ಸುರಕ್ಷಿತವಾಗಿ ಭೂಮಿಗೆ ಮರಳಿದ ಭಾರತೀಯ ಮೂಲದ ಗಗನಯಾನಿ ಸುನಿತಾ ವಿಲಿಯಮ್ಸ್‌

ಸುಮಾರು 9 ತಿಂಗಳಿನಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ಐಎಸ್‌ಎಸ್‌) ಸಿಲುಕಿದ್ದ ಭಾರತೀಯ ಮೂಲದ ಗಗನಯಾನಿ ಸುನಿತಾ ವಿಲಿಯಮ್ಸ್‌ ಮತ್ತು ಸಹ ಗಗನಯಾತ್ರಿ ಬುಚ್‌ ವಿಲ್ಮೋರ್‌ ಕಡೆಗೂ ಸುರಕ್ಷಿತವಾಗಿ ಭೂಮಿಗೆ ಮರಳಿದ್ದಾರೆ.

ಸಹ ಗಗನಯಾತ್ರಿಗಳಾದ ನಿಕ್‌ ಹೇಗ್‌ ಮತ್ತು ರಷ್ಯಾದ ಗಗನಯಾತ್ರಿ ಅಲೆಕ್ಸಾಂಡರ್‌ ಗೋರ್ಬುನೋವ್‌ ಒಳಗೊಂಡಂತೆ ಒಟ್ಟು ನಾಲ್ವರನ್ನು ಹೊತ್ತ ‘ಸ್ಪೇಸೆಕ್ಸ್‌ ಕ್ರ್ಯೂ ಡ್ರ್ಯಾಗನ್‌’ ಗಗನನೌಕೆ ಸುರಕ್ಷಿತವಾಗಿ ಬುಧವಾರ ಬೆಳಗ್ಗೆ ಸರಿಯಾಗಿ 3.37ಕ್ಕೆ ಫ್ಲೋರಿಡಾ ಕರಾವಳಿಯಲ್ಲಿ ಇಳಿದಿದೆ.

ಹಡಗಿನ ಮೂಲಕ ಗಗನಯಾತ್ರಿಗಳನ್ನು ನೌಕೆಯಿಂದ ಹೊರತರಲಾಗಿದ್ದು, ನಾಲ್ವರೂ ಗಗನಯಾತ್ರಿಗಳು ಆರೋಗ್ಯವಾಗಿದ್ದಾರೆ.

ಗಗನನೌಕೆಯು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಭಾರತೀಯ ಕಾಲಮಾನ ಮಂಗಳವಾರ ಬೆಳಗ್ಗೆ 10.30ಕ್ಕೆ ನಿರ್ಗಮಿಸಿತ್ತು. ಸುಮಾರು 17 ಗಂಟೆಗಳ ಸುದೀರ್ಘ ಯಾನದ ಬಳಿಕ ಬುಧವಾರ ಮುಂಜಾನೆ 3.37ಕ್ಕೆ ‘ಕ್ರ್ಯೂ ಡ್ರ್ಯಾಗನ್‌’ ಗಗನನೌಕೆ ಸಮುದ್ರಸ್ಪರ್ಶಕ್ಕೆ ಮಾಡಿದೆ. ಫ್ಲೋರಿಡಾದ ಬಳಿ, ಗಲ್ಫ್ ಕೊಲ್ಲಿಯಲ್ಲಿ ಸಮುದ್ರಕ್ಕೆ ಬಿದ್ದಿದೆ. ಇದಕ್ಕೂ ಮುನ್ನ ಗಗನನೌಕೆಯಲ್ಲಿ ಅಳವಡಿಸಲಾಗಿರುವ ಪ್ಯಾರಾಶ್ಯೂಟ್‌ಗಳು ತೆರೆದುಕೊಂಡು ಗಗನನೌಕೆಯ ವೇಗವನ್ನು ತಗ್ಗಿಸುವ ಮೂಲಕ ಸುರಕ್ಷಿತವಾಗಿ ಅದು ಸಮುದ್ರಕ್ಕೆ ಬೀಳುವಂತೆ ಮಾಡಲಾಗಿದೆ.

ವಿಲಿಯಮ್ಸ ಮತ್ತು ವಿಲ್ಮೋರ್‌ ಜೂನ್‌ 5, 2024 ರಂದು ಬೋಯಿಂಗ್‌ನ ಸ್ಟಾರ್‌ಲೈನರ್‌ ಬಾಹ್ಯಾಕಾಶ ನೌಕೆಯಲ್ಲಿ ಬಾಹ್ಯಾಕಾಶಕ್ಕೆ ತೆರಳಿದ್ದರು. ಆದರೆ ಪ್ರೊಪಲ್ಷನ್‌ ಸಿಸ್ಟಮ್‌ ಅಸಮರ್ಪಕ ಕಾರ್ಯನಿರ್ವಹಣೆ ಸೇರಿದಂತೆ ತಾಂತ್ರಿಕ ಸಮಸ್ಯೆಗಳಿಂದ ಅವರ ಸಕಾಲಿಕ ಮರಳುವಿಕೆ ವಿಳಂಬವಾಯಿತು.

