ಸೂಕ್ತ ಸಮಯದಲ್ಲಿ ಸರಿಯಾದ ವೈದ್ಯರನ್ನು ಭೇಟಿ ಮಾಡಿದರೆ ಅನಗತ್ಯ ಪರೀಕ್ಷೆಗಳು ತಪ್ಪಿಸಿಕೊಳ್ಳಬಹುದು- ಡಾ.ಮಂಜುನಾಥ್ ಬಿ.ಜಿ

ಬೆಂಗಳೂರು, ವೈಟ್‌ ಫಿಲ್ದ್‌ : ಮಧ್ಯಪ್ರಾಚ್ಯದ ರೋಗಿಯೊಬ್ಬರು ಕೆಮ್ಮು, ಉಸಿರಾಟದ ತೊಂದರೆ ಮತ್ತು ಬಲ ಶ್ವಾಸಕೋಶದಲ್ಲಿ ಸಮಸ್ಯೆಯಿಂದ ಬಳಲುತ್ತಿದ್ದರು. ಪ್ರಾಥಮಿಕ ಎಕ್ಸ್-ರೆ ಮತ್ತು ಸಿಟಿ ಸ್ಕ್ಯಾನ್‌ನಲ್ಲಿ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ಇದೆ ಎಂದು ಅನುಮಾನ ವ್ಯಕ್ತವಾಗಿತ್ತು.

ವಾರ್ಷಿಕ ಹೆಲ್ತ್‌ ಚೆಕ್‌ ಅಪ್‌ ಮಾಡಿಸಿದಾಗ ಅವರಿಗೆ ಶ್ವಾಸಕೋಶದ ಕ್ಯಾನ್ಸರ್‌ ಇದೆ ಎಂದು ಅಲ್ಲಿನ ವೈದ್ಯರು ತಿಳಿಸಿದ್ದರು .ಆದರೆ, ಅವರು ಮೆಡಿಕವರ್ ಆಸ್ಪತ್ರೆಯ ಶ್ವಾಸಕೋಶ ತಜ್ಞರಾದ ಡಾ. ಮಂಜುನಾಥ್ ಬಿ.ಜಿ, ಅವರನ್ನು ಸಂಪರ್ಕಿಸಿದಾಗ, ಡಾಕ್ಟರ್ ಅವರು ಎಲ್ಲಾ ವರದಿಗಳನ್ನು ಪರಿಶೀಲಿಸಿ ಶ್ವಾಸಕೋಶದ ಕ್ಯಾನ್ಸರ್ ಇಲ್ಲ ಎಂದು ಖಚಿತಪಡಿಸಿದರು. ಮುಂದಿನ ತಪಾಸಣೆಯಲ್ಲಿ, ರೋಗಿಗೆ ಅಲರ್ಜಿ ಬ್ರಾಂಕೋಪಲ್ಮನರಿ ಆಸ್ಪರ್ಜಿಲೋಸಿಸ್ (ABPA) ಎಂಬ ಸ್ಥಿತಿ ಕಂಡುಬಂತು.

ಡಾಕ್ಟರ್ ಮಂಜುನಾಥ್ ಸೂಕ್ತ ಔಷಧೋಪಚಾರವನ್ನು ನೀಡಿದ ಪರಿಣಾಮ, ಕೇವಲ ಎರಡು ವಾರಗಳಲ್ಲಿ ರೋಗಿಯ ಎಕ್ಸ್-ರೆ ವರದಿ ಸಂಪೂರ್ಣವಾಗಿ ಸಾಮಾನ್ಯಗೊಂಡಿತು ಮತ್ತು ಅವರು ಪೂರ್ಣ ಚೇತರಿಸಿಕೊಂಡರು.

ಈ ಕುರಿತು ಮಾತನಾಡಿದ ಡಾ. ಮಂಜುನಾಥ್ ಬಿ.ಜಿ,
“ಸರಿಯಾದ ಸಮಯಕ್ಕೆ ಸೂಕ್ತ ವೈದ್ಯರ ಹತ್ರ ಚಿಕಿತ್ಸೆ ಪಡೆದರೇ ಅನಗತ್ಯವಾಗಿ ಟೆಸ್ಟ್‌ ಮಾಡಿಸುವ ಅವಶ್ಯಕತೆ ಇರೋದಿಲ್ಲ.” ಎಂದರು.

Ramesh Babu

Journalist

Recent Posts

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

4 days ago