ಸುರಕ್ಷಿತವಾಗಿ ಭೂಮಿಗೆ ಮರಳಿದ ಭಾರತೀಯ ಮೂಲದ ಗಗನಯಾನಿ ಸುನಿತಾ ವಿಲಿಯಮ್ಸ್‌

ಸುಮಾರು 9 ತಿಂಗಳಿನಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ಐಎಸ್‌ಎಸ್‌) ಸಿಲುಕಿದ್ದ ಭಾರತೀಯ ಮೂಲದ ಗಗನಯಾನಿ ಸುನಿತಾ ವಿಲಿಯಮ್ಸ್‌ ಮತ್ತು ಸಹ ಗಗನಯಾತ್ರಿ ಬುಚ್‌ ವಿಲ್ಮೋರ್‌ ಕಡೆಗೂ ಸುರಕ್ಷಿತವಾಗಿ ಭೂಮಿಗೆ ಮರಳಿದ್ದಾರೆ.

ಸಹ ಗಗನಯಾತ್ರಿಗಳಾದ ನಿಕ್‌ ಹೇಗ್‌ ಮತ್ತು ರಷ್ಯಾದ ಗಗನಯಾತ್ರಿ ಅಲೆಕ್ಸಾಂಡರ್‌ ಗೋರ್ಬುನೋವ್‌ ಒಳಗೊಂಡಂತೆ ಒಟ್ಟು ನಾಲ್ವರನ್ನು ಹೊತ್ತ ‘ಸ್ಪೇಸೆಕ್ಸ್‌ ಕ್ರ್ಯೂ ಡ್ರ್ಯಾಗನ್‌’ ಗಗನನೌಕೆ ಸುರಕ್ಷಿತವಾಗಿ ಬುಧವಾರ ಬೆಳಗ್ಗೆ ಸರಿಯಾಗಿ 3.37ಕ್ಕೆ ಫ್ಲೋರಿಡಾ ಕರಾವಳಿಯಲ್ಲಿ ಇಳಿದಿದೆ.

ಹಡಗಿನ ಮೂಲಕ ಗಗನಯಾತ್ರಿಗಳನ್ನು ನೌಕೆಯಿಂದ ಹೊರತರಲಾಗಿದ್ದು, ನಾಲ್ವರೂ ಗಗನಯಾತ್ರಿಗಳು ಆರೋಗ್ಯವಾಗಿದ್ದಾರೆ.

ಗಗನನೌಕೆಯು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಭಾರತೀಯ ಕಾಲಮಾನ ಮಂಗಳವಾರ ಬೆಳಗ್ಗೆ 10.30ಕ್ಕೆ ನಿರ್ಗಮಿಸಿತ್ತು. ಸುಮಾರು 17 ಗಂಟೆಗಳ ಸುದೀರ್ಘ ಯಾನದ ಬಳಿಕ ಬುಧವಾರ ಮುಂಜಾನೆ 3.37ಕ್ಕೆ ‘ಕ್ರ್ಯೂ ಡ್ರ್ಯಾಗನ್‌’ ಗಗನನೌಕೆ ಸಮುದ್ರಸ್ಪರ್ಶಕ್ಕೆ ಮಾಡಿದೆ. ಫ್ಲೋರಿಡಾದ ಬಳಿ, ಗಲ್ಫ್ ಕೊಲ್ಲಿಯಲ್ಲಿ ಸಮುದ್ರಕ್ಕೆ ಬಿದ್ದಿದೆ. ಇದಕ್ಕೂ ಮುನ್ನ ಗಗನನೌಕೆಯಲ್ಲಿ ಅಳವಡಿಸಲಾಗಿರುವ ಪ್ಯಾರಾಶ್ಯೂಟ್‌ಗಳು ತೆರೆದುಕೊಂಡು ಗಗನನೌಕೆಯ ವೇಗವನ್ನು ತಗ್ಗಿಸುವ ಮೂಲಕ ಸುರಕ್ಷಿತವಾಗಿ ಅದು ಸಮುದ್ರಕ್ಕೆ ಬೀಳುವಂತೆ ಮಾಡಲಾಗಿದೆ.

