Categories: Home

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ ನಡೆದಿರುವ ಆರೋಪದ ಹಿನ್ನೆಲೆಯಲ್ಲಿ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಸ್ವಯಂಪೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಉಪವಿಭಾಗಾಧಿಕಾರಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ನಕಲಿ ಆದೇಶಗಳನ್ನು ಸೃಷ್ಟಿಸಿ, ಭೂಮಿ ತಂತ್ರಾAಶದಲ್ಲಿ ಅಪ್‌ಲೋಡ್ ಮಾಡಿ ಖಾತೆ ಬದಲಾವಣೆಗೆ ಅನುಮೋದನೆ ನೀಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ತಿಳಿದುಬಂದಿದೆ.

ಲೋಕಾಯುಕ್ತ ಪೊಲೀಸ್ ವರದಿ ಪ್ರಕಾರ, ಸಂಬಂಧಿತ ಜಮೀನಿನ ಉಪನೋಂದಣಾಧಿಕಾರಿ ಮೌಲ್ಯ 103.68 ಕೋಟಿಯಷ್ಟಿದ್ದು, ಪ್ರತಿ ಎಕರೆಗೆ 8 ಕೋಟಿ ಎಂದು ಅಂದಾಜಿಸಿದರೆ ಪ್ರಸ್ತುತ ಮಾರುಕಟ್ಟೆ ಮೌಲ್ಯ ಸುಮಾರು 500 ಕೋಟಿ ಎಂದು ಅಂದಾಜಿಸಲಾಗಿದೆ.

ಶೋಧನೆ ವೇಳೆ ಪ್ರಕರಣ ಪತ್ತೆ

2026ರ ಮೇ 7ರಂದು ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಕಚೇರಿ ಹಾಗೂ ದೇವನಹಳ್ಳಿ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಲೋಕಾಯುಕ್ತ ಶೋಧನೆ ವೇಳೆ, ನಕಲಿ ಆದೇಶಗಳಲ್ಲಿ ಉಲ್ಲೇಖಿಸಿದ್ದ ಎಲ್‌ಆರ್‌ಎಫ್ ಹಾಗೂ ಹೈಕೋರ್ಟ್ ಪ್ರಕರಣ ಸಂಖ್ಯೆಗಳು ಸಂಬಂಧಿತ ಸರ್ವೇ ನಂಬರ್‌ಗಳಿಗೆ ಹೊಂದಿಕೆಯಾಗದಿರುವುದು ಪತ್ತೆಯಾಗಿದೆ. ಅಲ್ಲದೆ, ಇ-ಆಫೀಸ್‌ನಲ್ಲಿ ಸೃಷ್ಟಿಯಾಗದ ಆದೇಶಗಳನ್ನು ಇ-ಆಫೀಸ್ ಆದೇಶಗಳಂತೆ ಬಳಸಿರುವುದು ತನಿಖೆಯಲ್ಲಿ ಕಂಡುಬಂದಿದೆ ಎನ್ನಲಾಗಿದೆ.

ಒಟ್ಟು 84 ಸರ್ವೆ ನಂಬರ್‌ಗಳಿಗೆ ಸೇರಿದ 62.20 ಎಕರೆ ಜಮೀನಿನ ಪೈಕಿ 72 ಸರ್ವೆ ನಂಬರ್‌ಗಳಿಗೆ ಸೇರಿದ 57 ಎಕರೆ 4.08 ಗುಂಟೆ ಜಮೀನಿನ ಖಾತೆ ಬದಲಾವಣೆಯಾಗಿರುವುದು ಪತ್ತೆಯಾಗಿದೆ.

ಬೈಚಾಪುರ ಮತ್ತು ಸಣ್ಣ ಅಮಾನಿಕೆರೆ ಗ್ರಾಮದ 06 ಸರ್ವೆ ನಂಬರ್‌ಗಳ ಒಟ್ಟು 3 ಎಕರೆ 1.08 ಗುಂಟೆ ವಿಸ್ತೀರ್ಣದ ಜಮೀನಿಗೆ ತಕರಾರು ಪ್ರಕರಣ ದಾಖಲಾತಿ ಖಾತೆ ಬದಲಾವಣೆಯಾಗದೆ ಇರುವುದು ಹಾಗೂ ಬೈಚಾಪುರ ಗ್ರಾಮದ 06 ಸರ್ವೆ ನಂಬರ್‌ಗಳ ಒಟ್ಟು 2 ಎಕರೆ 16 ಗುಂಟೆ ಜಮೀನಿಗೆ ಸಂಬಂಧಿಸಿದಂತೆ ಉಪವಿಭಾಗಾಧಿಕಾರಿಗಳ ಆದೇಶದಲ್ಲಿ ನಮೂದಾಗದೆ ಖಾತೆಯಾಗಿರುವುದು ಕಂಡುಬಂದಿದೆ.

ಆಕ್ಷೇಪಣೆ ಸಲ್ಲಿಸಲು ಸೂಚನೆ

ನಕಲಿ ಆದೇಶಗಳನ್ನು ಭೂಮಿ ತಂತ್ರಾಂಶಕ್ಕೆ ಅಪ್‌ಲೋಡ್ ಮಾಡಿ, ಉಪವಿಭಾಗಾಧಿಕಾರಿಗಳ ಲಾಗಿನ್‌ಗೆ ಬಯೋಮೆಟ್ರಿಕ್ ಮೂಲಕ ಪ್ರವೇಶಿಸಿ ಡಿಜಿಟಲ್ ಸಹಿ ಬಳಸಿ ಖಾತೆ ಬದಲಾವಣೆಗೆ ಅನುಮೋದನೆ ನೀಡಲಾಗಿದೆ ಎಂಬ ಆರೋಪವೂ ತನಿಖೆಯಲ್ಲಿ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದಿನ ಉಪವಿಭಾಗಾಧಿಕಾರಿ ದುರ್ಗಾಶ್ರೀ ಹಾಗೂ ಉಪವಿಭಾಗಾಧಿಕಾರಿ ಕಚೇರಿಯ ವಿಷಯ ನಿರ್ವಾಹಕ ಮನೋಜ್ ಎಸ್. ಅವರಿಗೆ ಸೆ.22ರಂದು ಕಚೇರಿಗೆ ಹಾಜರಾಗಿ ತಮ್ಮ ಆಕ್ಷೇಪಣೆ ಸಲ್ಲಿಸುವಂತೆ ಉಪಲೋಕಾಯುಕ್ತರು ಸೂಚನೆ ನೀಡಿದ್ದಾರೆ.

Ramesh Babu

Journalist

Recent Posts

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

2 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

3 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

4 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

11 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago