ಸುರಕ್ಷಿತವಾಗಿ ಭೂಮಿಗೆ ಮರಳಿದ ಭಾರತೀಯ ಮೂಲದ ಗಗನಯಾನಿ ಸುನಿತಾ ವಿಲಿಯಮ್ಸ್‌

ಸುಮಾರು 9 ತಿಂಗಳಿನಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ಐಎಸ್‌ಎಸ್‌) ಸಿಲುಕಿದ್ದ ಭಾರತೀಯ ಮೂಲದ ಗಗನಯಾನಿ ಸುನಿತಾ ವಿಲಿಯಮ್ಸ್‌ ಮತ್ತು ಸಹ ಗಗನಯಾತ್ರಿ ಬುಚ್‌ ವಿಲ್ಮೋರ್‌ ಕಡೆಗೂ ಸುರಕ್ಷಿತವಾಗಿ ಭೂಮಿಗೆ ಮರಳಿದ್ದಾರೆ.

ಸಹ ಗಗನಯಾತ್ರಿಗಳಾದ ನಿಕ್‌ ಹೇಗ್‌ ಮತ್ತು ರಷ್ಯಾದ ಗಗನಯಾತ್ರಿ ಅಲೆಕ್ಸಾಂಡರ್‌ ಗೋರ್ಬುನೋವ್‌ ಒಳಗೊಂಡಂತೆ ಒಟ್ಟು ನಾಲ್ವರನ್ನು ಹೊತ್ತ ‘ಸ್ಪೇಸೆಕ್ಸ್‌ ಕ್ರ್ಯೂ ಡ್ರ್ಯಾಗನ್‌’ ಗಗನನೌಕೆ ಸುರಕ್ಷಿತವಾಗಿ ಬುಧವಾರ ಬೆಳಗ್ಗೆ ಸರಿಯಾಗಿ 3.37ಕ್ಕೆ ಫ್ಲೋರಿಡಾ ಕರಾವಳಿಯಲ್ಲಿ ಇಳಿದಿದೆ.

ಹಡಗಿನ ಮೂಲಕ ಗಗನಯಾತ್ರಿಗಳನ್ನು ನೌಕೆಯಿಂದ ಹೊರತರಲಾಗಿದ್ದು, ನಾಲ್ವರೂ ಗಗನಯಾತ್ರಿಗಳು ಆರೋಗ್ಯವಾಗಿದ್ದಾರೆ.

ಗಗನನೌಕೆಯು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಭಾರತೀಯ ಕಾಲಮಾನ ಮಂಗಳವಾರ ಬೆಳಗ್ಗೆ 10.30ಕ್ಕೆ ನಿರ್ಗಮಿಸಿತ್ತು. ಸುಮಾರು 17 ಗಂಟೆಗಳ ಸುದೀರ್ಘ ಯಾನದ ಬಳಿಕ ಬುಧವಾರ ಮುಂಜಾನೆ 3.37ಕ್ಕೆ ‘ಕ್ರ್ಯೂ ಡ್ರ್ಯಾಗನ್‌’ ಗಗನನೌಕೆ ಸಮುದ್ರಸ್ಪರ್ಶಕ್ಕೆ ಮಾಡಿದೆ. ಫ್ಲೋರಿಡಾದ ಬಳಿ, ಗಲ್ಫ್ ಕೊಲ್ಲಿಯಲ್ಲಿ ಸಮುದ್ರಕ್ಕೆ ಬಿದ್ದಿದೆ. ಇದಕ್ಕೂ ಮುನ್ನ ಗಗನನೌಕೆಯಲ್ಲಿ ಅಳವಡಿಸಲಾಗಿರುವ ಪ್ಯಾರಾಶ್ಯೂಟ್‌ಗಳು ತೆರೆದುಕೊಂಡು ಗಗನನೌಕೆಯ ವೇಗವನ್ನು ತಗ್ಗಿಸುವ ಮೂಲಕ ಸುರಕ್ಷಿತವಾಗಿ ಅದು ಸಮುದ್ರಕ್ಕೆ ಬೀಳುವಂತೆ ಮಾಡಲಾಗಿದೆ.

ವಿಲಿಯಮ್ಸ ಮತ್ತು ವಿಲ್ಮೋರ್‌ ಜೂನ್‌ 5, 2024 ರಂದು ಬೋಯಿಂಗ್‌ನ ಸ್ಟಾರ್‌ಲೈನರ್‌ ಬಾಹ್ಯಾಕಾಶ ನೌಕೆಯಲ್ಲಿ ಬಾಹ್ಯಾಕಾಶಕ್ಕೆ ತೆರಳಿದ್ದರು. ಆದರೆ ಪ್ರೊಪಲ್ಷನ್‌ ಸಿಸ್ಟಮ್‌ ಅಸಮರ್ಪಕ ಕಾರ್ಯನಿರ್ವಹಣೆ ಸೇರಿದಂತೆ ತಾಂತ್ರಿಕ ಸಮಸ್ಯೆಗಳಿಂದ ಅವರ ಸಕಾಲಿಕ ಮರಳುವಿಕೆ ವಿಳಂಬವಾಯಿತು.

