ಸುರಕ್ಷಿತವಾಗಿ ಭೂಮಿಗೆ ಮರಳಿದ ಭಾರತೀಯ ಮೂಲದ ಗಗನಯಾನಿ ಸುನಿತಾ ವಿಲಿಯಮ್ಸ್‌

ಸುಮಾರು 9 ತಿಂಗಳಿನಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ಐಎಸ್‌ಎಸ್‌) ಸಿಲುಕಿದ್ದ ಭಾರತೀಯ ಮೂಲದ ಗಗನಯಾನಿ ಸುನಿತಾ ವಿಲಿಯಮ್ಸ್‌ ಮತ್ತು ಸಹ ಗಗನಯಾತ್ರಿ ಬುಚ್‌ ವಿಲ್ಮೋರ್‌ ಕಡೆಗೂ ಸುರಕ್ಷಿತವಾಗಿ ಭೂಮಿಗೆ ಮರಳಿದ್ದಾರೆ.

ಸಹ ಗಗನಯಾತ್ರಿಗಳಾದ ನಿಕ್‌ ಹೇಗ್‌ ಮತ್ತು ರಷ್ಯಾದ ಗಗನಯಾತ್ರಿ ಅಲೆಕ್ಸಾಂಡರ್‌ ಗೋರ್ಬುನೋವ್‌ ಒಳಗೊಂಡಂತೆ ಒಟ್ಟು ನಾಲ್ವರನ್ನು ಹೊತ್ತ ‘ಸ್ಪೇಸೆಕ್ಸ್‌ ಕ್ರ್ಯೂ ಡ್ರ್ಯಾಗನ್‌’ ಗಗನನೌಕೆ ಸುರಕ್ಷಿತವಾಗಿ ಬುಧವಾರ ಬೆಳಗ್ಗೆ ಸರಿಯಾಗಿ 3.37ಕ್ಕೆ ಫ್ಲೋರಿಡಾ ಕರಾವಳಿಯಲ್ಲಿ ಇಳಿದಿದೆ.

ಹಡಗಿನ ಮೂಲಕ ಗಗನಯಾತ್ರಿಗಳನ್ನು ನೌಕೆಯಿಂದ ಹೊರತರಲಾಗಿದ್ದು, ನಾಲ್ವರೂ ಗಗನಯಾತ್ರಿಗಳು ಆರೋಗ್ಯವಾಗಿದ್ದಾರೆ.

ಗಗನನೌಕೆಯು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಭಾರತೀಯ ಕಾಲಮಾನ ಮಂಗಳವಾರ ಬೆಳಗ್ಗೆ 10.30ಕ್ಕೆ ನಿರ್ಗಮಿಸಿತ್ತು. ಸುಮಾರು 17 ಗಂಟೆಗಳ ಸುದೀರ್ಘ ಯಾನದ ಬಳಿಕ ಬುಧವಾರ ಮುಂಜಾನೆ 3.37ಕ್ಕೆ ‘ಕ್ರ್ಯೂ ಡ್ರ್ಯಾಗನ್‌’ ಗಗನನೌಕೆ ಸಮುದ್ರಸ್ಪರ್ಶಕ್ಕೆ ಮಾಡಿದೆ. ಫ್ಲೋರಿಡಾದ ಬಳಿ, ಗಲ್ಫ್ ಕೊಲ್ಲಿಯಲ್ಲಿ ಸಮುದ್ರಕ್ಕೆ ಬಿದ್ದಿದೆ. ಇದಕ್ಕೂ ಮುನ್ನ ಗಗನನೌಕೆಯಲ್ಲಿ ಅಳವಡಿಸಲಾಗಿರುವ ಪ್ಯಾರಾಶ್ಯೂಟ್‌ಗಳು ತೆರೆದುಕೊಂಡು ಗಗನನೌಕೆಯ ವೇಗವನ್ನು ತಗ್ಗಿಸುವ ಮೂಲಕ ಸುರಕ್ಷಿತವಾಗಿ ಅದು ಸಮುದ್ರಕ್ಕೆ ಬೀಳುವಂತೆ ಮಾಡಲಾಗಿದೆ.

