ರೂ. ನಂತೆ ಖರೀದಿಸಿ ತಂದಿದ್ದರು. ಇದೀಗ ಹೂ ಮಾರಾಟಗಾರ ಹೂ ಕಳೆದುಕೊಂಡು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ.
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…