ಸೂಕ್ಷ್ಮ, ಅತಿಸೂಕ್ಷ್ಮ ತರಹದ ರೋಗ ಪತ್ತೆಯ 32 ಸ್ಲೈಸ್ ಸಿಟಿ ಸ್ಕ್ಯಾನ್ ಸೌಲಭ್ಯ ಇನ್ನು ಮುಂದೆ ನಗರದಲ್ಲಿ ಲಭ್ಯ

ಹಾರ್ಮೋನ್, ರಕ್ತನಾಳಗಳಲ್ಲಿ ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ತರಹದ ನಿಖರ ರೋಗ ಪತ್ತೆ ಹಚ್ಚುವ 32 ಸ್ಲೈಸ್ ಸಿಟಿ ಸ್ಕ್ಯಾನ್ ಸೌಲಭ್ಯ ಇನ್ನು ಮುಂದೆ ನಗರದಲ್ಲಿ ಸಿಗಲಿದೆ.

ನಗರದ ಡಿ-ಕ್ರಾಸ್ ರಸ್ತೆಯ ಐಸಿಐಸಿಐ ಬ್ಯಾಂಕ್ ಸಮೀಪ ಬುಧವಾರ ನೂತನವಾಗಿ ಪ್ರಾರಂಭವಾದ ಧನ್ವಂತರಿ ಹೆಲ್ತ್ ಸರ್ವೀಸಸ್ ಅಂಗಸಂಸ್ಥೆಯಾದ ಶ್ರೇಷ್ಠ ಡಯಾಗ್ನೋಸ್ಟಿಕ್ ಸಂಸ್ಥೆಯಲ್ಲಿ ಅತ್ಯಾಧುನಿಕ ಸ್ಕ್ಯಾನಿಂಗ್, ಚಿಕಿತ್ಸಾ ವಿಧಾನ ಲಭ್ಯವಾಗಲಿದೆ.

ಬಡವರು, ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ 2D, 3D ಹಾಗೂ 4D ಅಲ್ಟ್ರಾ‌ಸೌಂಡ್ ಸ್ಕ್ಯಾನಿಂಗ್‌ ವ್ಯವಸ್ಥೆ,  ಕಲರ್ ಡಾಪ್ಲರ್, 2D ಎಕೋ, ಸಿಟಿ‌ಸ್ಕ್ಯಾನ್, ಎಂಆರ್ ಐ, ಯುಎಸ್ ಜಿ, ಸಿಟಿ ಮಾರ್ಗದರ್ಶಿ ಕಾರ್ಯವಿಧಾನ, ಎಕ್ಸ್ ರೇ, ರೇಡಿಯೋಗ್ರಾಫಿ ಹಾಗೂ ಸ್ವಯಂ ಚಾಲಿತ ಪ್ರಯೋಗಾಲಯದ ಸೇವೆ ಸಿಗಲಿದೆ.

ಕ್ಲಿಷ್ಟಕರ ರೋಗಪತ್ತೆ ವಿಧಾನಗಳಿಗಾಗಿ ಸಾರ್ವಜನಿಕರು ಬೆಂಗಳೂರಿಗೆ ಅಲೆಯಬೇಕಿತ್ತು, ಆದರೆ, ದೊಡ್ಡಬಳ್ಳಾಪುರದಲ್ಲಿ ಇದೇ ಪ್ರಪ್ರಥಮ ಬಾರಿಗೆ 2D ಅಲ್ಟ್ರಾ ಸೌಂಡ್ ಯಂತ್ರ ಒಳಗೊಂಡ ಡಯಾಗ್ನೋಸ್ಟಿಕ್ ಸೇವೆಯನ್ನು ನಮ್ಮ ಶ್ರೇಷ್ಠ ಡಯಾಗ್ನೋಸ್ಟಿಕ್ ಸಂಸ್ಥೆ ಒದಗಿಸಲಿದೆ. ಇದರ ಜೊತೆಗೆ 32 ಸ್ಲೈಸ್ ಸಿಟಿ‌ ಸ್ಕ್ಯಾನ್ ಯಂತ್ರ 300mA ಕ್ಷ-ಕಿರಣ ಯಂತ್ರ ಹಾಗೂ ರಕ್ತ, ಹಾರ್ಮೋನುಗಳ ಅಧ್ಯಯನ ನಡೆಸುವ ಸ್ವಯಂ ಚಾಲಿತ‌ ಲ್ಯಾಬ್ ವ್ಯವಸ್ಥೆ ನಗರದಲ್ಲಿ ಪರಿಚಯಿಸಲಾಗಿದೆ ಎಂದು ಡಯಾಗ್ನೋಸ್ಟಿಕ್ ಕೇಂದ್ರ ರೇಡಿಯಾಲಜಿಸ್ಟ್ ಡಾ. ಎಸ್. ರಕ್ಷಿತ್ ತಿಳಿಸಿದರು.

