ಸುಮಾರು 40 ಸಾವಿರ ರೂ. ಮೌಲ್ಯದ 13 ಕೆಜಿ 200 ಗ್ರಾಂ ತೂಕದ ಕನಕಾಂಬರ ಹೂ ಕಳ್ಳತನ ನಡೆದಿರುವ ಘಟನೆ ನಗರದ ಡಿಕ್ರಾಸ್ ಬಳಿ ನಡೆದಿದೆ.
ರತ್ನಾಕರ ಎಂಬ ಹೂ ಮಾರಾಟಗಾರ ವರಮಹಾಲಕ್ಷ್ಮಿ ಹಬ್ಬಕ್ಕೆ ಹೂ ಮಾರಾಟ ಮಾಡಲು ಕೋಟಾಲದಿನ್ನೆ, ಗೌರಿಬಿದನೂರು ಸೇರಿದಂತೆ ವಿವಿಧೆಡೆ ಕನಕಾಂಬರ ಹೂ ಖರೀದಿಸಿ ಡಿಕ್ರಾಸ್ ಗೆ ತಂದಿದ್ದರು. ಆದರೆ, ಈಗ ಹೂ ಕಳೆದುಕೊಂಡು ಸಂಕಷ್ಟದಲ್ಲಿದ್ದಾರೆ.
ಡಿಕ್ರಾಸ್ ಬಳಿ ಹೂ ಕಾರಿನಿಂದ ಹೂ ಚೀಲಗಳನ್ನು ಇಳಿಸಿದ್ದರು. ಹೂ ಚೀಲ ಇಳಿಸಿ ಅವುಗಳನ್ನು ಅಲ್ಲೇ ಬಿಟ್ಟು ತುರ್ತು ಕೆಲಸದ ನಿಮಿತ್ತ ಬೇರೆಡೆ ಹೋಗಿ ಬರುವಷ್ಟರಲ್ಲಿ ಹೂ ಚೀಲಗಳನ್ನು ಕಳ್ಳರು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ.
ಒಂದು ಕೆಜಿ ಬಿಡಿ ಕನಕಾಂಬರ ಹೂಗೆ 3ಸಾವಿರ ರೂ. ನಂತೆ ಖರೀದಿಸಿ ತಂದಿದ್ದರು. ಇದೀಗ ಹೂ ಮಾರಾಟಗಾರ ಹೂ ಕಳೆದುಕೊಂಡು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ.
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…