ಸೂಕ್ತ ಸಮಯದಲ್ಲಿ ಸಿಗದ ಚಿಕಿತ್ಸೆ: 9 ತಿಂಗಳ ತುಂಬು ಗರ್ಭಿಣಿ ಆಸ್ಪತ್ರೆಯಲ್ಲಿ ಸಾವು: ಮುಗಿಲು ಮುಟ್ಟಿದ ಕುಟುಂಬಸ್ಥರ‌ ಆಕ್ರಂದನ

ದೊಡ್ಡಬಳ್ಳಾಪುರ ತಾಯಿ-ಮಗು ಆಸ್ಪತ್ರೆಯಲ್ಲಿ ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೆ 9 ತಿಂಗಳ ತುಂಬು ಗರ್ಭಿಣಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ ನಡೆದಿದೆ.

ತಾಯಿ‌ ಹೊಟ್ಟೆಯಿಂದ ಪ್ರಪಂಚಕ್ಕೆ ಬರುವ ಮುನ್ನವೇ ತಾಯಿ ಹೊಟ್ಟೆಯಲ್ಲೇ ಮಗು ಸಾವನ್ನಪ್ಪಿರುವ ಘೋರ ಘಟನೆ ನಡೆದಿದೆ.

ದೊಡ್ಡಬಳ್ಳಾಪುರದ ಬಸವೇಶ್ವರನಗರದ ನಿವಾಸಿ ಸುಷ್ಮಾ ಮಹೇಶ್ (24) ದುರಂತ ಸಾವಗೀಡಾದ ತುಂಬು ಗರ್ಭಿಣಿ.

ಆಕೆಗಿದು ಮೊದಲ ಮಗು, ಇನ್ನೇನು ಮನೆಗೆ ಹೊಸ ಅತಿಥಿಯ ಆಗಮನ ಆಗುತ್ತದೆ ಎಂದು ಕುಟುಂಬಸ್ಥರು ಖುಷಿ ಖುಷಿಯಾಗಿದ್ದರು. ಆದರೆ ದೊಡ್ಡಬಳ್ಳಾಪುರ ತಾಯಿ-ಮಗು ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಎರಡು ಜೀವಗಳನ್ನ ಬಲಿ ಪಡೆದಿದೆ. ತಾಯಿ ಮತ್ತು ಮಗುವನ್ನ ಕಳೆದುಕೊಂಡ ಕುಟುಂಬಸ್ಥರ ಅಕ್ರಂದನ ಆಸ್ಪತ್ರೆ ಅವರಣದಲ್ಲಿ ಮುಗಿಲು ಮುಟ್ಟಿದೆ.

ಮೃತ ಸುಷ್ಮಾಳನ್ನ ಬೆಂಗಳೂರಿನ ಮಹೇಶ್ ಎಂಬುವರಿಗೆ ಮದುವೆ ಮಾಡಿಕೊಡಲಾಗಿತ್ತು, ಚೊಚ್ಚಲ ಹೆರಿಗೆಗಾಗಿ ಆಕೆ ತವರು ಮನೆಯಾದ ದೊಡ್ಡಬಳ್ಳಾಪುರಕ್ಕೆ ಬಂದಿದ್ದರು. ದೊಡ್ಡಬಳ್ಳಾಪುರದ ತಾಯಿ-ಮಗು ಆಸ್ಪತ್ರೆಯಲ್ಲಿ ರೆಗ್ಯೂಲರ್ ಚೆಕಪ್ ಮಾಡಿಸುತ್ತಿದ್ದರು. ಈಗಾಗಲೇ 9 ತಿಂಗಳು ತುಂಬಿದ ಹಿನ್ನಲೆ, ಹೆರಿಗೆ ನೋವು ಕಾಣಿಸಿಕೊಂಡ ಕಾರಣ ನಿನ್ನೆ ಸುಷ್ಮಾಳನ್ನ ಕುಟುಂಬಸ್ಥರು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ.

ಆಕೆಯನ್ನ ಪರೀಕ್ಷೆ ಮಾಡಿದ ವೈದ್ಯರು ಕೇವಲ ಒಂದು ಬಿಪಿ ಮಾತ್ರೆ ಕೊಟ್ಟು ಏನು ಆಗುವುದಿಲ್ಲ ಮನೆಗೆ ಹೋಗಿ ಎಂದು ಕಳಿಸಿದ್ದಾರೆ. ನನಗೆ ನೋವು ತಡೆಯಲಾಗುತ್ತಿಲ್ಲ ನನ್ನನ್ನು ಅಡ್ಮಿಟ್ ಮಾಡಿಕೊಳ್ಳಿ ಎಂದು ಬೇಡಿಕೊಂಡರು ವೈದ್ಯರು ಏನು ಆಗುವುದಿಲ್ಲ ನೋವು ತಡೆಯಬೇಕು ಎಂದು ಹೇಳಿ ಕಳಿಸಿದ್ದರು ಮೃತರ ಕುಟುಂಬಸ್ಥರು ಆರೋಪಿಸಿದ್ದಾರೆ.