ವಿಲಿಯಮ್ಸ ಮತ್ತು ವಿಲ್ಮೋರ್‌ ಜೂನ್‌ 5, 2024 ರಂದು ಬೋಯಿಂಗ್‌ನ ಸ್ಟಾರ್‌ಲೈನರ್‌ ಬಾಹ್ಯಾಕಾಶ ನೌಕೆಯಲ್ಲಿ ಬಾಹ್ಯಾಕಾಶಕ್ಕೆ ತೆರಳಿದ್ದರು. ಆದರೆ ಪ್ರೊಪಲ್ಷನ್‌ ಸಿಸ್ಟಮ್‌ ಅಸಮರ್ಪಕ ಕಾರ್ಯನಿರ್ವಹಣೆ ಸೇರಿದಂತೆ ತಾಂತ್ರಿಕ ಸಮಸ್ಯೆಗಳಿಂದ ಅವರ ಸಕಾಲಿಕ ಮರಳುವಿಕೆ ವಿಳಂಬವಾಯಿತು.

ಸೆಪ್ಟೆಂಬರ್‌ 2024ರಲ್ಲಿ ಸ್ಟಾರ್‌ಲೈನರ್‌ ಅನ್ನು ಸುರಕ್ಷತೆ ದೃಷ್ಟಿಯಿಂದ ಸಿಬ್ಬಂದಿಯಿಲ್ಲದೆಯೇ ಭೂಮಿಗೆ ವಾಪಾಸ್‌ ಕರೆಸಿಕೊಳ್ಳಲಾಯಿತು. ಕೊನೆಯ ಆಯ್ಕೆಯೆಂಬಂತೆ, ಐಎಸ್‌ಎಸ್‌ನಲ್ಲಿ ಸಿಲುಕಿದ ಸುನಿತಾ ಮತ್ತು ವಿಲ್ಮೋರ್‌ ಅವರನ್ನು ಭೂಮಿಗೆ ಕರೆಸಿಕೊಳ್ಳಲು ಉದ್ಯಮಿ ಎಲಾನ್‌ ಮಸ್ಕ್‌ ಒಡೆತನದ ‘ಸ್ಪೇಸೆಕ್ಸ್‌’ ಜತೆ ನಾಸಾ ಕೈಜೋಡಿಸಿತು.

ಅನಿರೀಕ್ಷಿತವಾಗಿ ಇಬ್ಬರು ಗಗನಯಾತ್ರಿಗಳು 286 ದಿನಗಳ ಕಾಲ ಅವರು ಬಾಹ್ಯಾಕಾಶದಲ್ಲಿ ಇದ್ದರು. ಈ ಸಮಯದಲ್ಲಿ ಅವರು ಭೂಮಿಯ ಸುತ್ತ 4,576 ಸುತ್ತುಗಳನ್ನು ಹಾಕಿದ್ದು, ಸುಮಾರು 121 ಮಿಲಿಯನ್ ಮೈಲುಗಳು (195 ಮಿಲಿಯನ್ ಕಿಲೋಮೀಟರ್) ಪ್ರಯಾಣಿಸಿದ್ದಾರೆ. ಬೇರೆ ಗಗನಯಾತ್ರಿಗಳು ಈ ಹಿಂದೆ ಹೆಚ್ಚು ಕಾಲ ಬಾಹ್ಯಾಕಾಶದಲ್ಲಿ ಇದ್ದರೂ, ಇವರಷ್ಟು ಅನಿಶ್ಚಿತತೆಯನ್ನು ಯಾರೂ ಎದುರಿಸಿರಲಿಲ್ಲ.

