ಸುರಕ್ಷಿತವಾಗಿ ಭೂಮಿಗೆ ಮರಳಿದ ಭಾರತೀಯ ಮೂಲದ ಗಗನಯಾನಿ ಸುನಿತಾ ವಿಲಿಯಮ್ಸ್‌

ಸುಮಾರು 9 ತಿಂಗಳಿನಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ಐಎಸ್‌ಎಸ್‌) ಸಿಲುಕಿದ್ದ ಭಾರತೀಯ ಮೂಲದ ಗಗನಯಾನಿ ಸುನಿತಾ ವಿಲಿಯಮ್ಸ್‌ ಮತ್ತು ಸಹ ಗಗನಯಾತ್ರಿ ಬುಚ್‌ ವಿಲ್ಮೋರ್‌ ಕಡೆಗೂ ಸುರಕ್ಷಿತವಾಗಿ ಭೂಮಿಗೆ ಮರಳಿದ್ದಾರೆ.

ಸಹ ಗಗನಯಾತ್ರಿಗಳಾದ ನಿಕ್‌ ಹೇಗ್‌ ಮತ್ತು ರಷ್ಯಾದ ಗಗನಯಾತ್ರಿ ಅಲೆಕ್ಸಾಂಡರ್‌ ಗೋರ್ಬುನೋವ್‌ ಒಳಗೊಂಡಂತೆ ಒಟ್ಟು ನಾಲ್ವರನ್ನು ಹೊತ್ತ ‘ಸ್ಪೇಸೆಕ್ಸ್‌ ಕ್ರ್ಯೂ ಡ್ರ್ಯಾಗನ್‌’ ಗಗನನೌಕೆ ಸುರಕ್ಷಿತವಾಗಿ ಬುಧವಾರ ಬೆಳಗ್ಗೆ ಸರಿಯಾಗಿ 3.37ಕ್ಕೆ ಫ್ಲೋರಿಡಾ ಕರಾವಳಿಯಲ್ಲಿ ಇಳಿದಿದೆ.

ಹಡಗಿನ ಮೂಲಕ ಗಗನಯಾತ್ರಿಗಳನ್ನು ನೌಕೆಯಿಂದ ಹೊರತರಲಾಗಿದ್ದು, ನಾಲ್ವರೂ ಗಗನಯಾತ್ರಿಗಳು ಆರೋಗ್ಯವಾಗಿದ್ದಾರೆ.

ಗಗನನೌಕೆಯು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಭಾರತೀಯ ಕಾಲಮಾನ ಮಂಗಳವಾರ ಬೆಳಗ್ಗೆ 10.30ಕ್ಕೆ ನಿರ್ಗಮಿಸಿತ್ತು. ಸುಮಾರು 17 ಗಂಟೆಗಳ ಸುದೀರ್ಘ ಯಾನದ ಬಳಿಕ ಬುಧವಾರ ಮುಂಜಾನೆ 3.37ಕ್ಕೆ ‘ಕ್ರ್ಯೂ ಡ್ರ್ಯಾಗನ್‌’ ಗಗನನೌಕೆ ಸಮುದ್ರಸ್ಪರ್ಶಕ್ಕೆ ಮಾಡಿದೆ. ಫ್ಲೋರಿಡಾದ ಬಳಿ, ಗಲ್ಫ್ ಕೊಲ್ಲಿಯಲ್ಲಿ ಸಮುದ್ರಕ್ಕೆ ಬಿದ್ದಿದೆ. ಇದಕ್ಕೂ ಮುನ್ನ ಗಗನನೌಕೆಯಲ್ಲಿ ಅಳವಡಿಸಲಾಗಿರುವ ಪ್ಯಾರಾಶ್ಯೂಟ್‌ಗಳು ತೆರೆದುಕೊಂಡು ಗಗನನೌಕೆಯ ವೇಗವನ್ನು ತಗ್ಗಿಸುವ ಮೂಲಕ ಸುರಕ್ಷಿತವಾಗಿ ಅದು ಸಮುದ್ರಕ್ಕೆ ಬೀಳುವಂತೆ ಮಾಡಲಾಗಿದೆ.

ವಿಲಿಯಮ್ಸ ಮತ್ತು ವಿಲ್ಮೋರ್‌ ಜೂನ್‌ 5, 2024 ರಂದು ಬೋಯಿಂಗ್‌ನ ಸ್ಟಾರ್‌ಲೈನರ್‌ ಬಾಹ್ಯಾಕಾಶ ನೌಕೆಯಲ್ಲಿ ಬಾಹ್ಯಾಕಾಶಕ್ಕೆ ತೆರಳಿದ್ದರು. ಆದರೆ ಪ್ರೊಪಲ್ಷನ್‌ ಸಿಸ್ಟಮ್‌ ಅಸಮರ್ಪಕ ಕಾರ್ಯನಿರ್ವಹಣೆ ಸೇರಿದಂತೆ ತಾಂತ್ರಿಕ ಸಮಸ್ಯೆಗಳಿಂದ ಅವರ ಸಕಾಲಿಕ ಮರಳುವಿಕೆ ವಿಳಂಬವಾಯಿತು.

