ಸುರಕ್ಷಿತವಾಗಿ ಭೂಮಿಗೆ ಮರಳಿದ ಭಾರತೀಯ ಮೂಲದ ಗಗನಯಾನಿ ಸುನಿತಾ ವಿಲಿಯಮ್ಸ್‌

ಸುಮಾರು 9 ತಿಂಗಳಿನಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ಐಎಸ್‌ಎಸ್‌) ಸಿಲುಕಿದ್ದ ಭಾರತೀಯ ಮೂಲದ ಗಗನಯಾನಿ ಸುನಿತಾ ವಿಲಿಯಮ್ಸ್‌ ಮತ್ತು ಸಹ ಗಗನಯಾತ್ರಿ ಬುಚ್‌ ವಿಲ್ಮೋರ್‌ ಕಡೆಗೂ ಸುರಕ್ಷಿತವಾಗಿ ಭೂಮಿಗೆ ಮರಳಿದ್ದಾರೆ.

ಸಹ ಗಗನಯಾತ್ರಿಗಳಾದ ನಿಕ್‌ ಹೇಗ್‌ ಮತ್ತು ರಷ್ಯಾದ ಗಗನಯಾತ್ರಿ ಅಲೆಕ್ಸಾಂಡರ್‌ ಗೋರ್ಬುನೋವ್‌ ಒಳಗೊಂಡಂತೆ ಒಟ್ಟು ನಾಲ್ವರನ್ನು ಹೊತ್ತ ‘ಸ್ಪೇಸೆಕ್ಸ್‌ ಕ್ರ್ಯೂ ಡ್ರ್ಯಾಗನ್‌’ ಗಗನನೌಕೆ ಸುರಕ್ಷಿತವಾಗಿ ಬುಧವಾರ ಬೆಳಗ್ಗೆ ಸರಿಯಾಗಿ 3.37ಕ್ಕೆ ಫ್ಲೋರಿಡಾ ಕರಾವಳಿಯಲ್ಲಿ ಇಳಿದಿದೆ.

ಹಡಗಿನ ಮೂಲಕ ಗಗನಯಾತ್ರಿಗಳನ್ನು ನೌಕೆಯಿಂದ ಹೊರತರಲಾಗಿದ್ದು, ನಾಲ್ವರೂ ಗಗನಯಾತ್ರಿಗಳು ಆರೋಗ್ಯವಾಗಿದ್ದಾರೆ.

ಗಗನನೌಕೆಯು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಭಾರತೀಯ ಕಾಲಮಾನ ಮಂಗಳವಾರ ಬೆಳಗ್ಗೆ 10.30ಕ್ಕೆ ನಿರ್ಗಮಿಸಿತ್ತು. ಸುಮಾರು 17 ಗಂಟೆಗಳ ಸುದೀರ್ಘ ಯಾನದ ಬಳಿಕ ಬುಧವಾರ ಮುಂಜಾನೆ 3.37ಕ್ಕೆ ‘ಕ್ರ್ಯೂ ಡ್ರ್ಯಾಗನ್‌’ ಗಗನನೌಕೆ ಸಮುದ್ರಸ್ಪರ್ಶಕ್ಕೆ ಮಾಡಿದೆ. ಫ್ಲೋರಿಡಾದ ಬಳಿ, ಗಲ್ಫ್ ಕೊಲ್ಲಿಯಲ್ಲಿ ಸಮುದ್ರಕ್ಕೆ ಬಿದ್ದಿದೆ. ಇದಕ್ಕೂ ಮುನ್ನ ಗಗನನೌಕೆಯಲ್ಲಿ ಅಳವಡಿಸಲಾಗಿರುವ ಪ್ಯಾರಾಶ್ಯೂಟ್‌ಗಳು ತೆರೆದುಕೊಂಡು ಗಗನನೌಕೆಯ ವೇಗವನ್ನು ತಗ್ಗಿಸುವ ಮೂಲಕ ಸುರಕ್ಷಿತವಾಗಿ ಅದು ಸಮುದ್ರಕ್ಕೆ ಬೀಳುವಂತೆ ಮಾಡಲಾಗಿದೆ.

