ಸೂಕ್ಷ್ಮ, ಅತಿಸೂಕ್ಷ್ಮ ತರಹದ ರೋಗ ಪತ್ತೆಯ 32 ಸ್ಲೈಸ್ ಸಿಟಿ ಸ್ಕ್ಯಾನ್ ಸೌಲಭ್ಯ ಇನ್ನು ಮುಂದೆ ನಗರದಲ್ಲಿ ಲಭ್ಯ

ಹಾರ್ಮೋನ್, ರಕ್ತನಾಳಗಳಲ್ಲಿ ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ತರಹದ ನಿಖರ ರೋಗ ಪತ್ತೆ ಹಚ್ಚುವ 32 ಸ್ಲೈಸ್ ಸಿಟಿ ಸ್ಕ್ಯಾನ್ ಸೌಲಭ್ಯ ಇನ್ನು ಮುಂದೆ ನಗರದಲ್ಲಿ ಸಿಗಲಿದೆ.

ನಗರದ ಡಿ-ಕ್ರಾಸ್ ರಸ್ತೆಯ ಐಸಿಐಸಿಐ ಬ್ಯಾಂಕ್ ಸಮೀಪ ಬುಧವಾರ ನೂತನವಾಗಿ ಪ್ರಾರಂಭವಾದ ಧನ್ವಂತರಿ ಹೆಲ್ತ್ ಸರ್ವೀಸಸ್ ಅಂಗಸಂಸ್ಥೆಯಾದ ಶ್ರೇಷ್ಠ ಡಯಾಗ್ನೋಸ್ಟಿಕ್ ಸಂಸ್ಥೆಯಲ್ಲಿ ಅತ್ಯಾಧುನಿಕ ಸ್ಕ್ಯಾನಿಂಗ್, ಚಿಕಿತ್ಸಾ ವಿಧಾನ ಲಭ್ಯವಾಗಲಿದೆ.

ಬಡವರು, ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ 2D, 3D ಹಾಗೂ 4D ಅಲ್ಟ್ರಾ‌ಸೌಂಡ್ ಸ್ಕ್ಯಾನಿಂಗ್‌ ವ್ಯವಸ್ಥೆ,  ಕಲರ್ ಡಾಪ್ಲರ್, 2D ಎಕೋ, ಸಿಟಿ‌ಸ್ಕ್ಯಾನ್, ಎಂಆರ್ ಐ, ಯುಎಸ್ ಜಿ, ಸಿಟಿ ಮಾರ್ಗದರ್ಶಿ ಕಾರ್ಯವಿಧಾನ, ಎಕ್ಸ್ ರೇ, ರೇಡಿಯೋಗ್ರಾಫಿ ಹಾಗೂ ಸ್ವಯಂ ಚಾಲಿತ ಪ್ರಯೋಗಾಲಯದ ಸೇವೆ ಸಿಗಲಿದೆ.

ಕ್ಲಿಷ್ಟಕರ ರೋಗಪತ್ತೆ ವಿಧಾನಗಳಿಗಾಗಿ ಸಾರ್ವಜನಿಕರು ಬೆಂಗಳೂರಿಗೆ ಅಲೆಯಬೇಕಿತ್ತು, ಆದರೆ, ದೊಡ್ಡಬಳ್ಳಾಪುರದಲ್ಲಿ ಇದೇ ಪ್ರಪ್ರಥಮ ಬಾರಿಗೆ 2D ಅಲ್ಟ್ರಾ ಸೌಂಡ್ ಯಂತ್ರ ಒಳಗೊಂಡ ಡಯಾಗ್ನೋಸ್ಟಿಕ್ ಸೇವೆಯನ್ನು ನಮ್ಮ ಶ್ರೇಷ್ಠ ಡಯಾಗ್ನೋಸ್ಟಿಕ್ ಸಂಸ್ಥೆ ಒದಗಿಸಲಿದೆ. ಇದರ ಜೊತೆಗೆ 32 ಸ್ಲೈಸ್ ಸಿಟಿ‌ ಸ್ಕ್ಯಾನ್ ಯಂತ್ರ 300mA ಕ್ಷ-ಕಿರಣ ಯಂತ್ರ ಹಾಗೂ ರಕ್ತ, ಹಾರ್ಮೋನುಗಳ ಅಧ್ಯಯನ ನಡೆಸುವ ಸ್ವಯಂ ಚಾಲಿತ‌ ಲ್ಯಾಬ್ ವ್ಯವಸ್ಥೆ ನಗರದಲ್ಲಿ ಪರಿಚಯಿಸಲಾಗಿದೆ ಎಂದು ಡಯಾಗ್ನೋಸ್ಟಿಕ್ ಕೇಂದ್ರ ರೇಡಿಯಾಲಜಿಸ್ಟ್ ಡಾ. ಎಸ್. ರಕ್ಷಿತ್ ತಿಳಿಸಿದರು.

