ಸುರಕ್ಷಿತವಾಗಿ ಭೂಮಿಗೆ ಮರಳಿದ ಭಾರತೀಯ ಮೂಲದ ಗಗನಯಾನಿ ಸುನಿತಾ ವಿಲಿಯಮ್ಸ್‌

ಸುಮಾರು 9 ತಿಂಗಳಿನಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ಐಎಸ್‌ಎಸ್‌) ಸಿಲುಕಿದ್ದ ಭಾರತೀಯ ಮೂಲದ ಗಗನಯಾನಿ ಸುನಿತಾ ವಿಲಿಯಮ್ಸ್‌ ಮತ್ತು ಸಹ ಗಗನಯಾತ್ರಿ ಬುಚ್‌ ವಿಲ್ಮೋರ್‌ ಕಡೆಗೂ ಸುರಕ್ಷಿತವಾಗಿ ಭೂಮಿಗೆ ಮರಳಿದ್ದಾರೆ.

ಸಹ ಗಗನಯಾತ್ರಿಗಳಾದ ನಿಕ್‌ ಹೇಗ್‌ ಮತ್ತು ರಷ್ಯಾದ ಗಗನಯಾತ್ರಿ ಅಲೆಕ್ಸಾಂಡರ್‌ ಗೋರ್ಬುನೋವ್‌ ಒಳಗೊಂಡಂತೆ ಒಟ್ಟು ನಾಲ್ವರನ್ನು ಹೊತ್ತ ‘ಸ್ಪೇಸೆಕ್ಸ್‌ ಕ್ರ್ಯೂ ಡ್ರ್ಯಾಗನ್‌’ ಗಗನನೌಕೆ ಸುರಕ್ಷಿತವಾಗಿ ಬುಧವಾರ ಬೆಳಗ್ಗೆ ಸರಿಯಾಗಿ 3.37ಕ್ಕೆ ಫ್ಲೋರಿಡಾ ಕರಾವಳಿಯಲ್ಲಿ ಇಳಿದಿದೆ.

ಹಡಗಿನ ಮೂಲಕ ಗಗನಯಾತ್ರಿಗಳನ್ನು ನೌಕೆಯಿಂದ ಹೊರತರಲಾಗಿದ್ದು, ನಾಲ್ವರೂ ಗಗನಯಾತ್ರಿಗಳು ಆರೋಗ್ಯವಾಗಿದ್ದಾರೆ.

ಗಗನನೌಕೆಯು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಭಾರತೀಯ ಕಾಲಮಾನ ಮಂಗಳವಾರ ಬೆಳಗ್ಗೆ 10.30ಕ್ಕೆ ನಿರ್ಗಮಿಸಿತ್ತು. ಸುಮಾರು 17 ಗಂಟೆಗಳ ಸುದೀರ್ಘ ಯಾನದ ಬಳಿಕ ಬುಧವಾರ ಮುಂಜಾನೆ 3.37ಕ್ಕೆ ‘ಕ್ರ್ಯೂ ಡ್ರ್ಯಾಗನ್‌’ ಗಗನನೌಕೆ ಸಮುದ್ರಸ್ಪರ್ಶಕ್ಕೆ ಮಾಡಿದೆ. ಫ್ಲೋರಿಡಾದ ಬಳಿ, ಗಲ್ಫ್ ಕೊಲ್ಲಿಯಲ್ಲಿ ಸಮುದ್ರಕ್ಕೆ ಬಿದ್ದಿದೆ. ಇದಕ್ಕೂ ಮುನ್ನ ಗಗನನೌಕೆಯಲ್ಲಿ ಅಳವಡಿಸಲಾಗಿರುವ ಪ್ಯಾರಾಶ್ಯೂಟ್‌ಗಳು ತೆರೆದುಕೊಂಡು ಗಗನನೌಕೆಯ ವೇಗವನ್ನು ತಗ್ಗಿಸುವ ಮೂಲಕ ಸುರಕ್ಷಿತವಾಗಿ ಅದು ಸಮುದ್ರಕ್ಕೆ ಬೀಳುವಂತೆ ಮಾಡಲಾಗಿದೆ.

ವಿಲಿಯಮ್ಸ ಮತ್ತು ವಿಲ್ಮೋರ್‌ ಜೂನ್‌ 5, 2024 ರಂದು ಬೋಯಿಂಗ್‌ನ ಸ್ಟಾರ್‌ಲೈನರ್‌ ಬಾಹ್ಯಾಕಾಶ ನೌಕೆಯಲ್ಲಿ ಬಾಹ್ಯಾಕಾಶಕ್ಕೆ ತೆರಳಿದ್ದರು. ಆದರೆ ಪ್ರೊಪಲ್ಷನ್‌ ಸಿಸ್ಟಮ್‌ ಅಸಮರ್ಪಕ ಕಾರ್ಯನಿರ್ವಹಣೆ ಸೇರಿದಂತೆ ತಾಂತ್ರಿಕ ಸಮಸ್ಯೆಗಳಿಂದ ಅವರ ಸಕಾಲಿಕ ಮರಳುವಿಕೆ ವಿಳಂಬವಾಯಿತು.

ಸೆಪ್ಟೆಂಬರ್‌ 2024ರಲ್ಲಿ ಸ್ಟಾರ್‌ಲೈನರ್‌ ಅನ್ನು ಸುರಕ್ಷತೆ ದೃಷ್ಟಿಯಿಂದ ಸಿಬ್ಬಂದಿಯಿಲ್ಲದೆಯೇ ಭೂಮಿಗೆ ವಾಪಾಸ್‌ ಕರೆಸಿಕೊಳ್ಳಲಾಯಿತು. ಕೊನೆಯ ಆಯ್ಕೆಯೆಂಬಂತೆ, ಐಎಸ್‌ಎಸ್‌ನಲ್ಲಿ ಸಿಲುಕಿದ ಸುನಿತಾ ಮತ್ತು ವಿಲ್ಮೋರ್‌ ಅವರನ್ನು ಭೂಮಿಗೆ ಕರೆಸಿಕೊಳ್ಳಲು ಉದ್ಯಮಿ ಎಲಾನ್‌ ಮಸ್ಕ್‌ ಒಡೆತನದ ‘ಸ್ಪೇಸೆಕ್ಸ್‌’ ಜತೆ ನಾಸಾ ಕೈಜೋಡಿಸಿತು.

ಅನಿರೀಕ್ಷಿತವಾಗಿ ಇಬ್ಬರು ಗಗನಯಾತ್ರಿಗಳು 286 ದಿನಗಳ ಕಾಲ ಅವರು ಬಾಹ್ಯಾಕಾಶದಲ್ಲಿ ಇದ್ದರು. ಈ ಸಮಯದಲ್ಲಿ ಅವರು ಭೂಮಿಯ ಸುತ್ತ 4,576 ಸುತ್ತುಗಳನ್ನು ಹಾಕಿದ್ದು, ಸುಮಾರು 121 ಮಿಲಿಯನ್ ಮೈಲುಗಳು (195 ಮಿಲಿಯನ್ ಕಿಲೋಮೀಟರ್) ಪ್ರಯಾಣಿಸಿದ್ದಾರೆ. ಬೇರೆ ಗಗನಯಾತ್ರಿಗಳು ಈ ಹಿಂದೆ ಹೆಚ್ಚು ಕಾಲ ಬಾಹ್ಯಾಕಾಶದಲ್ಲಿ ಇದ್ದರೂ, ಇವರಷ್ಟು ಅನಿಶ್ಚಿತತೆಯನ್ನು ಯಾರೂ ಎದುರಿಸಿರಲಿಲ್ಲ.

ಸುನಿತಾ ಹಾಗೂ ಬುಚ್ ವಿಲ್ಮೋರ್ ಬಾಹ್ಯಾಕಾಶ ನಿಲ್ದಾಣದಲ್ಲಿ ಅನೇಖ ಪ್ರಯೋಗಗಳನ್ನು ಮಾಡಿದರು. ಉಪಕರಣಗಳ ದುರಸ್ತಿ , ಬಾಹ್ಯಾಕಾಶ ನಡಿಗೆಯನ್ನೂ ಮಾಡಿದರು. ಸುನಿತಾ ವಿಲಿಯಮ್ಸ್ ಮೂರು ತಿಂಗಳ ನಂತರ ಐಎಸ್‌ಎಸ್‌ ನ ಕಮಾಂಡರ್ ಆದರು. ಅವರು ಒಟ್ಟು 62 ಗಂಟೆಗಳ ಕಾಲ ಒಂಬತ್ತು ಬಾರಿ ಬಾಹ್ಯಾಕಾಶ ನಡಿಗೆ ಮಾಡಿ ಮಹಿಳಾ ಗಗನಯಾತ್ರಿಯಾಗಿ ದಾಖಲೆ ನಿರ್ಮಿಸಿದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…

5 hours ago

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

7 hours ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

8 hours ago

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

21 hours ago

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…

1 day ago

ಬಸ್ಸಿನಲ್ಲಿ 55 ಲಕ್ಷ ಹಣ ಮತ್ತು ಬಿಲ್ಡಿಂಗ್ ಗೆ ಸಂಬಂಧಿಸಿದ ದಾಖಲಾತಿಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರ ಬಂಧನ

ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…

1 day ago