ಬೆಂಗಳೂರು, ವೈಟ್ ಫಿಲ್ದ್ : ಮಧ್ಯಪ್ರಾಚ್ಯದ ರೋಗಿಯೊಬ್ಬರು ಕೆಮ್ಮು, ಉಸಿರಾಟದ ತೊಂದರೆ ಮತ್ತು ಬಲ ಶ್ವಾಸಕೋಶದಲ್ಲಿ ಸಮಸ್ಯೆಯಿಂದ ಬಳಲುತ್ತಿದ್ದರು. ಪ್ರಾಥಮಿಕ ಎಕ್ಸ್-ರೆ ಮತ್ತು ಸಿಟಿ ಸ್ಕ್ಯಾನ್ನಲ್ಲಿ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ಇದೆ ಎಂದು ಅನುಮಾನ ವ್ಯಕ್ತವಾಗಿತ್ತು.
ವಾರ್ಷಿಕ ಹೆಲ್ತ್ ಚೆಕ್ ಅಪ್ ಮಾಡಿಸಿದಾಗ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ಇದೆ ಎಂದು ಅಲ್ಲಿನ ವೈದ್ಯರು ತಿಳಿಸಿದ್ದರು .ಆದರೆ, ಅವರು ಮೆಡಿಕವರ್ ಆಸ್ಪತ್ರೆಯ ಶ್ವಾಸಕೋಶ ತಜ್ಞರಾದ ಡಾ. ಮಂಜುನಾಥ್ ಬಿ.ಜಿ, ಅವರನ್ನು ಸಂಪರ್ಕಿಸಿದಾಗ, ಡಾಕ್ಟರ್ ಅವರು ಎಲ್ಲಾ ವರದಿಗಳನ್ನು ಪರಿಶೀಲಿಸಿ ಶ್ವಾಸಕೋಶದ ಕ್ಯಾನ್ಸರ್ ಇಲ್ಲ ಎಂದು ಖಚಿತಪಡಿಸಿದರು. ಮುಂದಿನ ತಪಾಸಣೆಯಲ್ಲಿ, ರೋಗಿಗೆ ಅಲರ್ಜಿ ಬ್ರಾಂಕೋಪಲ್ಮನರಿ ಆಸ್ಪರ್ಜಿಲೋಸಿಸ್ (ABPA) ಎಂಬ ಸ್ಥಿತಿ ಕಂಡುಬಂತು.
ಡಾಕ್ಟರ್ ಮಂಜುನಾಥ್ ಸೂಕ್ತ ಔಷಧೋಪಚಾರವನ್ನು ನೀಡಿದ ಪರಿಣಾಮ, ಕೇವಲ ಎರಡು ವಾರಗಳಲ್ಲಿ ರೋಗಿಯ ಎಕ್ಸ್-ರೆ ವರದಿ ಸಂಪೂರ್ಣವಾಗಿ ಸಾಮಾನ್ಯಗೊಂಡಿತು ಮತ್ತು ಅವರು ಪೂರ್ಣ ಚೇತರಿಸಿಕೊಂಡರು.
ಈ ಕುರಿತು ಮಾತನಾಡಿದ ಡಾ. ಮಂಜುನಾಥ್ ಬಿ.ಜಿ,
“ಸರಿಯಾದ ಸಮಯಕ್ಕೆ ಸೂಕ್ತ ವೈದ್ಯರ ಹತ್ರ ಚಿಕಿತ್ಸೆ ಪಡೆದರೇ ಅನಗತ್ಯವಾಗಿ ಟೆಸ್ಟ್ ಮಾಡಿಸುವ ಅವಶ್ಯಕತೆ ಇರೋದಿಲ್ಲ.” ಎಂದರು.
ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…
ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…
ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…
ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…
ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…
ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ..... ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು..... ತಾವೇ ಸೃಷ್ಟಿಸಿಕೊಂಡ, ನಾವೇ…