ಸುಳ್ಳು ಭರವಸೆಗಳನ್ನು ನೀಡುವ ಪಕ್ಷ ನಮ್ಮದಲ್ಲ, ನುಡಿದಂತೆ ನಡೆಯುವ ಪಕ್ಷ: ಸಚಿವ ಸತೀಶ್ ಜಾರಕಿಹೊಳಿ

ದೊಡ್ಡಬಳ್ಳಾಪುರ: ರಾಜ್ಯದಲ್ಲಿ ಜನಪರವಾದ ಆಡಳಿತ ನಮ್ಮದಾಗಿದೆ. ಇದನ್ನು ಸಹಿಸದವರು ಹೇಳುವ ಮಾತುಗಳಿಗೆ ಜನ ಬೆಲೆ ಕೊಡುವುದಿಲ್ಲ ಎನ್ನುವ ನಂಬಿಕೆಯಿದೆ ಎಂದು ಕೋಲೋಕಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ತಾಲೂಕಿನ ಹೊರವಲಯದಲ್ಲಿರುವ ಮಾರಸಂದ್ರದ ಬಳಿ ಬೆಂಗಳೂರು ಉತ್ತರ ತಾಲ್ಲೂಕಿನ ಹೆಸರಘಟ್ಟ ಬ್ಲಾಕ್ ವತಿಯಿಂದ ಶನಿವಾರ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣ ಪೂರ್ವದಲ್ಲಿ ರಾಜ್ಯದ ಜನರಿಗೆ ನೀಡಿರುವ ಎಲ್ಲಾ ಭರವಸೆಗಳನ್ನು ಹಂತ ಹಂತವಾಗಿ ಮುಂದಿನ ಐದು ವರ್ಷಗಳ ಆಡಳಿತದಲ್ಲಿ ಈಡೇರಿಸಲಿದ್ದಾರೆ ಎಂದರು.

ಸುಳ್ಳು ಭರವಸೆಗಳನ್ನು ನೀಡುವ ಪಕ್ಷ ನಮ್ಮದಲ್ಲ, ನುಡಿದಂತೆ ನಡೆಯುವ ಪಕ್ಷ. ಜನರ ವಿಶ್ವಾಸವನ್ನು ಉಳಿಸಿಕೊಳ್ಳುವಂತಹ ಕೆಲಸಗಳನ್ನು ರಾಜ್ಯದಲ್ಲಿ ಮಾಡಿ ತೋರಿಸಲಾಗುವುದು ಎಂದರು.

ಕೆಪಿಸಿಸಿ ಮಾಧ್ಯಮ ವಕ್ತಾರ ಮಂಜುನಾಥ ಎಂ.ಅದ್ದೆ ಮಾತನಾಡಿ, ಮಾನವ ಬಂಧುತ್ವ ವೇದಿಕೆ ಮೂಲಕ ಈ ನಾಡಿನಲ್ಲಿ ವೈಜ್ಞಾನಿಕ ಚಿಂತನೆ ಬೆಳೆಸುತ್ತಿರುವ ಹಾಗೂ ಅಂಬೇಡ್ಕರ್ ಅವರ ಸಂವಿಧಾನದಿಂದ ಮಾತ್ರ ಬಹುಜನರ ಏಳಿಗೆ ಸಾಧ್ಯವಾಗಲಿದೆ ಎನ್ನುವ ನಂಬಿಕೆ ಸತೀಶ್ಜಾರಕಿಹೊಳಿ ಅವರದ್ದು. ಈ ನಾಡಿನ ಉನ್ನತ ಹುದ್ದೆಯನ್ನು ನಿರ್ವಹಿಸುವ ಎಲ್ಲಾ ರೀತಿಯ ಅರ್ಹತೆಗಳನ್ನು ಹೊಂದಿರುವ ಪ್ರಮುಖರಾಗಿರುವ ಸತೀಶ್ ಜಾರಕಿಹೊಳಿ ಅವರು, ಇಡೀ ಮಾನ ಸಮುದಾಯ ಸಮಾನತೆಯಿಂದ ಬದುಕಬೇಕಿದೆ ಎನ್ನುವ ಆಶಯವನ್ನು ಹೊಂದಿದ್ದಾರೆ. ಸರ್ಕಾರದಲ್ಲಿ ಸದ್ದುಗದ್ದಲ ಇಲ್ಲದೆ ಕಾರ್ಯನಿರ್ವಹಿಸುತ್ತಿವುದು ಲೋಕೋಪಯೋಗಿ ಇಲಾಖೆಯಾಗಿದೆ ಎಂದರು.

ಈ ಸಂದರ್ಭದಲ್ಲಿ ಆಹಾರ ಮತ್ತು ನಾಗರೀಕ ಸಚಿವ ಕೆ.ಎಚ್.ಮುನಿಯಪ್ಪ, ಹೆಸರಘಟ್ಟ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ನಾಗರಾಜಗೌಡ, ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ, ಕೆಪಿಸಿಸಿ ಎಸ್ಸಿ ಘಟಕದ ರಾಜ್ಯ ಸಂಚಾಲಕ ಸಿ.ರಾಮಕೃಷ್ಣ, ಪ್ರಕಾಶ್, ಮುಖಂಡರಾದ ಸತೀಶ್ಸಾದೇನಹಳ್ಳಿ, ರಮೇಶ್, ರಾಜಾನುಕುಂಟೆ ಚಂದ್ರಶೇಖರ್, ಇಟ್ಟಗಲ್ಲಪುರ ಮುನಿಕೃಷ್ಣ, ವಿರೂಪಾಕ್ಷ, ಚಂದ್ರಶೇಖರ್ ಇದ್ದರು.

Ramesh Babu

Journalist

Recent Posts

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

47 minutes ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

12 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

13 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

14 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

17 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago