ಸೂಕ್ತ ಸಮಯದಲ್ಲಿ ಸರಿಯಾದ ವೈದ್ಯರನ್ನು ಭೇಟಿ ಮಾಡಿದರೆ ಅನಗತ್ಯ ಪರೀಕ್ಷೆಗಳು ತಪ್ಪಿಸಿಕೊಳ್ಳಬಹುದು- ಡಾ.ಮಂಜುನಾಥ್ ಬಿ.ಜಿ

ಬೆಂಗಳೂರು, ವೈಟ್‌ ಫಿಲ್ದ್‌ : ಮಧ್ಯಪ್ರಾಚ್ಯದ ರೋಗಿಯೊಬ್ಬರು ಕೆಮ್ಮು, ಉಸಿರಾಟದ ತೊಂದರೆ ಮತ್ತು ಬಲ ಶ್ವಾಸಕೋಶದಲ್ಲಿ ಸಮಸ್ಯೆಯಿಂದ ಬಳಲುತ್ತಿದ್ದರು. ಪ್ರಾಥಮಿಕ ಎಕ್ಸ್-ರೆ ಮತ್ತು ಸಿಟಿ ಸ್ಕ್ಯಾನ್‌ನಲ್ಲಿ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ಇದೆ ಎಂದು ಅನುಮಾನ ವ್ಯಕ್ತವಾಗಿತ್ತು.

ವಾರ್ಷಿಕ ಹೆಲ್ತ್‌ ಚೆಕ್‌ ಅಪ್‌ ಮಾಡಿಸಿದಾಗ ಅವರಿಗೆ ಶ್ವಾಸಕೋಶದ ಕ್ಯಾನ್ಸರ್‌ ಇದೆ ಎಂದು ಅಲ್ಲಿನ ವೈದ್ಯರು ತಿಳಿಸಿದ್ದರು .ಆದರೆ, ಅವರು ಮೆಡಿಕವರ್ ಆಸ್ಪತ್ರೆಯ ಶ್ವಾಸಕೋಶ ತಜ್ಞರಾದ ಡಾ. ಮಂಜುನಾಥ್ ಬಿ.ಜಿ, ಅವರನ್ನು ಸಂಪರ್ಕಿಸಿದಾಗ, ಡಾಕ್ಟರ್ ಅವರು ಎಲ್ಲಾ ವರದಿಗಳನ್ನು ಪರಿಶೀಲಿಸಿ ಶ್ವಾಸಕೋಶದ ಕ್ಯಾನ್ಸರ್ ಇಲ್ಲ ಎಂದು ಖಚಿತಪಡಿಸಿದರು. ಮುಂದಿನ ತಪಾಸಣೆಯಲ್ಲಿ, ರೋಗಿಗೆ ಅಲರ್ಜಿ ಬ್ರಾಂಕೋಪಲ್ಮನರಿ ಆಸ್ಪರ್ಜಿಲೋಸಿಸ್ (ABPA) ಎಂಬ ಸ್ಥಿತಿ ಕಂಡುಬಂತು.

ಡಾಕ್ಟರ್ ಮಂಜುನಾಥ್ ಸೂಕ್ತ ಔಷಧೋಪಚಾರವನ್ನು ನೀಡಿದ ಪರಿಣಾಮ, ಕೇವಲ ಎರಡು ವಾರಗಳಲ್ಲಿ ರೋಗಿಯ ಎಕ್ಸ್-ರೆ ವರದಿ ಸಂಪೂರ್ಣವಾಗಿ ಸಾಮಾನ್ಯಗೊಂಡಿತು ಮತ್ತು ಅವರು ಪೂರ್ಣ ಚೇತರಿಸಿಕೊಂಡರು.

ಈ ಕುರಿತು ಮಾತನಾಡಿದ ಡಾ. ಮಂಜುನಾಥ್ ಬಿ.ಜಿ,
“ಸರಿಯಾದ ಸಮಯಕ್ಕೆ ಸೂಕ್ತ ವೈದ್ಯರ ಹತ್ರ ಚಿಕಿತ್ಸೆ ಪಡೆದರೇ ಅನಗತ್ಯವಾಗಿ ಟೆಸ್ಟ್‌ ಮಾಡಿಸುವ ಅವಶ್ಯಕತೆ ಇರೋದಿಲ್ಲ.” ಎಂದರು.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

5 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

6 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

1 day ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 days ago