ಅತ್ಯಾಧುನಿಕ ಸ್ಕ್ಯಾನಿಂಗ್ ಸೌಲಭ್ಯದ ಜೊತೆಗೆ ಹೃದಯ, ಶ್ವಾಸಕೋಶ ಹಾಗೂ ಗ್ಯಾಸ್ಟ್ರೋ ಎಂಟರಾಲಜಿಗೆ ಸಂಬಂಧಿಸಿ ವಿಶೇಷ ಚಿಕಿತ್ಸೆ ಕೂಡ ನೀಡಲಾಗುವುದು, ಸ್ಕ್ಯಾನಿಂಗ್ ಫಲಿತಾಂಶ ಪಡೆಯಲು ಇಲ್ಲಿ ದಿನಗಟ್ಟಲೇ ಕಾಯಬೇಕಾದ ಅವಶ್ಯಕತೆ ಇಲ್ಲ. ಯಾವುದೇ ವಿಳಂಬವಿಲ್ಲದಂತೆ ತ್ವರಿತವಾಗಿ ಸ್ಪಷ್ಟ, ಸ್ಥಿರ ಹಾಗೂ ಸಕಾಲಿಕವಾದ ವರದಿ ನೀಡಲಾಗುವುದು. ದೊಡ್ಡಬಳ್ಳಾಪುರದ ನಾಗರಿಕರು ಶ್ರೇಷ್ಠ ಡಯಾಗ್ನೋಸ್ಟಿಕ್ ಕೇಂದ್ರದ ಪ್ರಯೋಜನ ಪಡೆಯಬೇಕು ಎಂದು ಮನವಿ ಮಾಡಿದರು.

ಶ್ರೇಷ್ಠ ಡಯಾಗ್ನೋಸ್ಟಿಕ್ ಕೇಂದ್ರದಲ್ಲಿ ರೇಡಿಯಾಲಜಿಸ್ಟ್‌ಗಳಾದ ಡಾ.ಎಸ್.ರಕ್ಷಿತ್, ಡಾ.ಎಂ.ವಿನಯ್, ತಜ್ಞ ವೈದ್ಯರಾದ‌ ಡಾ.ದತ್ತ ಎಂ. ತೊಗಲೂರೆ, ಡಾ.ಸಚಿನ್, ಡಾ.ಎಂ.ಸಂಗಮೇಶ್ ತೊಗಲೂರೆ ಹಾಗೂ ಎಂ.ಜಿ.ಪ್ರಕಾಶ್ ಅವರು ರೋಗಿಗಳ ಸೇವೆಗೆ ಲಭ್ಯವಿರಲಿದ್ದಾರೆ.

Ramesh Babu

Journalist

Recent Posts

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

9 hours ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

9 hours ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

12 hours ago

ಆಸ್ತಿ ವಿವರ ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಕೆ ವಿಚಾರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್‌ ಆದೇಶ ನೀಡಿದೆ. ಚುನಾವಣಾ ಆಯೋಗ…

14 hours ago

ಜೆಡಿಎಸ್ ಕಾರ್ಯಕರ್ತರನ್ನ ಮುಟ್ಟಬೇಡಿ- ಶಾಸಕ ಧೀರಜ್ ಮುನಿರಾಜುಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಖಡಕ್ ಮಾತು: ಮುಂದಿನ 20 ದಿನದೊಳಗಾಗಿ ತಾಲೂಕು ಪದಾಧಿಕಾರಿಗಳ ನೇಮಕ

ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…

16 hours ago

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

21 hours ago