ವಿಲಿಯಮ್ಸ ಮತ್ತು ವಿಲ್ಮೋರ್‌ ಜೂನ್‌ 5, 2024 ರಂದು ಬೋಯಿಂಗ್‌ನ ಸ್ಟಾರ್‌ಲೈನರ್‌ ಬಾಹ್ಯಾಕಾಶ ನೌಕೆಯಲ್ಲಿ ಬಾಹ್ಯಾಕಾಶಕ್ಕೆ ತೆರಳಿದ್ದರು. ಆದರೆ ಪ್ರೊಪಲ್ಷನ್‌ ಸಿಸ್ಟಮ್‌ ಅಸಮರ್ಪಕ ಕಾರ್ಯನಿರ್ವಹಣೆ ಸೇರಿದಂತೆ ತಾಂತ್ರಿಕ ಸಮಸ್ಯೆಗಳಿಂದ ಅವರ ಸಕಾಲಿಕ ಮರಳುವಿಕೆ ವಿಳಂಬವಾಯಿತು.

ಸೆಪ್ಟೆಂಬರ್‌ 2024ರಲ್ಲಿ ಸ್ಟಾರ್‌ಲೈನರ್‌ ಅನ್ನು ಸುರಕ್ಷತೆ ದೃಷ್ಟಿಯಿಂದ ಸಿಬ್ಬಂದಿಯಿಲ್ಲದೆಯೇ ಭೂಮಿಗೆ ವಾಪಾಸ್‌ ಕರೆಸಿಕೊಳ್ಳಲಾಯಿತು. ಕೊನೆಯ ಆಯ್ಕೆಯೆಂಬಂತೆ, ಐಎಸ್‌ಎಸ್‌ನಲ್ಲಿ ಸಿಲುಕಿದ ಸುನಿತಾ ಮತ್ತು ವಿಲ್ಮೋರ್‌ ಅವರನ್ನು ಭೂಮಿಗೆ ಕರೆಸಿಕೊಳ್ಳಲು ಉದ್ಯಮಿ ಎಲಾನ್‌ ಮಸ್ಕ್‌ ಒಡೆತನದ ‘ಸ್ಪೇಸೆಕ್ಸ್‌’ ಜತೆ ನಾಸಾ ಕೈಜೋಡಿಸಿತು.

ಅನಿರೀಕ್ಷಿತವಾಗಿ ಇಬ್ಬರು ಗಗನಯಾತ್ರಿಗಳು 286 ದಿನಗಳ ಕಾಲ ಅವರು ಬಾಹ್ಯಾಕಾಶದಲ್ಲಿ ಇದ್ದರು. ಈ ಸಮಯದಲ್ಲಿ ಅವರು ಭೂಮಿಯ ಸುತ್ತ 4,576 ಸುತ್ತುಗಳನ್ನು ಹಾಕಿದ್ದು, ಸುಮಾರು 121 ಮಿಲಿಯನ್ ಮೈಲುಗಳು (195 ಮಿಲಿಯನ್ ಕಿಲೋಮೀಟರ್) ಪ್ರಯಾಣಿಸಿದ್ದಾರೆ. ಬೇರೆ ಗಗನಯಾತ್ರಿಗಳು ಈ ಹಿಂದೆ ಹೆಚ್ಚು ಕಾಲ ಬಾಹ್ಯಾಕಾಶದಲ್ಲಿ ಇದ್ದರೂ, ಇವರಷ್ಟು ಅನಿಶ್ಚಿತತೆಯನ್ನು ಯಾರೂ ಎದುರಿಸಿರಲಿಲ್ಲ.

ಸುನಿತಾ ಹಾಗೂ ಬುಚ್ ವಿಲ್ಮೋರ್ ಬಾಹ್ಯಾಕಾಶ ನಿಲ್ದಾಣದಲ್ಲಿ ಅನೇಖ ಪ್ರಯೋಗಗಳನ್ನು ಮಾಡಿದರು. ಉಪಕರಣಗಳ ದುರಸ್ತಿ , ಬಾಹ್ಯಾಕಾಶ ನಡಿಗೆಯನ್ನೂ ಮಾಡಿದರು. ಸುನಿತಾ ವಿಲಿಯಮ್ಸ್ ಮೂರು ತಿಂಗಳ ನಂತರ ಐಎಸ್‌ಎಸ್‌ ನ ಕಮಾಂಡರ್ ಆದರು. ಅವರು ಒಟ್ಟು 62 ಗಂಟೆಗಳ ಕಾಲ ಒಂಬತ್ತು ಬಾರಿ ಬಾಹ್ಯಾಕಾಶ ನಡಿಗೆ ಮಾಡಿ ಮಹಿಳಾ ಗಗನಯಾತ್ರಿಯಾಗಿ ದಾಖಲೆ ನಿರ್ಮಿಸಿದರು.

Ramesh Babu

Journalist

Recent Posts

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

2 days ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

2 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

2 days ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

3 days ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

3 days ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

3 days ago