ಸುಮಾರು 9 ತಿಂಗಳಿನಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ಐಎಸ್ಎಸ್) ಸಿಲುಕಿದ್ದ ಭಾರತೀಯ ಮೂಲದ ಗಗನಯಾನಿ ಸುನಿತಾ ವಿಲಿಯಮ್ಸ್ ಮತ್ತು ಸಹ ಗಗನಯಾತ್ರಿ ಬುಚ್ ವಿಲ್ಮೋರ್ ಕಡೆಗೂ ಸುರಕ್ಷಿತವಾಗಿ ಭೂಮಿಗೆ ಮರಳಿದ್ದಾರೆ.
ಸಹ ಗಗನಯಾತ್ರಿಗಳಾದ ನಿಕ್ ಹೇಗ್ ಮತ್ತು ರಷ್ಯಾದ ಗಗನಯಾತ್ರಿ ಅಲೆಕ್ಸಾಂಡರ್ ಗೋರ್ಬುನೋವ್ ಒಳಗೊಂಡಂತೆ ಒಟ್ಟು ನಾಲ್ವರನ್ನು ಹೊತ್ತ ‘ಸ್ಪೇಸೆಕ್ಸ್ ಕ್ರ್ಯೂ ಡ್ರ್ಯಾಗನ್’ ಗಗನನೌಕೆ ಸುರಕ್ಷಿತವಾಗಿ ಬುಧವಾರ ಬೆಳಗ್ಗೆ ಸರಿಯಾಗಿ 3.37ಕ್ಕೆ ಫ್ಲೋರಿಡಾ ಕರಾವಳಿಯಲ್ಲಿ ಇಳಿದಿದೆ.
ಹಡಗಿನ ಮೂಲಕ ಗಗನಯಾತ್ರಿಗಳನ್ನು ನೌಕೆಯಿಂದ ಹೊರತರಲಾಗಿದ್ದು, ನಾಲ್ವರೂ ಗಗನಯಾತ್ರಿಗಳು ಆರೋಗ್ಯವಾಗಿದ್ದಾರೆ.
ವಿಲಿಯಮ್ಸ ಮತ್ತು ವಿಲ್ಮೋರ್ ಜೂನ್ 5, 2024 ರಂದು ಬೋಯಿಂಗ್ನ ಸ್ಟಾರ್ಲೈನರ್ ಬಾಹ್ಯಾಕಾಶ ನೌಕೆಯಲ್ಲಿ ಬಾಹ್ಯಾಕಾಶಕ್ಕೆ ತೆರಳಿದ್ದರು. ಆದರೆ ಪ್ರೊಪಲ್ಷನ್ ಸಿಸ್ಟಮ್ ಅಸಮರ್ಪಕ ಕಾರ್ಯನಿರ್ವಹಣೆ ಸೇರಿದಂತೆ ತಾಂತ್ರಿಕ ಸಮಸ್ಯೆಗಳಿಂದ ಅವರ ಸಕಾಲಿಕ ಮರಳುವಿಕೆ ವಿಳಂಬವಾಯಿತು.
ಅನಿರೀಕ್ಷಿತವಾಗಿ ಇಬ್ಬರು ಗಗನಯಾತ್ರಿಗಳು 286 ದಿನಗಳ ಕಾಲ ಅವರು ಬಾಹ್ಯಾಕಾಶದಲ್ಲಿ ಇದ್ದರು. ಈ ಸಮಯದಲ್ಲಿ ಅವರು ಭೂಮಿಯ ಸುತ್ತ 4,576 ಸುತ್ತುಗಳನ್ನು ಹಾಕಿದ್ದು, ಸುಮಾರು 121 ಮಿಲಿಯನ್ ಮೈಲುಗಳು (195 ಮಿಲಿಯನ್ ಕಿಲೋಮೀಟರ್) ಪ್ರಯಾಣಿಸಿದ್ದಾರೆ. ಬೇರೆ ಗಗನಯಾತ್ರಿಗಳು ಈ ಹಿಂದೆ ಹೆಚ್ಚು ಕಾಲ ಬಾಹ್ಯಾಕಾಶದಲ್ಲಿ ಇದ್ದರೂ, ಇವರಷ್ಟು ಅನಿಶ್ಚಿತತೆಯನ್ನು ಯಾರೂ ಎದುರಿಸಿರಲಿಲ್ಲ.
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…
ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…
ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…