ಸೆಪ್ಟೆಂಬರ್‌ 2024ರಲ್ಲಿ ಸ್ಟಾರ್‌ಲೈನರ್‌ ಅನ್ನು ಸುರಕ್ಷತೆ ದೃಷ್ಟಿಯಿಂದ ಸಿಬ್ಬಂದಿಯಿಲ್ಲದೆಯೇ ಭೂಮಿಗೆ ವಾಪಾಸ್‌ ಕರೆಸಿಕೊಳ್ಳಲಾಯಿತು. ಕೊನೆಯ ಆಯ್ಕೆಯೆಂಬಂತೆ, ಐಎಸ್‌ಎಸ್‌ನಲ್ಲಿ ಸಿಲುಕಿದ ಸುನಿತಾ ಮತ್ತು ವಿಲ್ಮೋರ್‌ ಅವರನ್ನು ಭೂಮಿಗೆ ಕರೆಸಿಕೊಳ್ಳಲು ಉದ್ಯಮಿ ಎಲಾನ್‌ ಮಸ್ಕ್‌ ಒಡೆತನದ ‘ಸ್ಪೇಸೆಕ್ಸ್‌’ ಜತೆ ನಾಸಾ ಕೈಜೋಡಿಸಿತು.

ಅನಿರೀಕ್ಷಿತವಾಗಿ ಇಬ್ಬರು ಗಗನಯಾತ್ರಿಗಳು 286 ದಿನಗಳ ಕಾಲ ಅವರು ಬಾಹ್ಯಾಕಾಶದಲ್ಲಿ ಇದ್ದರು. ಈ ಸಮಯದಲ್ಲಿ ಅವರು ಭೂಮಿಯ ಸುತ್ತ 4,576 ಸುತ್ತುಗಳನ್ನು ಹಾಕಿದ್ದು, ಸುಮಾರು 121 ಮಿಲಿಯನ್ ಮೈಲುಗಳು (195 ಮಿಲಿಯನ್ ಕಿಲೋಮೀಟರ್) ಪ್ರಯಾಣಿಸಿದ್ದಾರೆ. ಬೇರೆ ಗಗನಯಾತ್ರಿಗಳು ಈ ಹಿಂದೆ ಹೆಚ್ಚು ಕಾಲ ಬಾಹ್ಯಾಕಾಶದಲ್ಲಿ ಇದ್ದರೂ, ಇವರಷ್ಟು ಅನಿಶ್ಚಿತತೆಯನ್ನು ಯಾರೂ ಎದುರಿಸಿರಲಿಲ್ಲ.

ಸುನಿತಾ ಹಾಗೂ ಬುಚ್ ವಿಲ್ಮೋರ್ ಬಾಹ್ಯಾಕಾಶ ನಿಲ್ದಾಣದಲ್ಲಿ ಅನೇಖ ಪ್ರಯೋಗಗಳನ್ನು ಮಾಡಿದರು. ಉಪಕರಣಗಳ ದುರಸ್ತಿ , ಬಾಹ್ಯಾಕಾಶ ನಡಿಗೆಯನ್ನೂ ಮಾಡಿದರು. ಸುನಿತಾ ವಿಲಿಯಮ್ಸ್ ಮೂರು ತಿಂಗಳ ನಂತರ ಐಎಸ್‌ಎಸ್‌ ನ ಕಮಾಂಡರ್ ಆದರು. ಅವರು ಒಟ್ಟು 62 ಗಂಟೆಗಳ ಕಾಲ ಒಂಬತ್ತು ಬಾರಿ ಬಾಹ್ಯಾಕಾಶ ನಡಿಗೆ ಮಾಡಿ ಮಹಿಳಾ ಗಗನಯಾತ್ರಿಯಾಗಿ ದಾಖಲೆ ನಿರ್ಮಿಸಿದರು.

Ramesh Babu

Journalist

Recent Posts

KIADB ಭೂಸ್ವಾಧೀನ ವಿರೋಧಿಸಿ ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ರ್ಯಾಲಿ

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ  ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…

6 hours ago

ಹುಟ್ಟಿಸುವವನೂ ಅವನೇ…. ಸಾಯಿಸುವವನೂ ಅವನೇ…

ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…

11 hours ago

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ-ಎನ್.ಶೋಭಾ

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…

21 hours ago

ಮನೆ ಹೊಸ್ತಿಲಿನಲ್ಲಿ ಪೂಜೆಗಿಟ್ಟಿದ್ದ ಒಣಗಿದ ದಾಸವಾಳ ಹೂ ನುಂಗಿ ಆರುವರೆ ತಿಂಗಳ ಮಗು ದಾರುಣ ಸಾವು

ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…

23 hours ago

ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಲೋಕಾಯುಕ್ತ ಬಲೆಗೆ

ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…

1 day ago

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

1 day ago