ಸುನಿತಾ ಹಾಗೂ ಬುಚ್ ವಿಲ್ಮೋರ್ ಬಾಹ್ಯಾಕಾಶ ನಿಲ್ದಾಣದಲ್ಲಿ ಅನೇಖ ಪ್ರಯೋಗಗಳನ್ನು ಮಾಡಿದರು. ಉಪಕರಣಗಳ ದುರಸ್ತಿ , ಬಾಹ್ಯಾಕಾಶ ನಡಿಗೆಯನ್ನೂ ಮಾಡಿದರು. ಸುನಿತಾ ವಿಲಿಯಮ್ಸ್ ಮೂರು ತಿಂಗಳ ನಂತರ ಐಎಸ್‌ಎಸ್‌ ನ ಕಮಾಂಡರ್ ಆದರು. ಅವರು ಒಟ್ಟು 62 ಗಂಟೆಗಳ ಕಾಲ ಒಂಬತ್ತು ಬಾರಿ ಬಾಹ್ಯಾಕಾಶ ನಡಿಗೆ ಮಾಡಿ ಮಹಿಳಾ ಗಗನಯಾತ್ರಿಯಾಗಿ ದಾಖಲೆ ನಿರ್ಮಿಸಿದರು.

Ramesh Babu

Journalist

Recent Posts

ಬಸ್-ನೀರಿನ ಟ್ಯಾಂಕರ್ ಟ್ರ್ಯಾಕ್ಟರ್ ನಡುವೆ ಅಪಘಾತ: ಫುಲ್ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

ದೊಡ್ಡಬಳ್ಳಾಪುರ ತಾಲೂಕಿನ ಪಾಲನಜೋಗಹಳ್ಳಿ ಸಮೀಪ ಹಿಂದೂಪುರ–ಯಲಹಂಕ ರಾಜ್ಯ ಹೆದ್ದಾರಿಯಲ್ಲಿ ಬಸ್ ಹಾಗೂ ನೀರಿನ ಟ್ಯಾಂಕರ್ ಹೊತ್ತ ಟ್ರ್ಯಾಕ್ಟರ್ ನಡುವೆ ಸಂಭವಿಸಿದ…

1 hour ago

ಶಾಸಕ ಪ್ರದೀಪ್ ಈಶ್ವರ್ ಕಾರಿಗೆ ಮುತ್ತಿಗೆ; ಚಪ್ಪಲಿ ಎಸೆತ, ಉದ್ವಿಗ್ನ ವಾತಾವರಣ

ಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್ ಈಶ್ವರ್ ಅವರ ಕಾರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬೆಂಬಲಿಗರು ಮುತ್ತಿಗೆ ಹಾಕಿದ ಘಟನೆ ಶನಿವಾರ…

6 hours ago

ಹೆಚ್‌ಡಿಕೆಗೆ ಶಾಸಕ ಪ್ರದೀಪ್ ಈಶ್ವರ್ ಟಾಂಗ್: “32 ಎಕರೆ ಆಸ್ತಿ ದಾಖಲೆ ನನ್ನ ಮುಖದ ಮೇಲೆ ಬಿಸಾಕಿ”

ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ…

7 hours ago

ಕೆಂಪೇಗೌಡರ ಹೆಸರನ್ನು ಶಾಶ್ವತಗೊಳಿಸಲು ಹೊಸ ಯೋಜನೆಗಳು: ಟೌನ್ ಪ್ಲಾನಿಂಗ್, ಕಾಲೇಜು, ಅಭಿವೃದ್ಧಿ ಕೇಂದ್ರ ಸ್ಥಾಪನೆ – ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ನಾಡಪ್ರಭು ಕೆಂಪೇಗೌಡರ 517ನೇ ಜಯಂತಿಯ ಅಂಗವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

9 hours ago

517ನೇ ಕೆಂಪೇಗೌಡ ಜಯಂತಿ: ವಿಮಾನ ನಿಲ್ದಾಣದಲ್ಲಿ ನಾಡಪ್ರಭುವಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪುಷ್ಪನಮನ

ದೇವನಹಳ್ಳಿ: 517ನೇ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಶನಿವಾರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ…

11 hours ago

“ರೆಕಾರ್ಡ್ ಮಾಡಲು ನೀಡಿದ ಒಪ್ಪಿಗೆಯು ಪ್ರಸಾರ ಮಾಡಲು ನೀಡಿದ ಒಪ್ಪಿಗೆಯಲ್ಲ” – ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್‌ಟಾರ್ಷನ್ ಹಾಗೂ ಬ್ಲ್ಯಾಕ್‌ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…

1 day ago