ಸೂಕ್ತ ಸಮಯಕ್ಕೆ ಬಸ್ ಬಿಡಿ ಸ್ವಾಮಿ…: ಟಿಸಿಗೆ ಬಿಸಿ‌ ಮುಟ್ಟಿಸಿದ ಬಸ್ ಪ್ರಯಾಣಿಕರು

ದಿನನಿತ್ಯ ಬಸ್ ಪ್ರಯಾಣಿಕರು ದೊಡ್ಡಬಳ್ಳಾಪುರದಿಂದ ಬೆಂಗಳೂರಿಗೆ ಆಫೀಸ್, ಶಾಲಾ-ಕಾಲೇಜುಗಳು, ಆಸ್ಪತ್ರೆ, ಕೋರ್ಟ್-ಕಚೇರಿ ಹಾಗೂ ಇತರೆ ಕೆಲಸ ಕಾರ್ಯಗಳಿಗೆ ಸಮಯಕ್ಕೆ ಸರಿಯಾಗಿ ತೆರಳಲು ಆಗದೇ ಪರದಾಡುವಂತಾಗಿದೆ. ಏಕೆಂದರೆ, ಗಂಟೆ ಗಂಟೆ ಕಾದರು ಸೂಕ್ತ ಸಮಯಕ್ಕೆ ಬಸ್ ಗಳು ಬರೋದಿಲ್ಲ ಎಂಬ ಕಾರಣಕ್ಕೆ. ಅಪರೂಪಕ್ಕೆ ಆಗೊಮ್ಮೆ ಈಗೊಮ್ಮೆ ಒಂದು ಬಸ್ ಬಂದರೆ ಅದಕ್ಕೆ ನೂಕುನುಗ್ಗಲು. ಹೆಜ್ಜೆ ಇಡಲು ಜಾಗ ಇರೋದಿಲ್ಲ. ಪ್ರತಿದಿನ ಇದೇ ಗೋಳು. ಇದರಿಂದ ಬೇಸತ್ತ ಪ್ರಯಾಣಿಕರು ಇಂದು ಬೆಳಗ್ಗೆ ಬಸ್ ಸಮಸ್ಯೆ ಬಗೆಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳನ್ನು ದೊಡ್ಡಬಳ್ಳಾಪುರ ನಗರದ ಬಸ್ ನಿಲ್ದಾಣದಲ್ಲಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಕುರಿತು ಹಲವು ಬಾರಿ ದೂರು ನೀಡಿದರೂ ಹೆಚ್ಚುವರಿ ಬಸ್ ಗಳನ್ನ ಬಿಡದೇ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಸಿಕ ಮತ್ತು ವಾರ್ಷಿಕ ಬಸ್ ಪಾಸ್ ಗಳನ್ನ ನೀಡಿ ಸಮಯಕ್ಕೆ ಸರಿಯಾಗಿ ಬಸ್ ಗಳನ್ನ ಬಿಡದ ಕೆಎಸ್ಆರ್ ಟಿಸಿ ಘಟಕದ  ಅಧಿಕಾರಿಗಳು ಬೇಜವಾಬ್ದಾರಿ ವಹಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Ramesh Babu

Journalist

Recent Posts

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

16 minutes ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

4 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

5 hours ago

ಐದು ದಶಕಗಳಿಂದ ಗುಡಿಸಲಲ್ಲೇ ಬದುಕು: ಮೂಲಭೂತ ಸೌಲಭ್ಯಕ್ಕಾಗಿ ಹಕ್ಕಿಪಿಕ್ಕಿ ಕುಟುಂಬಗಳ ನರಳಾಟ

ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…

11 hours ago

ಓದು ಮುಖ್ಯ. ಗ್ರಹಿಕೆ ಅತಿಮುಖ್ಯ. ಮಾನವೀಯ ಸ್ಪಂದನೆ ಎಲ್ಲಕ್ಕಿಂತ ಮುಖ್ಯ

ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…

12 hours ago

ಸಾರಿಗೆ ನಿಗಮಗಳ ನೌಕರರು ಮತ್ತು ಅಧಿಕಾರಿಗಳ ವೇತನ ಪರಿಷ್ಕರಣೆಗೆ ಅನುಮೋದನೆ

ರಾಜ್ಯ ಸರ್ಕಾರವು ಸಾರಿಗೆ ನಿಗಮಗಳ ನೌಕರರು ಮತ್ತು ಅಧಿಕಾರಿಗಳ ವೇತನ ಪರಿಷ್ಕರಣೆಗೆ ಅನುಮೋದನೆ ನೀಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ…

1 day ago