ವಿಲಿಯಮ್ಸ ಮತ್ತು ವಿಲ್ಮೋರ್‌ ಜೂನ್‌ 5, 2024 ರಂದು ಬೋಯಿಂಗ್‌ನ ಸ್ಟಾರ್‌ಲೈನರ್‌ ಬಾಹ್ಯಾಕಾಶ ನೌಕೆಯಲ್ಲಿ ಬಾಹ್ಯಾಕಾಶಕ್ಕೆ ತೆರಳಿದ್ದರು. ಆದರೆ ಪ್ರೊಪಲ್ಷನ್‌ ಸಿಸ್ಟಮ್‌ ಅಸಮರ್ಪಕ ಕಾರ್ಯನಿರ್ವಹಣೆ ಸೇರಿದಂತೆ ತಾಂತ್ರಿಕ ಸಮಸ್ಯೆಗಳಿಂದ ಅವರ ಸಕಾಲಿಕ ಮರಳುವಿಕೆ ವಿಳಂಬವಾಯಿತು.

ಸೆಪ್ಟೆಂಬರ್‌ 2024ರಲ್ಲಿ ಸ್ಟಾರ್‌ಲೈನರ್‌ ಅನ್ನು ಸುರಕ್ಷತೆ ದೃಷ್ಟಿಯಿಂದ ಸಿಬ್ಬಂದಿಯಿಲ್ಲದೆಯೇ ಭೂಮಿಗೆ ವಾಪಾಸ್‌ ಕರೆಸಿಕೊಳ್ಳಲಾಯಿತು. ಕೊನೆಯ ಆಯ್ಕೆಯೆಂಬಂತೆ, ಐಎಸ್‌ಎಸ್‌ನಲ್ಲಿ ಸಿಲುಕಿದ ಸುನಿತಾ ಮತ್ತು ವಿಲ್ಮೋರ್‌ ಅವರನ್ನು ಭೂಮಿಗೆ ಕರೆಸಿಕೊಳ್ಳಲು ಉದ್ಯಮಿ ಎಲಾನ್‌ ಮಸ್ಕ್‌ ಒಡೆತನದ ‘ಸ್ಪೇಸೆಕ್ಸ್‌’ ಜತೆ ನಾಸಾ ಕೈಜೋಡಿಸಿತು.

ಅನಿರೀಕ್ಷಿತವಾಗಿ ಇಬ್ಬರು ಗಗನಯಾತ್ರಿಗಳು 286 ದಿನಗಳ ಕಾಲ ಅವರು ಬಾಹ್ಯಾಕಾಶದಲ್ಲಿ ಇದ್ದರು. ಈ ಸಮಯದಲ್ಲಿ ಅವರು ಭೂಮಿಯ ಸುತ್ತ 4,576 ಸುತ್ತುಗಳನ್ನು ಹಾಕಿದ್ದು, ಸುಮಾರು 121 ಮಿಲಿಯನ್ ಮೈಲುಗಳು (195 ಮಿಲಿಯನ್ ಕಿಲೋಮೀಟರ್) ಪ್ರಯಾಣಿಸಿದ್ದಾರೆ. ಬೇರೆ ಗಗನಯಾತ್ರಿಗಳು ಈ ಹಿಂದೆ ಹೆಚ್ಚು ಕಾಲ ಬಾಹ್ಯಾಕಾಶದಲ್ಲಿ ಇದ್ದರೂ, ಇವರಷ್ಟು ಅನಿಶ್ಚಿತತೆಯನ್ನು ಯಾರೂ ಎದುರಿಸಿರಲಿಲ್ಲ.

ಸುನಿತಾ ಹಾಗೂ ಬುಚ್ ವಿಲ್ಮೋರ್ ಬಾಹ್ಯಾಕಾಶ ನಿಲ್ದಾಣದಲ್ಲಿ ಅನೇಖ ಪ್ರಯೋಗಗಳನ್ನು ಮಾಡಿದರು. ಉಪಕರಣಗಳ ದುರಸ್ತಿ , ಬಾಹ್ಯಾಕಾಶ ನಡಿಗೆಯನ್ನೂ ಮಾಡಿದರು. ಸುನಿತಾ ವಿಲಿಯಮ್ಸ್ ಮೂರು ತಿಂಗಳ ನಂತರ ಐಎಸ್‌ಎಸ್‌ ನ ಕಮಾಂಡರ್ ಆದರು. ಅವರು ಒಟ್ಟು 62 ಗಂಟೆಗಳ ಕಾಲ ಒಂಬತ್ತು ಬಾರಿ ಬಾಹ್ಯಾಕಾಶ ನಡಿಗೆ ಮಾಡಿ ಮಹಿಳಾ ಗಗನಯಾತ್ರಿಯಾಗಿ ದಾಖಲೆ ನಿರ್ಮಿಸಿದರು.

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

4 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

7 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

19 hours ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

20 hours ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

23 hours ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

1 day ago