ಸೂಕ್ಷ್ಮ ನೀರಾವರಿ ಘಟಕ ಅಳವಡಿಸಿಕೊಳ್ಳಲು ಸಹಾಯಧನಕ್ಕಾಗಿ ರೈತರಿಂದ ಅರ್ಜಿ ಆಹ್ವಾನ

ಕೃಷಿ ಇಲಾಖೆ ವತಿಯಿಂದ ನೀರಿನ ಮಿತಿ ಬಳಕೆಯಿಂದ ಅಧಿಕ ಇಳುವರಿ ಪಡೆಯಲು ಹಾಗೂ ಜಿಲ್ಲೆಯಲ್ಲಿ ಲಘು ನೀರಾವರಿ ಪದ್ಧತಿಯನ್ನು ಜನಪ್ರಿಯಗೊಳಿಸಲು ರಾಜ್ಯಾದ್ಯಂತ ಕೃಷಿ ಚಟುವಟಿಕೆಗಳಿಗೆ ಸಹಾಯವಾಗುವಂತೆ ಸೂಕ್ಷ್ಮ ನೀರಾವರಿ (ಹನಿ ನೀರಾವರಿ ಮತ್ತು ತುಂತುರು ನೀರಾವರಿ) ಘಟಕಗಳನ್ನು ಅಳವಡಿಸಿಕೊಳ್ಳಲು ಎಲ್ಲಾ ವರ್ಗದ ರೈತರಿಗೆ ಕೃಷಿ ಇಲಾಖೆಯಿಂದ ಶೇ.90ರ ರಿಯಾಯಿತಿಯಲ್ಲಿ ಸೌಲಭ್ಯ ಒದಗಿಸಲಾಗುತ್ತಿದ್ದು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

*ಸೌಲಭ್ಯ ಪಡೆಯಲು ಷರತ್ತುಗಳು*
ಹನಿ ಮತ್ತು ತುಂತುರು ನೀರಾವರಿ ಘಟಕಗಳ ಅಳವಡಿಕೆಗೆ ಎಲ್ಲಾ ವರ್ಗದ ರೈತರಿಗೆ 5.0 ಹೆಕ್ಟೇರ್ ಪ್ರದೇಶದವರೆಗೆ ಸಹಾಯಧನ ನೀಡಲಾಗುತ್ತದೆ. ಮೊದಲ ಎರಡು ಹೆಕ್ಟೇರ್ ಪ್ರದೇಶದವರೆಗೆ ಶೇ.90 ರಷ್ಟು ಸಹಾಯಧನ ಮತ್ತು ಎರಡು ಹೆಕ್ಟೇರ್ ಗಿಂತ ಮೇಲ್ಪಟ್ಟು 5.0 ಹೆಕ್ಟೇರ್ ವರೆಗೆ ಶೇ.45 ರಷ್ಟು ಸಹಾಯಧನವನ್ನು ಸಾಮಾನ್ಯ ವರ್ಗದ ರೈತರಿಗೆ ಮತ್ತು ಶೇ.55 ರಷ್ಟು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ರೈತರಿಗೆ ನೀಡಲು ಅವಕಾಶವಿದೆ.

ಸರ್ಕಾರದಿಂದ ಅನುಮೋದನೆಗೊಂಡಿರುವ ಸಂಸ್ಥೆಗಳಿಂದ ಘಟಕಗಳನ್ನು ಅಳವಡಿಸಿಕೊಂಡಲ್ಲಿ ಮಾತ್ರ ಸಹಾಯಧನ ದೊರೆಯುತ್ತದೆ.

ಸೂಕ್ಷ್ಮ ನೀರಾವರಿ ಘಟಕವನ್ನು ಸಹಾಯಧನದಡಿ ಪಡೆಯಲು ಸಾಮಾನ್ಯ ವರ್ಗದ ರೈತರಿಗೆ ಒಮ್ಮೆ ಮಾತ್ರ ಹಾಗೂ ಪರಿಶಿಷ್ಟ ಜಾತಿ ರೈತರಿಗೆ ಏಳು ವರ್ಷಗಳಿಗೊಮ್ಮೆ ಮಾತ್ರ ಅವಕಾಶವಿರುತ್ತದೆ. ಏಳು ವರ್ಷಗಳ ಹಿಂದೆ, ಸೂಕ್ಷ್ಮನೀರಾವರಿ ಸವಲತ್ತು ಪಡೆದ ಪರಿಶಿಷ್ಟ ಜಾತಿ ರೈತರಿಗೆ ಮತ್ತೊಮ್ಮೆ ಸವಲತ್ತು ಪಡೆಯಲು ರೈತರಿಗೆ ಆದ್ಯತೆ ಮೇಲೆ ನೀಡಲಾಗುವುದು.

‌‌‌ರೈತರು ಸಹಾಯಧನದಡಿ ಸವಲತ್ತನ್ನು ಪಡೆಯಲು ನಿಗದಿತ ನಮೂನೆಯಲ್ಲಿ ಸಂಬಂಧಿಸಿದ ದಾಖಲೆಗಳೊಂದಿಗೆ-ಪಹಣಿ/ಹಿಡುವಳಿ ಪತ್ರ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ರೈತರಿಗೆ ಜಾತಿ ಪ್ರಮಾಣ ಪತ್ರ. ಮೊಬೈಲ್ ಸಂಖ್ಯೆ, ಚೆಕ್ಕುಬಂದಿ, ನೀರಿನ ಲಭ್ಯತೆ ಪ್ರಮಾಣ ಪತ್ರ ಆಧಾರ ಕಾರ್ಡ್ ಪ್ರತಿ, ಮತದಾರರ ಗುರುತಿನ ಚೀಟಿ, ತೋಟಗಾರಿಕೆ/ರೇಷ್ಮೆ ಇಲಾಖೆಯಿಂದ ಸಹಾಯಧನ ಪಡೆದಿರುವುದಿಲ್ಲ ಎಂಬ ಪ್ರಮಾಣ ಪತ್ರ, ಬ್ಯಾಂಕ್ ಖಾತೆ ಸಂಖ್ಯೆ, ಐ.ಎಫ್.ಎಸ್.ಸಿ.ಕೋಡ್ ಸಂಖ್ಯೆ, 100/- ರೂ ಛಾಪಾ ಕಾಗದದ ಮೇಲೆ ಮುಚ್ಚಳಿಕೆ ಪತ್ರ ರೈತ ಸಂಪರ್ಕ ಕೇಂದ್ರದ ಮುಖ್ಯಸ್ಥರಿಗೆ ಸಲ್ಲಿಸುವುದು.

ಸೂಕ್ಷ್ಮ ನೀರಾವರಿ ಘಟಕಗಳನ್ನು ಕೃಷಿಗೆ ಮಾತ್ರ ಉಪಯೋಗಿಸಲಾಗುವುದು ಎಂದು ರೈತರು ಘೋಷಣಾ ಪತ್ರ ನೀಡಬೇಕು. ರೈತರು ಕಡ್ಡಾಯವಾಗಿ FID ಹೊಂದಿರತಕ್ಕದ್ದು.

ಇಲಾಖೆಯಿಂದ ಸೂಕ್ಷ್ಮ ನೀರಾವರಿ ಘಟಕಗಳನ್ನು ಪಡೆಯಲು ಹೆಚ್ಚಿನ ವಿವರಗಳಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದೆ.

Ramesh Babu

Journalist

Recent Posts

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

4 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

4 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

6 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

7 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

8 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

15 hours ago