ಅತ್ಯಾಧುನಿಕ ಸ್ಕ್ಯಾನಿಂಗ್ ಸೌಲಭ್ಯದ ಜೊತೆಗೆ ಹೃದಯ, ಶ್ವಾಸಕೋಶ ಹಾಗೂ ಗ್ಯಾಸ್ಟ್ರೋ ಎಂಟರಾಲಜಿಗೆ ಸಂಬಂಧಿಸಿ ವಿಶೇಷ ಚಿಕಿತ್ಸೆ ಕೂಡ ನೀಡಲಾಗುವುದು, ಸ್ಕ್ಯಾನಿಂಗ್ ಫಲಿತಾಂಶ ಪಡೆಯಲು ಇಲ್ಲಿ ದಿನಗಟ್ಟಲೇ ಕಾಯಬೇಕಾದ ಅವಶ್ಯಕತೆ ಇಲ್ಲ. ಯಾವುದೇ ವಿಳಂಬವಿಲ್ಲದಂತೆ ತ್ವರಿತವಾಗಿ ಸ್ಪಷ್ಟ, ಸ್ಥಿರ ಹಾಗೂ ಸಕಾಲಿಕವಾದ ವರದಿ ನೀಡಲಾಗುವುದು. ದೊಡ್ಡಬಳ್ಳಾಪುರದ ನಾಗರಿಕರು ಶ್ರೇಷ್ಠ ಡಯಾಗ್ನೋಸ್ಟಿಕ್ ಕೇಂದ್ರದ ಪ್ರಯೋಜನ ಪಡೆಯಬೇಕು ಎಂದು ಮನವಿ ಮಾಡಿದರು.

ಶ್ರೇಷ್ಠ ಡಯಾಗ್ನೋಸ್ಟಿಕ್ ಕೇಂದ್ರದಲ್ಲಿ ರೇಡಿಯಾಲಜಿಸ್ಟ್‌ಗಳಾದ ಡಾ.ಎಸ್.ರಕ್ಷಿತ್, ಡಾ.ಎಂ.ವಿನಯ್, ತಜ್ಞ ವೈದ್ಯರಾದ‌ ಡಾ.ದತ್ತ ಎಂ. ತೊಗಲೂರೆ, ಡಾ.ಸಚಿನ್, ಡಾ.ಎಂ.ಸಂಗಮೇಶ್ ತೊಗಲೂರೆ ಹಾಗೂ ಎಂ.ಜಿ.ಪ್ರಕಾಶ್ ಅವರು ರೋಗಿಗಳ ಸೇವೆಗೆ ಲಭ್ಯವಿರಲಿದ್ದಾರೆ.

Ramesh Babu

Journalist

Share
Published by
Ramesh Babu

Recent Posts

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ: ನೀರಿನ ಸಮಸ್ಯೆ ನೀಗಿಸುವಂತೆ ನಗರಸಭೆ ಸದಸ್ಯರ ಒತ್ತಾಯ

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ ಆರಂಭವಾಗಿದ್ದು, ನಗರಸಭೆಯಿಂದ ವಾರಕ್ಕೊಮ್ಮೆ ಕೇವಲ ಅರ್ಧ ಗಂಟೆ ನೀರು ಬಿಡುತ್ತಿರುವುದು ಸರಿಯಲ್ಲ.…

11 hours ago

ಗೃಹ ಅನಿಲ ಸೀಮಿತ ಬಳಕೆಗೆ ಡಿಸಿ ಸಲಹೆ: ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ.ಕೆ ಎನ್ ಅನುರಾಧಾ

ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…

12 hours ago

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…

23 hours ago

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

2 days ago