 ಇಂದು ಮುಂಜಾನೆ ಸಮಯದಲ್ಲಿ ನೋವು ತಾಳಲಾರದೆ ಸುಷ್ಮಾ ರನ್ನು ಕುಟುಂಬಸ್ಥರು ಆಸ್ಪತ್ರೆಗೆ ಕರೆತಂದಾಗ ಯಾವುದೇ ವೈದ್ಯರು ಆಸ್ಪತ್ರೆಯಲ್ಲಿ ಇರಲಿಲ್ಲ, ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ಮಗಳು ಮತ್ತು ಆಕೆಯ ಹೊಟ್ಟೆಯಲ್ಲಿದ್ದ ಮಗು ಸಾವನ್ನಪ್ಪಿದೆ ಎಂದು ಮೃತಳ ತಾಯಿ ಭಾಗ್ಯಮ್ಮ ಕಣ್ಣೀರು ಹಾಕಿದ್ದಾರೆ.

ಆಶಾ ಕಾರ್ಯಕರ್ತೆ ಪ್ರೇಮ ಕುಮಾರಿ ಮಾತನಾಡಿ, ನಿನ್ನೆ ಆಸ್ಪತ್ರೆಗೆ ಬಂದಾಗ ಬಿಪಿ ಹೆಚ್ಚಾಗಿದೆ ಎಂದು ವೈದ್ಯರು ಬಿಪಿ ಮಾತ್ರೆ ಕೊಟ್ಟು ಸುಷ್ಮಾರನ್ನು ಮನೆಗೆ ಕಳಿಸಿಕೊಟ್ಟಿದ್ದರು . ಇಂದು ಮುಂಜಾನೆ ಈ ಅವಘಡ ಸಂಭಾವಿಸಿದೆ ಎಂದಿದ್ದಾರೆ ಎಂದಿದ್ದಾರೆ.

ಸ್ಥಳೀಯರಾದ ಮುನಿಮಾರೇಗೌಡ ಮಾತನಾಡಿ, ಆಸ್ಪತ್ರೆಯಲ್ಲಿ ವೈದ್ಯರೇ ಇಲ್ಲದೆ ಇರುವುದು ಇಂತಹ ಅನಾಹುತಕ್ಕೆ ಕಾರಣವಾಗಿದೆ, ಬಡವರು ಮಾತ್ರ ಸರ್ಕಾರಿ ಆಸ್ಪತ್ರೆ ಬರುತ್ತಾರೆ, ಬಡವರ ಜೀವಕ್ಕೆ ಬೆಲೆ ಇಲ್ಲವೇ, ಇಷ್ಟು ದೊಡ್ಡದಾದ ಆಸ್ಪತ್ರೆಯಲ್ಲಿ ವೈದ್ಯರಿಲ್ಲ ಇಲ್ಲದೆ ಇರುವುದು ನೋವಿನ ಸಂಗತಿ, ತಾಯಿ ಮಗುವಿನ ಸಾವಿಗೆ ಆಸ್ಪತ್ರೆಯ ಅವ್ಯವಸ್ಥೆಯೇ ಕಾರಣ ಎಂದು ಅಕ್ರೋಶ ವ್ಯಕ್ತಪಡಿಸಿದರು.

Ramesh Babu

Journalist

Recent Posts

ಬಸ್ಸಿನಲ್ಲಿ 55 ಲಕ್ಷ ಹಣ ಮತ್ತು ಬಿಲ್ಡಿಂಗ್ ಗೆ ಸಂಬಂಧಿಸಿದ ದಾಖಲಾತಿಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರ ಬಂಧನ

ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…

40 minutes ago

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಒಂದೇ ಗ್ರಾಮದ ನಾಲ್ವರು ಯುವಕರು ದುರ್ಮರಣ: ಮುಗಿಲು ಮುಟ್ಟಿದ ಇಬ್ಬರು ಮಕ್ಕಳನ್ನು ಕಳೆದುಕೊಂಡ ತಾಯಿಯ ಆಕ್ರಂದನ: ಇಡೀ ಗ್ರಾಮದಲ್ಲಿ ಮನೆ ಮಾಡಿದ ಸೂತಕದ ವಾತಾವರಣ

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…

4 hours ago

ಅಭಿಮಾನಿಗಳ ಅತಿರೇಕ….ಯಾಕಪ್ಪಾ, ಏನಾಗಿದೆ ಸಮಸ್ಯೆ…?

ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…

5 hours ago

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

1 day ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

1 day ago

ಖಾಸಗಿ ಬಸ್ ಲಾರಿಗೆ ಡಿಕ್ಕಿ: ಹೊತ್ತಿ ಉರಿದ ಬಸ್: 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನ

ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…

1 day ago