ಸುಮಾರು 9 ತಿಂಗಳಿನಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ಐಎಸ್ಎಸ್) ಸಿಲುಕಿದ್ದ ಭಾರತೀಯ ಮೂಲದ ಗಗನಯಾನಿ ಸುನಿತಾ ವಿಲಿಯಮ್ಸ್ ಮತ್ತು ಸಹ ಗಗನಯಾತ್ರಿ ಬುಚ್ ವಿಲ್ಮೋರ್ ಕಡೆಗೂ ಸುರಕ್ಷಿತವಾಗಿ ಭೂಮಿಗೆ ಮರಳಿದ್ದಾರೆ.
ಸಹ ಗಗನಯಾತ್ರಿಗಳಾದ ನಿಕ್ ಹೇಗ್ ಮತ್ತು ರಷ್ಯಾದ ಗಗನಯಾತ್ರಿ ಅಲೆಕ್ಸಾಂಡರ್ ಗೋರ್ಬುನೋವ್ ಒಳಗೊಂಡಂತೆ ಒಟ್ಟು ನಾಲ್ವರನ್ನು ಹೊತ್ತ ‘ಸ್ಪೇಸೆಕ್ಸ್ ಕ್ರ್ಯೂ ಡ್ರ್ಯಾಗನ್’ ಗಗನನೌಕೆ ಸುರಕ್ಷಿತವಾಗಿ ಬುಧವಾರ ಬೆಳಗ್ಗೆ ಸರಿಯಾಗಿ 3.37ಕ್ಕೆ ಫ್ಲೋರಿಡಾ ಕರಾವಳಿಯಲ್ಲಿ ಇಳಿದಿದೆ.
ಹಡಗಿನ ಮೂಲಕ ಗಗನಯಾತ್ರಿಗಳನ್ನು ನೌಕೆಯಿಂದ ಹೊರತರಲಾಗಿದ್ದು, ನಾಲ್ವರೂ ಗಗನಯಾತ್ರಿಗಳು ಆರೋಗ್ಯವಾಗಿದ್ದಾರೆ.
ವಿಲಿಯಮ್ಸ ಮತ್ತು ವಿಲ್ಮೋರ್ ಜೂನ್ 5, 2024 ರಂದು ಬೋಯಿಂಗ್ನ ಸ್ಟಾರ್ಲೈನರ್ ಬಾಹ್ಯಾಕಾಶ ನೌಕೆಯಲ್ಲಿ ಬಾಹ್ಯಾಕಾಶಕ್ಕೆ ತೆರಳಿದ್ದರು. ಆದರೆ ಪ್ರೊಪಲ್ಷನ್ ಸಿಸ್ಟಮ್ ಅಸಮರ್ಪಕ ಕಾರ್ಯನಿರ್ವಹಣೆ ಸೇರಿದಂತೆ ತಾಂತ್ರಿಕ ಸಮಸ್ಯೆಗಳಿಂದ ಅವರ ಸಕಾಲಿಕ ಮರಳುವಿಕೆ ವಿಳಂಬವಾಯಿತು.
ಅನಿರೀಕ್ಷಿತವಾಗಿ ಇಬ್ಬರು ಗಗನಯಾತ್ರಿಗಳು 286 ದಿನಗಳ ಕಾಲ ಅವರು ಬಾಹ್ಯಾಕಾಶದಲ್ಲಿ ಇದ್ದರು. ಈ ಸಮಯದಲ್ಲಿ ಅವರು ಭೂಮಿಯ ಸುತ್ತ 4,576 ಸುತ್ತುಗಳನ್ನು ಹಾಕಿದ್ದು, ಸುಮಾರು 121 ಮಿಲಿಯನ್ ಮೈಲುಗಳು (195 ಮಿಲಿಯನ್ ಕಿಲೋಮೀಟರ್) ಪ್ರಯಾಣಿಸಿದ್ದಾರೆ. ಬೇರೆ ಗಗನಯಾತ್ರಿಗಳು ಈ ಹಿಂದೆ ಹೆಚ್ಚು ಕಾಲ ಬಾಹ್ಯಾಕಾಶದಲ್ಲಿ ಇದ್ದರೂ, ಇವರಷ್ಟು ಅನಿಶ್ಚಿತತೆಯನ್ನು ಯಾರೂ ಎದುರಿಸಿರಲಿಲ್ಲ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…