ಸುಮಾರು 40 ಸಾವಿರ ರೂ. ಮೌಲ್ಯದ 13 ಕೆಜಿ 200 ಗ್ರಾಂ ತೂಕದ ಕನಕಾಂಬರ ಹೂ ಕಳ್ಳತನ ನಡೆದಿರುವ ಘಟನೆ ನಗರದ ಡಿಕ್ರಾಸ್ ಬಳಿ ನಡೆದಿದೆ.
ರತ್ನಾಕರ ಎಂಬ ಹೂ ಮಾರಾಟಗಾರ ವರಮಹಾಲಕ್ಷ್ಮಿ ಹಬ್ಬಕ್ಕೆ ಹೂ ಮಾರಾಟ ಮಾಡಲು ಕೋಟಾಲದಿನ್ನೆ, ಗೌರಿಬಿದನೂರು ಸೇರಿದಂತೆ ವಿವಿಧೆಡೆ ಕನಕಾಂಬರ ಹೂ ಖರೀದಿಸಿ ಡಿಕ್ರಾಸ್ ಗೆ ತಂದಿದ್ದರು. ಆದರೆ, ಈಗ ಹೂ ಕಳೆದುಕೊಂಡು ಸಂಕಷ್ಟದಲ್ಲಿದ್ದಾರೆ.
ಡಿಕ್ರಾಸ್ ಬಳಿ ಹೂ ಕಾರಿನಿಂದ ಹೂ ಚೀಲಗಳನ್ನು ಇಳಿಸಿದ್ದರು. ಹೂ ಚೀಲ ಇಳಿಸಿ ಅವುಗಳನ್ನು ಅಲ್ಲೇ ಬಿಟ್ಟು ತುರ್ತು ಕೆಲಸದ ನಿಮಿತ್ತ ಬೇರೆಡೆ ಹೋಗಿ ಬರುವಷ್ಟರಲ್ಲಿ ಹೂ ಚೀಲಗಳನ್ನು ಕಳ್ಳರು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ.
ಒಂದು ಕೆಜಿ ಬಿಡಿ ಕನಕಾಂಬರ ಹೂಗೆ 3ಸಾವಿರ ರೂ. ನಂತೆ ಖರೀದಿಸಿ ತಂದಿದ್ದರು. ಇದೀಗ ಹೂ ಮಾರಾಟಗಾರ ಹೂ ಕಳೆದುಕೊಂಡು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ.
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…