ಬೆಂಗಳೂರು, ವೈಟ್ ಫಿಲ್ದ್ : ಮಧ್ಯಪ್ರಾಚ್ಯದ ರೋಗಿಯೊಬ್ಬರು ಕೆಮ್ಮು, ಉಸಿರಾಟದ ತೊಂದರೆ ಮತ್ತು ಬಲ ಶ್ವಾಸಕೋಶದಲ್ಲಿ ಸಮಸ್ಯೆಯಿಂದ ಬಳಲುತ್ತಿದ್ದರು. ಪ್ರಾಥಮಿಕ ಎಕ್ಸ್-ರೆ ಮತ್ತು ಸಿಟಿ ಸ್ಕ್ಯಾನ್ನಲ್ಲಿ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ಇದೆ ಎಂದು ಅನುಮಾನ ವ್ಯಕ್ತವಾಗಿತ್ತು.
ವಾರ್ಷಿಕ ಹೆಲ್ತ್ ಚೆಕ್ ಅಪ್ ಮಾಡಿಸಿದಾಗ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ಇದೆ ಎಂದು ಅಲ್ಲಿನ ವೈದ್ಯರು ತಿಳಿಸಿದ್ದರು .ಆದರೆ, ಅವರು ಮೆಡಿಕವರ್ ಆಸ್ಪತ್ರೆಯ ಶ್ವಾಸಕೋಶ ತಜ್ಞರಾದ ಡಾ. ಮಂಜುನಾಥ್ ಬಿ.ಜಿ, ಅವರನ್ನು ಸಂಪರ್ಕಿಸಿದಾಗ, ಡಾಕ್ಟರ್ ಅವರು ಎಲ್ಲಾ ವರದಿಗಳನ್ನು ಪರಿಶೀಲಿಸಿ ಶ್ವಾಸಕೋಶದ ಕ್ಯಾನ್ಸರ್ ಇಲ್ಲ ಎಂದು ಖಚಿತಪಡಿಸಿದರು. ಮುಂದಿನ ತಪಾಸಣೆಯಲ್ಲಿ, ರೋಗಿಗೆ ಅಲರ್ಜಿ ಬ್ರಾಂಕೋಪಲ್ಮನರಿ ಆಸ್ಪರ್ಜಿಲೋಸಿಸ್ (ABPA) ಎಂಬ ಸ್ಥಿತಿ ಕಂಡುಬಂತು.
ಡಾಕ್ಟರ್ ಮಂಜುನಾಥ್ ಸೂಕ್ತ ಔಷಧೋಪಚಾರವನ್ನು ನೀಡಿದ ಪರಿಣಾಮ, ಕೇವಲ ಎರಡು ವಾರಗಳಲ್ಲಿ ರೋಗಿಯ ಎಕ್ಸ್-ರೆ ವರದಿ ಸಂಪೂರ್ಣವಾಗಿ ಸಾಮಾನ್ಯಗೊಂಡಿತು ಮತ್ತು ಅವರು ಪೂರ್ಣ ಚೇತರಿಸಿಕೊಂಡರು.
ಈ ಕುರಿತು ಮಾತನಾಡಿದ ಡಾ. ಮಂಜುನಾಥ್ ಬಿ.ಜಿ,
“ಸರಿಯಾದ ಸಮಯಕ್ಕೆ ಸೂಕ್ತ ವೈದ್ಯರ ಹತ್ರ ಚಿಕಿತ್ಸೆ ಪಡೆದರೇ ಅನಗತ್ಯವಾಗಿ ಟೆಸ್ಟ್ ಮಾಡಿಸುವ ಅವಶ್ಯಕತೆ ಇರೋದಿಲ್ಲ.” ಎಂದರು.
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…
ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…
ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…