ಸೆಪ್ಟೆಂಬರ್‌ 2024ರಲ್ಲಿ ಸ್ಟಾರ್‌ಲೈನರ್‌ ಅನ್ನು ಸುರಕ್ಷತೆ ದೃಷ್ಟಿಯಿಂದ ಸಿಬ್ಬಂದಿಯಿಲ್ಲದೆಯೇ ಭೂಮಿಗೆ ವಾಪಾಸ್‌ ಕರೆಸಿಕೊಳ್ಳಲಾಯಿತು. ಕೊನೆಯ ಆಯ್ಕೆಯೆಂಬಂತೆ, ಐಎಸ್‌ಎಸ್‌ನಲ್ಲಿ ಸಿಲುಕಿದ ಸುನಿತಾ ಮತ್ತು ವಿಲ್ಮೋರ್‌ ಅವರನ್ನು ಭೂಮಿಗೆ ಕರೆಸಿಕೊಳ್ಳಲು ಉದ್ಯಮಿ ಎಲಾನ್‌ ಮಸ್ಕ್‌ ಒಡೆತನದ ‘ಸ್ಪೇಸೆಕ್ಸ್‌’ ಜತೆ ನಾಸಾ ಕೈಜೋಡಿಸಿತು.

ಅನಿರೀಕ್ಷಿತವಾಗಿ ಇಬ್ಬರು ಗಗನಯಾತ್ರಿಗಳು 286 ದಿನಗಳ ಕಾಲ ಅವರು ಬಾಹ್ಯಾಕಾಶದಲ್ಲಿ ಇದ್ದರು. ಈ ಸಮಯದಲ್ಲಿ ಅವರು ಭೂಮಿಯ ಸುತ್ತ 4,576 ಸುತ್ತುಗಳನ್ನು ಹಾಕಿದ್ದು, ಸುಮಾರು 121 ಮಿಲಿಯನ್ ಮೈಲುಗಳು (195 ಮಿಲಿಯನ್ ಕಿಲೋಮೀಟರ್) ಪ್ರಯಾಣಿಸಿದ್ದಾರೆ. ಬೇರೆ ಗಗನಯಾತ್ರಿಗಳು ಈ ಹಿಂದೆ ಹೆಚ್ಚು ಕಾಲ ಬಾಹ್ಯಾಕಾಶದಲ್ಲಿ ಇದ್ದರೂ, ಇವರಷ್ಟು ಅನಿಶ್ಚಿತತೆಯನ್ನು ಯಾರೂ ಎದುರಿಸಿರಲಿಲ್ಲ.

ಸುನಿತಾ ಹಾಗೂ ಬುಚ್ ವಿಲ್ಮೋರ್ ಬಾಹ್ಯಾಕಾಶ ನಿಲ್ದಾಣದಲ್ಲಿ ಅನೇಖ ಪ್ರಯೋಗಗಳನ್ನು ಮಾಡಿದರು. ಉಪಕರಣಗಳ ದುರಸ್ತಿ , ಬಾಹ್ಯಾಕಾಶ ನಡಿಗೆಯನ್ನೂ ಮಾಡಿದರು. ಸುನಿತಾ ವಿಲಿಯಮ್ಸ್ ಮೂರು ತಿಂಗಳ ನಂತರ ಐಎಸ್‌ಎಸ್‌ ನ ಕಮಾಂಡರ್ ಆದರು. ಅವರು ಒಟ್ಟು 62 ಗಂಟೆಗಳ ಕಾಲ ಒಂಬತ್ತು ಬಾರಿ ಬಾಹ್ಯಾಕಾಶ ನಡಿಗೆ ಮಾಡಿ ಮಹಿಳಾ ಗಗನಯಾತ್ರಿಯಾಗಿ ದಾಖಲೆ ನಿರ್ಮಿಸಿದರು.

Ramesh Babu

Journalist

Recent Posts

ನಾಳೆ(ಮಾರ್ಚ್ 11ರಿಂದ) ರಾಜ್ಯ ಸರ್ಕಾರಿ ಆಸ್ಪತ್ರೆಗಳ ವೈದ್ಯರ‌ ಮುಷ್ಕರ: ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತ ಸಾಧ್ಯತೆ

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…

9 hours ago

ಮಾ.19 ರಿಂದ ಮಾ.22ರವರೆಗೆ ಮೇಲಿನ ಜೂಗಾನಹಳ್ಳಿಯಲ್ಲಿ ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್‌ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…

9 hours ago

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

12 hours ago

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರ: ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…

12 hours ago

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

22 hours ago