ಬೆಂಗಳೂರು, ವೈಟ್ ಫಿಲ್ದ್ : ಮಧ್ಯಪ್ರಾಚ್ಯದ ರೋಗಿಯೊಬ್ಬರು ಕೆಮ್ಮು, ಉಸಿರಾಟದ ತೊಂದರೆ ಮತ್ತು ಬಲ ಶ್ವಾಸಕೋಶದಲ್ಲಿ ಸಮಸ್ಯೆಯಿಂದ ಬಳಲುತ್ತಿದ್ದರು. ಪ್ರಾಥಮಿಕ ಎಕ್ಸ್-ರೆ ಮತ್ತು ಸಿಟಿ ಸ್ಕ್ಯಾನ್ನಲ್ಲಿ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ಇದೆ ಎಂದು ಅನುಮಾನ ವ್ಯಕ್ತವಾಗಿತ್ತು.
ವಾರ್ಷಿಕ ಹೆಲ್ತ್ ಚೆಕ್ ಅಪ್ ಮಾಡಿಸಿದಾಗ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ಇದೆ ಎಂದು ಅಲ್ಲಿನ ವೈದ್ಯರು ತಿಳಿಸಿದ್ದರು .ಆದರೆ, ಅವರು ಮೆಡಿಕವರ್ ಆಸ್ಪತ್ರೆಯ ಶ್ವಾಸಕೋಶ ತಜ್ಞರಾದ ಡಾ. ಮಂಜುನಾಥ್ ಬಿ.ಜಿ, ಅವರನ್ನು ಸಂಪರ್ಕಿಸಿದಾಗ, ಡಾಕ್ಟರ್ ಅವರು ಎಲ್ಲಾ ವರದಿಗಳನ್ನು ಪರಿಶೀಲಿಸಿ ಶ್ವಾಸಕೋಶದ ಕ್ಯಾನ್ಸರ್ ಇಲ್ಲ ಎಂದು ಖಚಿತಪಡಿಸಿದರು. ಮುಂದಿನ ತಪಾಸಣೆಯಲ್ಲಿ, ರೋಗಿಗೆ ಅಲರ್ಜಿ ಬ್ರಾಂಕೋಪಲ್ಮನರಿ ಆಸ್ಪರ್ಜಿಲೋಸಿಸ್ (ABPA) ಎಂಬ ಸ್ಥಿತಿ ಕಂಡುಬಂತು.
ಡಾಕ್ಟರ್ ಮಂಜುನಾಥ್ ಸೂಕ್ತ ಔಷಧೋಪಚಾರವನ್ನು ನೀಡಿದ ಪರಿಣಾಮ, ಕೇವಲ ಎರಡು ವಾರಗಳಲ್ಲಿ ರೋಗಿಯ ಎಕ್ಸ್-ರೆ ವರದಿ ಸಂಪೂರ್ಣವಾಗಿ ಸಾಮಾನ್ಯಗೊಂಡಿತು ಮತ್ತು ಅವರು ಪೂರ್ಣ ಚೇತರಿಸಿಕೊಂಡರು.
ಈ ಕುರಿತು ಮಾತನಾಡಿದ ಡಾ. ಮಂಜುನಾಥ್ ಬಿ.ಜಿ,
“ಸರಿಯಾದ ಸಮಯಕ್ಕೆ ಸೂಕ್ತ ವೈದ್ಯರ ಹತ್ರ ಚಿಕಿತ್ಸೆ ಪಡೆದರೇ ಅನಗತ್ಯವಾಗಿ ಟೆಸ್ಟ್ ಮಾಡಿಸುವ ಅವಶ್ಯಕತೆ ಇರೋದಿಲ್ಲ.” ಎಂದರು.
ರಾಜ್ಯದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…
ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…
ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…
ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್ಸ್ಪೆಕ್ಟರ್ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…
ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್…