ಬೆಂಗಳೂರು, ವೈಟ್ ಫಿಲ್ದ್ : ಮಧ್ಯಪ್ರಾಚ್ಯದ ರೋಗಿಯೊಬ್ಬರು ಕೆಮ್ಮು, ಉಸಿರಾಟದ ತೊಂದರೆ ಮತ್ತು ಬಲ ಶ್ವಾಸಕೋಶದಲ್ಲಿ ಸಮಸ್ಯೆಯಿಂದ ಬಳಲುತ್ತಿದ್ದರು. ಪ್ರಾಥಮಿಕ ಎಕ್ಸ್-ರೆ ಮತ್ತು ಸಿಟಿ ಸ್ಕ್ಯಾನ್ನಲ್ಲಿ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ಇದೆ ಎಂದು ಅನುಮಾನ ವ್ಯಕ್ತವಾಗಿತ್ತು.
ವಾರ್ಷಿಕ ಹೆಲ್ತ್ ಚೆಕ್ ಅಪ್ ಮಾಡಿಸಿದಾಗ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ಇದೆ ಎಂದು ಅಲ್ಲಿನ ವೈದ್ಯರು ತಿಳಿಸಿದ್ದರು .ಆದರೆ, ಅವರು ಮೆಡಿಕವರ್ ಆಸ್ಪತ್ರೆಯ ಶ್ವಾಸಕೋಶ ತಜ್ಞರಾದ ಡಾ. ಮಂಜುನಾಥ್ ಬಿ.ಜಿ, ಅವರನ್ನು ಸಂಪರ್ಕಿಸಿದಾಗ, ಡಾಕ್ಟರ್ ಅವರು ಎಲ್ಲಾ ವರದಿಗಳನ್ನು ಪರಿಶೀಲಿಸಿ ಶ್ವಾಸಕೋಶದ ಕ್ಯಾನ್ಸರ್ ಇಲ್ಲ ಎಂದು ಖಚಿತಪಡಿಸಿದರು. ಮುಂದಿನ ತಪಾಸಣೆಯಲ್ಲಿ, ರೋಗಿಗೆ ಅಲರ್ಜಿ ಬ್ರಾಂಕೋಪಲ್ಮನರಿ ಆಸ್ಪರ್ಜಿಲೋಸಿಸ್ (ABPA) ಎಂಬ ಸ್ಥಿತಿ ಕಂಡುಬಂತು.
ಡಾಕ್ಟರ್ ಮಂಜುನಾಥ್ ಸೂಕ್ತ ಔಷಧೋಪಚಾರವನ್ನು ನೀಡಿದ ಪರಿಣಾಮ, ಕೇವಲ ಎರಡು ವಾರಗಳಲ್ಲಿ ರೋಗಿಯ ಎಕ್ಸ್-ರೆ ವರದಿ ಸಂಪೂರ್ಣವಾಗಿ ಸಾಮಾನ್ಯಗೊಂಡಿತು ಮತ್ತು ಅವರು ಪೂರ್ಣ ಚೇತರಿಸಿಕೊಂಡರು.
ಈ ಕುರಿತು ಮಾತನಾಡಿದ ಡಾ. ಮಂಜುನಾಥ್ ಬಿ.ಜಿ,
“ಸರಿಯಾದ ಸಮಯಕ್ಕೆ ಸೂಕ್ತ ವೈದ್ಯರ ಹತ್ರ ಚಿಕಿತ್ಸೆ ಪಡೆದರೇ ಅನಗತ್ಯವಾಗಿ ಟೆಸ್ಟ್ ಮಾಡಿಸುವ ಅವಶ್ಯಕತೆ ಇರೋದಿಲ್ಲ.” ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…