ಸೆಪ್ಟೆಂಬರ್‌ 2024ರಲ್ಲಿ ಸ್ಟಾರ್‌ಲೈನರ್‌ ಅನ್ನು ಸುರಕ್ಷತೆ ದೃಷ್ಟಿಯಿಂದ ಸಿಬ್ಬಂದಿಯಿಲ್ಲದೆಯೇ ಭೂಮಿಗೆ ವಾಪಾಸ್‌ ಕರೆಸಿಕೊಳ್ಳಲಾಯಿತು. ಕೊನೆಯ ಆಯ್ಕೆಯೆಂಬಂತೆ, ಐಎಸ್‌ಎಸ್‌ನಲ್ಲಿ ಸಿಲುಕಿದ ಸುನಿತಾ ಮತ್ತು ವಿಲ್ಮೋರ್‌ ಅವರನ್ನು ಭೂಮಿಗೆ ಕರೆಸಿಕೊಳ್ಳಲು ಉದ್ಯಮಿ ಎಲಾನ್‌ ಮಸ್ಕ್‌ ಒಡೆತನದ ‘ಸ್ಪೇಸೆಕ್ಸ್‌’ ಜತೆ ನಾಸಾ ಕೈಜೋಡಿಸಿತು.

ಅನಿರೀಕ್ಷಿತವಾಗಿ ಇಬ್ಬರು ಗಗನಯಾತ್ರಿಗಳು 286 ದಿನಗಳ ಕಾಲ ಅವರು ಬಾಹ್ಯಾಕಾಶದಲ್ಲಿ ಇದ್ದರು. ಈ ಸಮಯದಲ್ಲಿ ಅವರು ಭೂಮಿಯ ಸುತ್ತ 4,576 ಸುತ್ತುಗಳನ್ನು ಹಾಕಿದ್ದು, ಸುಮಾರು 121 ಮಿಲಿಯನ್ ಮೈಲುಗಳು (195 ಮಿಲಿಯನ್ ಕಿಲೋಮೀಟರ್) ಪ್ರಯಾಣಿಸಿದ್ದಾರೆ. ಬೇರೆ ಗಗನಯಾತ್ರಿಗಳು ಈ ಹಿಂದೆ ಹೆಚ್ಚು ಕಾಲ ಬಾಹ್ಯಾಕಾಶದಲ್ಲಿ ಇದ್ದರೂ, ಇವರಷ್ಟು ಅನಿಶ್ಚಿತತೆಯನ್ನು ಯಾರೂ ಎದುರಿಸಿರಲಿಲ್ಲ.

ಸುನಿತಾ ಹಾಗೂ ಬುಚ್ ವಿಲ್ಮೋರ್ ಬಾಹ್ಯಾಕಾಶ ನಿಲ್ದಾಣದಲ್ಲಿ ಅನೇಖ ಪ್ರಯೋಗಗಳನ್ನು ಮಾಡಿದರು. ಉಪಕರಣಗಳ ದುರಸ್ತಿ , ಬಾಹ್ಯಾಕಾಶ ನಡಿಗೆಯನ್ನೂ ಮಾಡಿದರು. ಸುನಿತಾ ವಿಲಿಯಮ್ಸ್ ಮೂರು ತಿಂಗಳ ನಂತರ ಐಎಸ್‌ಎಸ್‌ ನ ಕಮಾಂಡರ್ ಆದರು. ಅವರು ಒಟ್ಟು 62 ಗಂಟೆಗಳ ಕಾಲ ಒಂಬತ್ತು ಬಾರಿ ಬಾಹ್ಯಾಕಾಶ ನಡಿಗೆ ಮಾಡಿ ಮಹಿಳಾ ಗಗನಯಾತ್ರಿಯಾಗಿ ದಾಖಲೆ ನಿರ್ಮಿಸಿದರು.

Ramesh Babu

Journalist

Recent Posts

ಓದು, ಪ್ರವಾಸ ಮತ್ತು ಧ್ಯಾನಸ್ಥ ಮನಸ್ಥಿತಿ……..

ಪ್ರವಾಸ ಕಥನಗಳ ಬಗ್ಗೆ ಬಹಳ ಹಿಂದಿನಿಂದಲೂ ಸಾಕಷ್ಟು ಲೇಖನಗಳನ್ನು ಓದುತ್ತಲೇ ಇರುತ್ತೇನೆ. ಅದು ಪ್ರವಾಸೋದ್ಯಮಕ್ಕಾಗಿಯಲ್ಲ. ಏಕೆಂದರೆ ಪ್ರವಾಸ ವ್ಯಾಪಾರಿಗಳಿಗೆ ಒಂದು…

7 hours ago

ಬೆಳೆ ವಿಮೆ ಮಾಡಿಸಲು ಆ.14 ಕೊನೆಯ ದಿನ: ರೈತರು ತಪ್ಪದೇ ಬೆಳೆ ವಿಮೆ ಮಾಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…

20 hours ago

ಬರದ ನಡುವೆಯೂ ರಾಗಿ ರೈತರಿಗೆ ಆಸರೆ: ಫಸಲ್ ಬಿಮಾ ಪ್ರೀಮಿಯಂ ಭರಿಸುವುದಾಗಿ ಶಾಸಕ ಧೀರಜ್ ಮುನಿರಾಜ್ ಘೋಷಣೆ

ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…

22 hours ago

ಕೋಳಿ ವಿಚಾರದ ಜಗಳಕ್ಕೆ ಹೊಸ ಟ್ವಿಸ್ಟ್: ಎರಡೂ ಕಡೆಯಿಂದ ಹಲ್ಲೆ ಆರೋಪ, ಆಸ್ಪತ್ರೆಯಲ್ಲೂ ಗಲಾಟೆ

ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…

24 hours ago

” ಕ್ಷಮೆ” ಎಂಬ ಭಾವದ ಸುತ್ತ……

ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…

1 day ago

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

2 days ago