ದೊಡ್ಡಬಳ್ಳಾಪುರ: ಸೂಕ್ತ ದಾಖಲೆಗಳಿಲ್ಲದೇ ಹಾಗೂ ನಿಯಮಾವಳಿ ಎಟಿಎಂಗಳಿಗೆ ತುಂಬಿಸುವ ವಾಹನದಲ್ಲಿ ಸಾಗಿಸುತ್ತಿದ್ದ ಅಂದಾಜು ₹4 ಕೋಟಿ ರೂ.ಗಳನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ನಗರದ ಡಿ-ಕ್ರಾಸ್ ಬಳಿ ಖಚಿತ ಮಾಹಿತಿ ಮೇರೆಗೆ ವಾಹನವನ್ನು ತಪಾಸಣೆ ನಡೆಸಿದಾಗ ಅಪಾರ ಪ್ರಮಾಣದ ನಗದು ಇದ್ದು, ಪೊಲೀಸರು ಹಾಗೂ ಚುನಾವಣಾಧಿಕಾರಿಗಳು ಇಡಿ ಹಾಗೂ ಐಟಿ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಮೇಲ್ನೋಟಕ್ಕೆ ರೋಜಿಪುರದ ಎಟಿಎಂಗೆ ಸಾಗಿಸುತ್ತಿದ್ದ ಹಣ ಎಂದು ತಿಳಿದುಬಂದಿದೆ. ಆದರೆ, ಹಣಕ್ಕೆ ಸಂಬಂಧಿಸಿದ ಸೂಕ್ತ ದಾಖಲೆ ಇರಲಿಲ್ಲ. ಹಾಗಾಗಿ ಹಣವನ್ನು ಠಾಣೆಗೆ ಸಾಗಿಸಿದ್ದು, ಲೆಕ್ಕ ಹಾಕಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಚುನಾವಣಾಧಿಕಾರಿಗಳು ದೂರು ಸಹ ನೀಡಿದ್ದು, ಪ್ರಕರಣ ದಾಖಲಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ವಶಕ್ಕೆ ಪಡೆದಿರುವ ಹಣದ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…