ಸುಮಾರು 40 ಸಾವಿರ ರೂ. ಮೌಲ್ಯದ 13 ಕೆಜಿ 200 ಗ್ರಾಂ ತೂಕದ ಕನಕಾಂಬರ ಹೂ ಕಳ್ಳತನ ನಡೆದಿರುವ ಘಟನೆ ನಗರದ ಡಿಕ್ರಾಸ್ ಬಳಿ ನಡೆದಿದೆ.
ರತ್ನಾಕರ ಎಂಬ ಹೂ ಮಾರಾಟಗಾರ ವರಮಹಾಲಕ್ಷ್ಮಿ ಹಬ್ಬಕ್ಕೆ ಹೂ ಮಾರಾಟ ಮಾಡಲು ಕೋಟಾಲದಿನ್ನೆ, ಗೌರಿಬಿದನೂರು ಸೇರಿದಂತೆ ವಿವಿಧೆಡೆ ಕನಕಾಂಬರ ಹೂ ಖರೀದಿಸಿ ಡಿಕ್ರಾಸ್ ಗೆ ತಂದಿದ್ದರು. ಆದರೆ, ಈಗ ಹೂ ಕಳೆದುಕೊಂಡು ಸಂಕಷ್ಟದಲ್ಲಿದ್ದಾರೆ.
ಡಿಕ್ರಾಸ್ ಬಳಿ ಹೂ ಕಾರಿನಿಂದ ಹೂ ಚೀಲಗಳನ್ನು ಇಳಿಸಿದ್ದರು. ಹೂ ಚೀಲ ಇಳಿಸಿ ಅವುಗಳನ್ನು ಅಲ್ಲೇ ಬಿಟ್ಟು ತುರ್ತು ಕೆಲಸದ ನಿಮಿತ್ತ ಬೇರೆಡೆ ಹೋಗಿ ಬರುವಷ್ಟರಲ್ಲಿ ಹೂ ಚೀಲಗಳನ್ನು ಕಳ್ಳರು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ.
ಒಂದು ಕೆಜಿ ಬಿಡಿ ಕನಕಾಂಬರ ಹೂಗೆ 3ಸಾವಿರ ರೂ. ನಂತೆ ಖರೀದಿಸಿ ತಂದಿದ್ದರು. ಇದೀಗ ಹೂ ಮಾರಾಟಗಾರ ಹೂ ಕಳೆದುಕೊಂಡು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ.
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…